Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅನಧಿಕೃತ ಜಾಹೀರಾತು ಫಲಕಗಳ ಕಡಿವಾಣಕ್ಕೆ...

ಅನಧಿಕೃತ ಜಾಹೀರಾತು ಫಲಕಗಳ ಕಡಿವಾಣಕ್ಕೆ ಸಿದ್ಧತೆ: ಬಿಬಿಎಂಪಿಯಿಂದ ಹೊಸ ಬೈಲಾಕ್ಕೆ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ5 Aug 2018 8:02 PM IST
share
ಅನಧಿಕೃತ ಜಾಹೀರಾತು ಫಲಕಗಳ ಕಡಿವಾಣಕ್ಕೆ ಸಿದ್ಧತೆ: ಬಿಬಿಎಂಪಿಯಿಂದ ಹೊಸ ಬೈಲಾಕ್ಕೆ ಚಿಂತನೆ

ಬೆಂಗಳೂರು, ಆ.5: ನಗರದಲ್ಲಿ ಅನಧಿಕೃತವಾಗಿರುವ ಜಾಹೀರಾತು ಫಲಕಗಳಿಗೆ ಕಡಿವಾಣ ಹಾಕಲು ಬಿಬಿಎಂಪಿ ಸಿದ್ಧತೆ ನಡೆಸಿದ್ದು, ಹೊಸ ಜಾಹೀರಾತು ಉಪವಿಧಿಗಳನ್ನು(ಬೈಲಾ) ರೂಪಿಸಲು ಮುಂದಾಗಿದೆ.

ಜಾಹೀರಾತು ಫಲಕಗಳ ಅಳವಡಿಕೆ ಹಾಗೂ ನವೀಕರಣದ ಅನುಮತಿಯನ್ನು ಕೆಎಂಸಿ ಕಾಯ್ದೆ ವ್ಯಾಪ್ತಿಗೆ ಬರುವ ಜಾಹೀರಾತುಗಳನ್ನು ಬೈಲಾ 2006 ರ ಪ್ರಕಾರ ನೀಡಲಾಗುತ್ತಿತ್ತು. ಕಳೆದ ಹನ್ನೆರಡು ವರ್ಷಗಳಲ್ಲಿ ಜಾಹೀರಾತು ಪ್ರದರ್ಶನ ಮಾದರಿಯಲ್ಲಿ ಪರಿಣಾಮಕಾರಿ ಬದಲಾವಣೆಗಳಾಗಿವೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಹೊಸ ಬೈಲಾ ಜಾರಿಗೆ ನಿರ್ಧರಿಸಿದೆ.

ದೊಡ್ಡ ಹೋರ್ಡಿಂಗ್ಸ್, ತಾತ್ಕಾಲಿಕ ಜಾಹೀರಾತು, ವಾಣಿಜ್ಯ ಮಳಿಗೆಗಳಲ್ಲಿ ಪ್ರದರ್ಶನ ಜಾಹೀರಾತು, ಕೇಬಲ್ ಜಾಹೀರಾತು ಸೇರಿದಂತೆ 19 ರೀತಿಯ ಜಾಹೀರಾತುಗಳನ್ನು ಹೊಸ ಬೈಲಾ ಅಡಿಯಲ್ಲಿ ತರಲು ಉದ್ದೇಶಿಸಲಾಗಿದೆ. ಹೊಸ ಬೈಲಾ ಅನ್ವಯ ಜಾಹೀರಾತು ಪ್ರಕಟಿಸುವ ಮುನ್ನ ಪಾಲಿಕೆ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ.

ಹಳೆಯ ಬೈಲಾಗಳ ಪ್ರಕಾರ ಜಾಹೀರಾತು ಅಳವಡಿಕೆಗೆ ಎ, ಬಿ, ಸಿ, ಡಿ ಎಂಬ ನಾಲ್ಕು ವಲಯಗಳನ್ನು ಮಾಡಲಾಗಿತ್ತು. ಅದರಂತೆ ಎ ವಲಯ ವ್ಯಾಪ್ತಿಯ ಕುಮಾರಕೃಪಾ ರಸ್ತೆ, ರಾಜಭವನ ರಸ್ತೆ ಸೇರಿದಂತೆ 10 ರಸ್ತೆಗಳಲ್ಲಿ ಜಾಹೀರಾತು ಪ್ರಕಟವನ್ನು ನಿಷೇಧಿಸಲಾಗಿದೆ. ಬಿ ವಲಯದಲ್ಲಿ 24, ಸಿ ವಲಯದಲ್ಲಿ 97 ರಸ್ತೆಗಳಲ್ಲಿ ಜಾಹೀರಾತು ಅಳವಡಿಕೆಗೆ ಅನುಮತಿ ನೀಡಲಾಗಿದೆ.

ಅಳತೆ ಮೀರಿದರೆ ಸೂಕ್ತ ಕ್ರಮ: ಪಾಲಿಕೆಯ ಬಿ ವಲಯದಲ್ಲಿ ಗರಿಷ್ಠ 30x15, ಸಿ ಮತ್ತು ಡಿ ವಲಯದಲ್ಲಿ ಗರಿಷ್ಠ 40x20 ಅಳತೆಯ ಜಾಹೀರಾತು ಫಲಕಗಳನ್ನು ಅಳವಡಿಸಲು ಅವಕಾಶವಿದೆ. ಆದರೆ, ಏಜೆನ್ಸಿಗಳು ನಿಯಮ ಮೀರಿ ಹೆಚ್ಚಿನ ಅಳತೆಯ ಜಾಹೀರಾತು ಫಲಕಗಳನ್ನು ಅಳವಡಿಸುತ್ತಿರುವುದರಿಂದ ಪಾಲಿಕೆಗೆ ನಷ್ಟವಾಗುತ್ತಿದೆ. ಹೀಗಾಗಿ, ಜಾಹೀರಾತು ಅಳತೆ ಹೆಚ್ಚಿಸಲು ಚರ್ಚಿಸಲಾಗಿದೆ. ನಿಯಮ ಉಲ್ಲಂಘನೆ ಹೆಚ್ಚಿನ ದಂಡ, ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

‘ಸೋಮವಾರ ಪಾಲಿಕೆ ಸಭೆಯಲ್ಲಿ ಹೊಸ ಜಾಹೀರಾತು ನೀತಿ ಜಾರಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಚರ್ಚೆ ನಡೆಸಿ, ಬೈಲಾ ಮಂಡಿಸಿ ಸದಸ್ಯರ ಸಲಹೆಗಳನ್ನು ಪಡೆದು ಸರಕಾರಕ್ಕೆ ಸಲ್ಲಿಸಲಾಗುತ್ತದೆ’
-ಎಂ.ಶಿವರಾಜು, ಬಿಬಿಎಂಪಿ ಆಡಳಿತ ಪಕ್ಷದ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X