Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಸಿ ನಾಟಕಕ್ಕೆ ಸ್ಪರ್ಶ ನೀಡಿದ...

ದೇಸಿ ನಾಟಕಕ್ಕೆ ಸ್ಪರ್ಶ ನೀಡಿದ ಬಿ.ವಿ.ಕಾರಂತ: ರಂಗಕರ್ಮಿ ಶ್ರೀನಿವಾಸಪ್ರಭು

ವಾರ್ತಾಭಾರತಿವಾರ್ತಾಭಾರತಿ5 Aug 2018 10:38 PM IST
share
ದೇಸಿ ನಾಟಕಕ್ಕೆ ಸ್ಪರ್ಶ ನೀಡಿದ ಬಿ.ವಿ.ಕಾರಂತ: ರಂಗಕರ್ಮಿ ಶ್ರೀನಿವಾಸಪ್ರಭು

ನಾಗಮಂಗಲ, ಆ.5: ದೇಸಿ ನಾಟಕಕ್ಕೆ ಒಂದು ಸ್ಪರ್ಶ ನೀಡಿದ್ದು ಬಿ.ವಿ.ಕಾರಂತರು. ಅವರು ದೇಸಿ ನಾಟಕ ಭೂಮಿಯ ದಿಕ್ಕನ್ನು ಬದಲಿಸಿದವರು. ಶೇ.99ರಷ್ಟು ದೇಸಿ ನಾಟಕಗಳನ್ನು ರಂಗಭೂಮಿಗೆ ತಂದರು ಎಂದು ರಂಗಕರ್ಮಿ ಶ್ರೀನಿವಾಸಪ್ರಭು ಹೇಳಿದರು.

ಪಟ್ಟಣದ ಕನ್ನಡ ಸಂಘ ಆಯೋಜಿಸಿದ್ದ 13ನೇ ವರ್ಷದ ರಾಜ್ಯಮಟ್ಟದ ನಾಗರಂಗ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ  ಮಾತನಾಡಿದ ಅವರು, ನಮ್ಮ ನಾಡಿನಲ್ಲಿ ನಾಲ್ಕಾರು ತಲೆಮಾರಿನ ನಾಟಕಕ್ಕೆ ಆಗುವಷ್ಟು ಸಾಹಿತ್ಯ, ಸಂಸ್ಕೃತಿ ಮತ್ತು ಜನಪದದ ಸಾಮಗ್ರಿಗಳಿವೆ ಎಂದರು.
ಮೈಸೂರು ಮತ್ತು ಬೆಂಗಳೂರಿಗೆ ಸೀಮಿತವಾಗಿದ್ದ ರಂಗಭೂಮಿ ಚಟುವಟಿಕೆ ಇಂದು ವಿಕೇಂದ್ರಿಕರಣಗೊಳ್ಳುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಆ ನಿಟ್ಟಿನಲ್ಲಿ ನಾಗಮಂಗಲದ ಕನ್ನಡ ಸಂಘದ ಕಾರ್ಯ ಸ್ತುತ್ಯಾರ್ಹ ಎಂದು ಅವರು ಶ್ಲಾಘಿಸಿದರು.

ಹಿರಿಯ ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ ಮಾತನಾಡಿ, ನಮ್ಮನ್ನು ನಾವು ಮತ್ತು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಇರುವ ಏಕೈಕ ಕಲೆ ನಾಟಕ. ಅದು ಎಂದೂ ಸಹ ಭರವಸೆ ನೀಡುವುದಿಲ್ಲ. ಚಲನಚಿತ್ರ ಮಾತ್ರ ಆಸೆಯನ್ನು ಉತ್ಪಾದಿಸಲಿದೆ ಎಂದು ಅಭಿಪ್ರಾಯಪಟ್ಟರು. ಒಂದು ಊರು ಆರೋಗ್ಯವಾಗಿರಬೇಕಾದರೆ ಅಲ್ಲಿ ಕನ್ನಡ ಶಾಲೆ, ಉದ್ಯಾನವನ, ಬಸ್ ನಿಲ್ದಾಣ, ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಮತ್ತು ರಂಗ ಚಟುವಟಿಕೆಗಳು ಇರಬೇಕು. ರಂಗಭೂಮಿಗೆ ಸಮಾಜದ ಆರೋಗ್ಯವನ್ನು ಮತ್ತು ಅಲ್ಲಿರುವ ಏರುಪೇರುಗಳನ್ನು ತಿದ್ದುವ ಶಕ್ತಿಯಿದೆ ಎಂದು ಅವರು ಹೇಳಿದರು.

ಇಂದು ಇಡೀ ಭಾರತ ದೇಶ ಉತ್ತರಕುಮಾರನ ಪೌರುಷನ ರೀತಿಯಿದೆ. ನಮ್ಮ ರಾಜಕಾರಣಿಗಳು ಜನರಿಗೆ ಕೇವಲ ಆಶ್ವಾಸನೆ ನೀಡಿ ಯಾವುದೂ ಸಹ ಕಾರ್ಯಗತವಾಗುವುದಿಲ್ಲ ಎಂದು ಅವರು ವಿಷಾದಿಸಿದರು.

ಚಿತ್ರನಟ ಶರತ್ ಲೋಹಿತಾಶ್ವ ಮಾತನಾಡಿ, ನಾಗಮಂಗಲದಲ್ಲಿ ರಂಗಮಂದಿರದ ಅಗತ್ಯವಿದೆ. ಈ ನಿಟ್ಟಿನಲ್ಲಿ ಕನ್ನಡ ಸಂಘ ಸರಕಾರದ ಮಟ್ಟದಲ್ಲಿ ಯತ್ನಿಸುವ ಹಕ್ಕು ಇದೆ. ಇದಕ್ಕೆ ನನ್ನ ಸಹಕಾರ ಇರುತ್ತದೆ ಎಂದರು.

ಮಾಹಿತಿ ಹಕ್ಕು ಆಯೋಗದ ಮಾಜಿ ಅಧ್ಯಕ್ಷ ಎಚ್.ಎನ್.ಕೃಷ್ಣ, ಹಿರಿಯ ನಟ ಹುಲಿವಾನ ಗಂಗಾಧರಯ್ಯ, ಉದ್ಯಮಿ ಮತ್ತು ನಾಟಕೋತ್ಸವದ ಪ್ರಾಯೋಜಕರಾದ ಚಂದ್ರು ಮತ್ತು ಶ್ರೀನಿವಾಸರಾವ್, ಹಾಸ್ಯ ಕಲಾವಿದ ಹಾಲತಿ ಜಯರಾಂ ಅವರನ್ನು ಸನ್ಮಾನಿಸಲಾಯಿತು.
ಕನ್ನಡ ಸಂಘದ ಅಧ್ಯಕ್ಷ ಎನ್.ಆರ್.ಪ್ರಶಾಂತ್, ಕಾರ್ಯದರ್ಶಿ ನಟರಾಜು, ಶಿಕ್ಷಕ ಸೆಮಿಉಲ್ಲಾ, ಇತರರ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X