Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೋಪಿ ಮೀರತ್‌ನಲ್ಲಿ ಇರಲಿಲ್ಲ ಎಂದು...

ಆರೋಪಿ ಮೀರತ್‌ನಲ್ಲಿ ಇರಲಿಲ್ಲ ಎಂದು ಸಾಬೀತುಗೊಳಿಸಿದ ಕೈಬರಹ ಪರೀಕ್ಷೆ

ಕಥುವಾ ಅತ್ಯಾಚಾರ-ಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ5 Aug 2018 8:53 PM IST
share
ಆರೋಪಿ ಮೀರತ್‌ನಲ್ಲಿ ಇರಲಿಲ್ಲ ಎಂದು ಸಾಬೀತುಗೊಳಿಸಿದ ಕೈಬರಹ ಪರೀಕ್ಷೆ

ಜಮ್ಮು,ಆ.5: ಜಮ್ಮುವಿನ ಕಥುವಾದಲ್ಲಿ ಎಂಟರ ಹರೆಯದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿಶಾಲ ಜಂಗೋತ್ರಾ ಜನವರಿಯಲ್ಲಿ ಅಪರಾಧ ನಡೆದಾಗ ಮೀರತ್‌ನಲ್ಲಿರಲಿಲ್ಲ ಎನ್ನುವುದನ್ನು ಜಮ್ಮು-ಕಾಶ್ಮೀರ ಪೊಲೀಸ್‌ನ ಕ್ರೈಂ ಬ್ರಾಂಚ್ ನಡೆಸಿದ ವೈಜ್ಞಾನಿಕ ಪರೀಕ್ಷೆಗಳು ದೃಢಪಡಿಸಿವೆ.

ವಿಶಾಲ್ ತನ್ನ ತಂದೆ ಹಾಗೂ ಪ್ರಕರಣದ ಮುಖ್ಯ ಆರೋಪಿ ಸಾಂಜಿ ರಾಮನ ಶಾಮೀಲಾತಿ ಮತ್ತು ನೆರವಿನೊಂದಿಗೆ ದಾಖಲೆಗಳನ್ನು ತಿರುಚುವ ಮತ್ತು ಸುಳ್ಳು ಸಾಕ್ಷವನ್ನು ಸೃಷ್ಟಿಸುವ ಮೂಲಕ ಅಪರಾಧ ಸ್ಥಳದಲ್ಲಿ ತಾನಿರಲಿಲ್ಲ ಎನ್ನುವುದಕ್ಕೆ ಪುರಾವೆಯನ್ನು ಸೃಷ್ಟಿಸಲು ಪ್ರಯತ್ನಿಸಿದ್ದ ಎಂದು ಪೋಲಿಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ ಹೇಳಲಾಗಿದೆ.

ವಿಶಾಲನ ಉತ್ತರ ಪತ್ರಿಕೆಗಳು ಮತ್ತು ಪರೀಕ್ಷಾ ಹಾಜರಾತಿಯ ದಾಖಲೆಗಳನ್ನು ಕೈಬರಹ ತಜ್ಞರಿಗೆ ಸಲ್ಲಿಸಲಾಗಿದ್ದು, ಆರೋಪಿಯ ಮೊದಲ ಹೆಸರು (ವಿಶಾಲ)ಜ.12 ಮತ್ತು 15ರ ಹಾಜರಾತಿ ದಾಖಲೆಗಳಲ್ಲಿನ ಆತನ ಸಹಿಗಳೊಂದಿಗೆ ತಾಳೆಯಾಗುತ್ತಿಲ್ಲ ಎಂದು ತಜ್ಞರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.

ಬಾಲಕಿಯನ್ನು ಜ.10ರಂದು ಅಪಹರಿಸಲಾಗಿತ್ತು ಮತ್ತು ಜ.13ರಂದು ರಾತ್ರಿ ಆಕೆಯನ್ನು ಕೊಲ್ಲಲಾಗಿತ್ತು. ವಿಶಾಲ್,ಆತನ ಅಪ್ರಾಪ್ತ ವಯಸ್ಕ ಸೋದರ ಸಂಬಂಧಿ ಮತ್ತು ಖಜುರಿಯಾ ಸೇರಿಕೊಂಡು ಜ.14ರಂದು ಶವವನ್ನು ನಿರ್ಜನ ಸ್ಥಳದಲ್ಲಿ ಎಸೆದಿದ್ದರು ಮತ್ತು ನಂತರ ವಿಶಾಲ್ ಮೀರತ್‌ಗೆ ರೈಲು ಹತ್ತಿದ್ದ ಎಂದು ಪೊಲೀಸರು ದೋಷಾರೋಪಣೆ ಪಟ್ಟಿಯಲ್ಲಿ ತಿಳಿಸಿದ್ದಾರೆ. ಜ.17ರಂದು ಬಾಲಕಿಯ ಶವ ಪತ್ತೆಯಾಗಿತ್ತು.

ಜ.12 ಮತ್ತು 15ರ ಹಾಜರಿ ದಾಖಲೆಗಳಲ್ಲಿ ಆರೋಪಿಯ ಅಡ್ಡಹೆಸರನ್ನು (ಜಂಗೋತ್ರಾ) ಅನಧಿಕೃತವಾಗಿ ಸೇರಿಸಿದ್ದಿರಬಹುದು ಎಂದೂ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜ.12 ಮತ್ತು 15ರ ಉತ್ತರಪತ್ರಿಕೆಗಳೊಂದಿಗೆ ಹೋಲಿಸಲು ಆತನ ಜ.9ರ ಉತ್ತರ ಪತ್ರಿಕೆಯನ್ನೂ ಪೊಲೀಸರು ವಶಪಡಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X