Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿವಿಪ್ಯಾಟ್‌ಗಳಲ್ಲಿ ಸಮಸ್ಯೆಯಿದೆ: ಮಾಜಿ...

ವಿವಿಪ್ಯಾಟ್‌ಗಳಲ್ಲಿ ಸಮಸ್ಯೆಯಿದೆ: ಮಾಜಿ ಚುನಾವಣಾ ಆಯುಕ್ತ ನವೀನ್ ಚಾವ್ಲಾ

ವಾರ್ತಾಭಾರತಿವಾರ್ತಾಭಾರತಿ5 Aug 2018 7:36 PM IST
share
ವಿವಿಪ್ಯಾಟ್‌ಗಳಲ್ಲಿ ಸಮಸ್ಯೆಯಿದೆ: ಮಾಜಿ ಚುನಾವಣಾ ಆಯುಕ್ತ ನವೀನ್ ಚಾವ್ಲಾ

 ಹೊಸದಿಲ್ಲಿ, ಆ. 5: ಇವಿಎಂಗಳನ್ನು ತಿರುಚಲು ಸಾಧ್ಯವಿಲ್ಲ. ಸಮಸ್ಯೆ ಇರುವುದು ವಿವಿಪ್ಯಾಟ್‌ಗಳಲ್ಲಿ ಎಂದು ಮಾಜಿ ಚುನಾವಣಾ ಆಯುಕ್ತ ನವೀನ್ ಚಾವ್ಲಾ ಹೇಳಿದ್ದಾರೆ. ಕಳವಳಕ್ಕೆ ಕಾರಣವಾಗಿರುವುದು ವಿವಿಎಂಗಳು ಅಲ್ಲ. ಬದಲಾಗಿ ವಿವಿಪಾಟ್‌ನಲ್ಲಿ ವರದಿಯಾಗಿರುವ ತಾಂತ್ರಿಕ ದೋಷ ಎಂದು ಅವರು ಶನಿವಾರ ಹೇಳಿದ್ದಾರೆ. ತಮ್ಮ ಮತ ತಾವು ಆಯ್ಕೆ ಮಾಡಿದ ಅಭ್ಯರ್ಥಿಗೆ ಬಿದ್ದಿದೆಯೇ ಎಂಬುದನ್ನು ಪರಿಶೀಲಿಸಲು ಮತದಾರರಿಗೆ ಅನುಕೂಲವಾಗಲು ಕಳೆದ ವರ್ಷ ಹಿಮಾಚಲ ಪ್ರದೇಶ ಹಾಗೂ ಗುಜರಾತ್‌ನಲ್ಲಿ ವಿವಿಪ್ಯಾಟ್‌ಗಳನ್ನು ಹೊಂದಿರುವ ಇವಿಎಂಗಳನ್ನು ಬಳಸಲಾಗಿತ್ತು. ಮತದಾನದ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಖಾತರಿ ನೀಡುವ ಉದ್ದೇಶವನ್ನು ವಿವಿಪ್ಯಾಟ್‌ಗಳು ಹೊಂದಿತ್ತು. 2019ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್‌ಗೆ ಮರಳುವಂತೆ ಗುರುವಾರ 17ಕ್ಕೂ ಅಧಿಕ ಪ್ರತಿಕ್ಷಗಳು ಮತ್ತೆ ಆಗ್ರಹಿಸಿವೆ. ವಿವಿಪ್ಯಾಟ್‌ಗಳನ್ನು ಹೊಂದಿದ ಇವಿಎಂಗಳು ನಂಬರ್ಲಹವಲ್ಲ. ತಮ್ಮ ಬೇಡಿಕೆ ಸಲ್ಲಿಸಲು ಮುಂದಿನ ವಾರ ಚುನಾವಣಾ ಆಯುಕ್ತರನ್ನು ಭೇಟಿ ಮಾಡಲಾಗುವುದು ಎಂದು ಪ್ರತಿಪಕ್ಷಗಳ ನಾಯಕರು ಹೇಳಿದ್ದಾರೆ. ಇವಿಎಂಗಳ ಕಾರ್ಯಕ್ಷಮತೆ ಸಂಶಯಾಸ್ಪದ ಅಲ್ಲ ಎಂದು ಚಾವ್ಲಾ ಹೇಳಿದ್ದಾರೆ. ‘‘ಇವಿಎಂಗಳನ್ನು ತಿರುಚಲು ಸಾಧ್ಯವಿಲ್ಲ. 2004ರ ಸಾರ್ವತ್ರಿಕ ಚುನಾವಣೆಯಲ್ಲಿ ಸಮಗ್ರವಾಗಿ ಬಳಸುವ ಮುನ್ನ ಹಲವು ಚುನಾವಣೆಗಳಲ್ಲಿ ಇವಿಎಂಗಳನ್ನು ಬಳಸಲಾಗಿದೆ. ತರುವಾಯ 2009 ಹಾಗೂ 2014ರ ಸಾರ್ವತ್ರಿಕ ಚುನಾವಣೆಗಳಲ್ಲಿ ಕೂಡ ಬಳಸಲಾಗಿದೆ’’ ಎಂದು ಚಾವ್ಲಾ ಹೇಳಿದ್ದಾರೆ. ಉತ್ತರಪ್ರದೇಶದ ಕೈರಾನಾ ಹಾಗೂ ಮಹಾರಾಷ್ಟ್ರದ ಭಂಡಾರಗೊಂಡಿಯಾದಲ್ಲಿ ನಡೆದ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಬಳಸಲಾಗಿದ್ದ ವಿವಿಪ್ಯಾಟ್‌ಗಳಲ್ಲಿ ತಾಂತ್ರಿಕ ದೋಷ ವರದಿಯಾಗಿರುವುದನ್ನು ಉಲ್ಲೇಖಿಸಿದ ಚಾವ್ಲಾ, ‘‘ನನ್ನ ಪ್ರಕಾರ ಸಮಸ್ಯೆ ವಿವಿಪ್ಯಾಟ್‌ಗಳಲ್ಲಿದೆ. ಕೆಲವು ಚುನಾವಣೆಯಲ್ಲಿ ಪ್ರಯೋಗಾರ್ಥವಾಗಿ ಆಯ್ಕೆಯ ಸ್ಥಳಗಳಲ್ಲಿ ಬಳಸಿದ ಬಳಿಕ ಇತ್ತೀಚೆಗೆ ವಿವಿಪ್ಯಾಟ್‌ಗಳನ್ನು ಬಳಸಲು ಆರಂಭಿಸಲಾಯಿತು. ವಿವಿಪ್ಯಾಟ್‌ಗಳಲ್ಲಿ ದೋಷ ಶೇ. 5 ಹಾಗೂ ಅದಕ್ಕಿಂತಲೂ ಹೆಚ್ಚಿರುವ ಸಾಧ್ಯತೆ ಇದೆ’’ ಎಂದು ಅವರು ತಿಳಿಸಿದ್ದಾರೆ. ಸಿಬ್ಬಂದಿ ಸರಿಯಾದ ತರಬೇತಿ ಪಡೆಯದಿರುವುದರಿಂದ ಹಾಗೂ ಅಂತರ್ಗತ ಸಮಸ್ಯೆಯಿಂದ ಈ ದೋಷಗಳು ಕಂಡು ಬರುತಿವೆ ಎಂದು ನಾನು ಹೇಳಲಾರೆ. ಆದರೆ, ದೋಷಗಳು ರಾಜಕೀಯ ಪಕ್ಷಗಳಲ್ಲಿ ಅನುಮಾನ ಉಂಟು ಮಾಡಿದೆ ಎಂದು ಚಾವ್ಲಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X