Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹೆಂಡ್ರಿಕ್ಸ್ ಚೊಚ್ಚಲ ಶತಕ ; ಹರಿಣ ಪಡೆಗೆ...

ಹೆಂಡ್ರಿಕ್ಸ್ ಚೊಚ್ಚಲ ಶತಕ ; ಹರಿಣ ಪಡೆಗೆ ಜಯ

5 ಪಂದ್ಯಗಳ ಏಕದಿನ ಸರಣಿ 3-0 ಅಂತರದಲ್ಲಿ ಕೈವಶ

ವಾರ್ತಾಭಾರತಿವಾರ್ತಾಭಾರತಿ5 Aug 2018 11:47 PM IST
share
ಹೆಂಡ್ರಿಕ್ಸ್ ಚೊಚ್ಚಲ ಶತಕ ; ಹರಿಣ ಪಡೆಗೆ ಜಯ

 ಪಲ್ಲೆಕೆಲೆ, ಆ.5: ಚೊಚ್ಚಲ ಪಂದ್ಯದಲ್ಲೇ ರೀಝಾ ಹೆಂಡ್ರಿಕ್ಸ್ ದಾಖಲಿಸಿದ ಶತಕದ ನೆರವಿನಲ್ಲಿ ದಕ್ಷಿಣ ಆಫ್ರಿಕ ತಂಡ ಇಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ 78 ರನ್‌ಗಳ ಜಯ ಗಳಿಸಿದೆ. ಐದು ಪಂದ್ಯಗಳ ಏಕದಿನ ಸರಣಿಯನ್ನು ಇನ್ನೂ ಎರಡು ಪಂದ್ಯಗಳು ಆಡಲು ಬಾಕಿ ಇರುವಾಗಲೇ 3-0 ಅಂತರದಲ್ಲಿ ವಶಪಡಿಸಿಕೊಂಡಿದೆ.

ಗೆಲುವಿಗೆ 364 ರನ್‌ಗಳ ಸವಾಲನ್ನು ಪಡೆದ ಶ್ರೀಲಂಕಾ ತಂಡ 45.2 ಓವರ್‌ಗಳಲ್ಲಿ 285 ರನ್‌ಗಳಿಗೆ ಆಲೌಟಾಗಿದೆ.

ಶ್ರೀಲಂಕಾ ತಂಡದ ಧನಂಜಯ್ ಡಿಸಿಲ್ವ ವೃತ್ತಿ ಬದುಕಿನಲ್ಲಿ ಗರಿಷ್ಠ 84 ರನ್‌ಗಳ ಕೊಡುಗೆ ನೀಡಿ ಹೋರಾಟ ನಡೆಸಿದರೂ ತಂಡ ಗೆಲುವಿನ ದಡ ಸೇರಲಿಲ್ಲ.

ಆಫ್ರಿಕ ತಂಡದ ವೇಗಿ ಲುಂಗಿ ಗಿಡಿ 4 ವಿಕೆಟ್ ಮತ್ತು ಅಂಡ್ಲೆ ಫೆಹ್ಲುಕ್ವಾಯೊ 3 ವಿಕೆಟ್ ಉಡಾಯಿಸುವ ಮೂಲಕ ಶ್ರೀಲಂಕಾ ತಂಡವನ್ನು ಕಡಿಮೆ ಮೊತ್ತಕ್ಕೆ ನಿಯಂತ್ರಿಸಿದರು.

ದ.ಆಫ್ರಿಕ ತಂಡದ ಹೆಂಡ್ರಿಕ್ಸ್ 12 ಟ್ವೆಂಟಿ -20 ಪಂದ್ಯಗಳನ್ನಾಡಿದ್ದರು. ಅವರು ಇಂದು ಆಡಿದ ಚೊಚ್ಚಲ ಏಕದಿನ ಪಂದ್ಯದಲ್ಲಿ 102 ರನ್(89ಎ, 8ಬೌ,1ಸಿ) ಗಳಿಸಿ ತಂಡದ ಗೆಲುವಿಗೆ ಕೊಡುಗೆ ನೀಡಿದರು.

  ಹೆಂಡ್ರಿಕ್ಸ್ ಚೊಚ್ಚಲ ಏಕದಿನ ಪಂದ್ಯದಲ್ಲಿ ಶತಕ ದಾಖಲಿಸಿದ ದಕ್ಷಿಣ ಆಫ್ರಿಕ ತಂಡದ ಮೂರನೇ ದಾಂಡಿಗ ಎನಿಸಿಕೊಂಡಿದ್ದಾರೆ. ಜೀನ್ ಪಾಲ್ ಡುಮಿನಿ 70 ಎಸೆತಗಳಲ್ಲಿ 92 ರನ್, ಹಾಶಿಮ್ ಅಮ್ಲ(59) ಮತ್ತು ಡೇವಿಡ್ ಮಿಲ್ಲರ್(51) ಅರ್ಧಶತಕಗಳ ನೆರವಿನಲ್ಲಿ ದಕ್ಷಿಣ ಆಫ್ರಿಕದ ಗೆಲುವಿಗೆ ನೆರವಾದರು.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ದಕ್ಷಿಣ ಆಫ್ರಿಕ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 363 ರನ್ ಗಳಿಸಿತ್ತು.

  

 ಆರಂಭಿಕ ದಾಂಡಿಗ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಮತ್ತು ಹಾಶಿಮ್ ಅಮ್ಲ ಮೊದಲ ವಿಕೆಟ್‌ಗೆ 6 ಓವರ್‌ಗಳಲ್ಲಿ 42 ರನ್ ಗಳಿಸಿದರು. ಡಿ ಕಾಕ್ ಅವರು ಅಮ್ಲಗೆ ಉತ್ತಮ ಜೊತೆಯಾಟ ನೀಡಿದರು. ಆದರೆ ಡಿ ಕಾಕ್ ಕೇವಲ 8 ಎಸೆತಗಳಲ್ಲಿ 2 ರನ್ ಗಳಿಸಿ ನಿರ್ಗಮಿಸಿದರು. ಎರಡನೇ ವಿಕೆಟ್‌ಗೆ ಅಮ್ಲ ಮತ್ತು ಹೆಂಡ್ರಿಕ್ಸ್ ಜೊತೆಯಾಟದಲ್ಲಿ 59 ರನ್ ದಾಖಲಿಸಿದರು.

  4ನೇ ವಿಕೆಟ್‌ಗೆ ಜೊತೆಯಾಟದಲ್ಲಿ ಹೆಂಡ್ರಿಕ್ಸ್ ಮತ್ತು ಡುಮಿನಿ 78 ರನ್‌ಗಳ ಕೊಡುಗೆ ನೀಡಿದರು. ಬಳಿಕ ಐದನೇ ವಿಕೆಟ್‌ಗೆ ಡುಮಿನಿ ಮತ್ತು ಮಿಲ್ಲರ್ 103 ರನ್‌ಗಳ ಕೊಡುಗೆ ನೀಡಿದರು. ಮಿಲ್ಲರ್ ವೇಗದ 51 ರನ್ ಮತ್ತು ಫೆಹ್ಲುಕ್ವಾಯೊ 11 ಎಸೆತಗಳಲ್ಲಿ 24 ರನ್ ಗಳಿಸಿದರು. ದ.ಆಫ್ರಿಕ ಕೊನೆಯ 7 ಓವರ್‌ಗಳಲ್ಲಿ 98 ರನ್ ಕಲೆ ಹಾಕಿತು. ಇದರಿಂದಾಗಿ ತಂಡದ ಸ್ಕೋರ್ 360 ರನ್‌ಗಳ ಗಡಿ ದಾಟಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X