Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 5 ನೇ ಹಾಸನ ದಲಿತ ಮತ್ತು ಜನಪರ ಸಾಹಿತ್ಯ...

5 ನೇ ಹಾಸನ ದಲಿತ ಮತ್ತು ಜನಪರ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹೆಚ್.ಕೆ. ಸಂದೇಶ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ5 Aug 2018 10:32 PM IST
share
5 ನೇ ಹಾಸನ ದಲಿತ ಮತ್ತು ಜನಪರ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹೆಚ್.ಕೆ. ಸಂದೇಶ್ ಆಯ್ಕೆ

ಹಾಸನ,ಆ.05: ನಾಗಭೂಮಿ ವಿವಿದೋದ್ದೇಶ ಅಭಿವೃದ್ಧಿ ಸಂಸ್ಥೆ ವತಿಯಿಂದ ನಡೆಯುವ 5 ನೇ ಹಾಸನ ಜಿಲ್ಲಾ ದಲಿತ ಮತ್ತು ಜನಪರ ಸಾಹಿತ್ಯ ಸಮ್ಮೇಳನಧ್ಯಕ್ಷರನ್ನಾಗಿ ಹಿರಿಯ ದಲಿತ ಮುಖಂಡ, ಚಿಂತಕ ಹಾಗೂ ದಲಿತ ಸಂಘರ್ಷ ಸಮಿತಿಯ ಹಿರಿಯ ನಾಯಕ ಹೆಚ್.ಕೆ. ಸಂದೇಶ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ನಗರದ ಮಾನವ ಬಂಧುತ್ವ ವೇದಿಕೆಯಲ್ಲಿ ಶನಿವಾರ ಸಂಜೆ ನಡೆದ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ದಲಿತ ಸಂಘಟನೆಗೆ ಸಲ್ಲಿಸಿದ ಸೇವೆ, ಸುದೀರ್ಘ ಹೋರಾಟ ಹಾಗೂ ದಲಿತ ಪರ ಚಿಂತನೆಗಳನ್ನು ಆಧರಿಸಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ನಾಗರಾಜ್ ಹೆತ್ತೂರು ತಿಳಿಸಿದರು.

ಸಮ್ಮೇಳನಾಧ್ಯಕ್ಷರ ಆಯ್ಕೆ ಸಂಬಂಧ ನಡೆದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ, ಈ ಭಾರಿ ಚಳುವಳಿಗೆ ಕೊಡುಗೆ ಕೊಟ್ಟವರನ್ನು ಆಯ್ಕೆ ಮಾಡಬೇಕೆಂದು ತೀರ್ಮಾನಿಸಲಾಯಿತು. ಜಿಲ್ಲೆಯ ದಲಿತ ಚಳುವಳಿಯ ಹಿರಿಯ ನಾಯಕಯರಾದ ಕೆ. ಈರಪ್ಪ, ನಾರಾಯಣದಾಸ್ ಹಾಗೂ ಶಂಕರ್ ರಾಜ್ ಅವರ ಹೆಸರುಗಳು ಪ್ರಸ್ತಾಪವಾದವಾದರೂ ಅಂತಿಮವಾಗಿ ದಲಿತ ಚಳುವಳಿಯ ಹಿರಿಯ ನಾಯಕ, ತ್ಯಾಗಿ, ಒಡನಾಡಿ ಆಗಿದ್ದ ಹೆಚ್.ಕೆ. ಸಂದೇಶ್ ಅವರ ಹೆಸರನ್ನು ಅಂತಿಮಗೊಳಿಸಲಾಯಿತು. ಸಮ್ಮೇಳನ ಅಕ್ಟೋಬರ್ 7 ಕ್ಕೆ ಹಾಸನದ ಕಲಾಭವನದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭ ಮಾತನಾಡಿದ ಹಿರಿಯ ಹೋರಾಟಗಾರ, ಹಾಗೂ ಜಾನಪದ ಗಾಯಕ ಗ್ಯಾರಂಟಿ ರಾಮಣ್ಣ, 70 ರ ದಶಕದ ದಲಿತ ಹೋರಾಟದ ಮುಂಚೂಣಿಯ ನಾಯಕರಲ್ಲಿ ಒಬ್ಬರಾದ ಸಂದೇಶ್ ಅವರ ಹೋರಾಟವೇ ಒಂದು ಕಾವ್ಯ ಇದ್ದಂತೆ. ಈ ಭಾರಿ ಗುಣಮಟ್ಟದ ಸಮ್ಮೇಳನ ನಡೆಸುವ ಮೂಲಕ ಜಿಲ್ಲೆಯ ದಲಿತ ಚಳುವಳಿ ನೆನಪನ್ನು ತೆರೆದಿಡಬೇಕು. ಸಂದೇಶ್ ಅವರಿಗೆ ಗೌರವಿಸಿಸುವುದು ಇಡೀ ದಲಿತ ಚಳುವಳಿಗೆ ಗೌರವಿಸಿದಂತೆ. ಜಿಲ್ಲೆಯ ಎಲ್ಲಾ ದಲಿತ ನಾಯಕರನ್ನು ಒಳಗೊಂಡ ಪುಸ್ತವನ್ನು ಹೊರತರಬೇಕು ಎಂದು ನುಡಿದರು.

ಪೌರ ಕಾರ್ಮಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಲೋಕೇಶ್ ಮಾತನಾಡಿ, ಸರ್ಕಾರಿ ನೌಕಕರಾಗಿ ನಿವೃತ್ತಿ ಹೊಂದಿರುವ ಸಂದೇಶ್ ಇಡೀ ಜೀವನವನ್ನು ದಲಿತರು, ಶೋಷಿತರ ಪರವಾಗಿ ಸಮರ್ಪಿಸಿಕೊಂಡಿದ್ದಾರೆ. ಅವರನ್ನು ಸಮ್ಮೇಳನಧ್ಯಕ್ಷರನ್ನಾಗಿ ಮಾಡುವುದರಿಂದ ಅವರ ಹೋರಾಟಕ್ಕೆ ಬಲ ನೀಡಬೇಕೆಂದು ನುಡಿದರು.

ಪ್ರಕೃತಿ ಸೇವಾ ಸಂಸ್ಥೆಯ ವರ್ಷಾ ಮಾತನಾಡಿ, ಈ ಭಾರಿ ಸಮ್ಮೇಳನದಲ್ಲಿ ಪೌರ ಕಾರ್ಮಿಕರು ಹಾಗೂ ಮಂಗಳಮುಖಿಯರ ಹಕ್ಕುಗಳ ಕುರಿತು ವಿಷಯ ಇಡಬೇಕು ಮತ್ತು ಈ ಕುರಿತಂತೆ ನಾಟಕ ಪ್ರದರ್ಶನ ನಡೆಸಬೇಕೆಂದು ಸಲಹೆ ನೀಡಿದರು.

ಪೌರ ಕಾರ್ಮಿಕ ಹಿತರಕ್ಷಣಾ ಸಮಿತಿ ಉಪಾಧ್ಯಕ್ಷ ನಲ್ಲಪ್ಪ, ಪ್ರಕೃತಿ ಸೇವಾ ಸಂಸ್ಥೆಯ ಅಶ್ವಥ್, ಮಹಿಳಾ ಹೋರಾಟಗಾರ್ತಿ ಶೋಭಾ, ಕರ್ನಾಟಕ ರಾಜ್ಯ ಮಾನವ ಹಕ್ಕು ಹಾಗೂ ಪತ್ರಕರ್ತರ ಸಮಿತಿ ಜಿಲ್ಲಾಧ್ಯಕ್ಷ ಜಿ.ಎನ್. ಮೂರ್ತಿ, ಮಾರ, ಭವ್ಯ ನಾಗರಾಜ್, ಮುನಿಯಪ್ಪ, ದೇವರಾಜ್, ಗೋವಿಂದರಾಜ್ , ಶಾಂತರಾಜ್, ರಾಮು, ಪರಶು, ಸಣ್ಣಪ್ಪಯ್ಯ ಪರಶುರಾಮ್ ಕೃಷ್ಣ ಮೊದಲಾದವರು ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X