Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮನ್ ಕಿ ಬಾತ್’ನಲ್ಲಿ ಮೋದಿ ಹಾಡಿ...

ಮನ್ ಕಿ ಬಾತ್’ನಲ್ಲಿ ಮೋದಿ ಹಾಡಿ ಹೊಗಳಿದ್ದ ರಿಕ್ಷಾವಾಲಾ ಅಹ್ಮದ್ ರ ಕಥೆ ಗೊತ್ತಾ?

ಇವರ ಹಿನ್ನೆಲೆ, ಸಾಧನೆಯೇನು?: ಇಲ್ಲಿದೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ6 Aug 2018 7:44 PM IST
share
ಮನ್ ಕಿ ಬಾತ್’ನಲ್ಲಿ ಮೋದಿ ಹಾಡಿ ಹೊಗಳಿದ್ದ ರಿಕ್ಷಾವಾಲಾ ಅಹ್ಮದ್ ರ ಕಥೆ ಗೊತ್ತಾ?

ಹೊಸದಿಲ್ಲಿ, ಆ.6: ತಮ್ಮ 42ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ  ಅಸ್ಸಾಂ ರಾಜ್ಯದ ರಿಕ್ಷಾವಾಲ 82 ವರ್ಷದ ಅಹ್ಮದ್ ಅಲಿಯವರ ಬಗ್ಗೆ ಹೇಳಿದ್ದರು. ಅದಕ್ಕೆ ಕಾರಣವಿದೆ, ಅಹ್ಮದ್ ತಮ್ಮ ಸ್ವಂತ ಹಣದಿಂದ ಒಂಬತ್ತು ಶಾಲೆಗಳನ್ನು ತೆರೆದಿದ್ದಾರೆ.

ಕರೀಂ ಗಂಜ್ ಜಿಲ್ಲೆಯವರಾಗಿರುವ ಅಹ್ಮದ್ ಅಲಿ, ಪತ್ತರಕಂಡಿ ಎಂಬಲ್ಲಿನ ಮಧುರಬಂದ್ ಗ್ರಾಮ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಈ ಒಂಬತ್ತು ಶಾಲೆಗಳನ್ನು ತೆರೆದಿದ್ದಾರೆ. ಪ್ರಧಾನಿಯವರು ಅಲಿ ಬಗ್ಗೆ ಉಲ್ಲೇಖಿಸಿದಂದನಿಂದ ಬಾಂಗ್ಲಾದೇಶ ಗಡಿಯಲ್ಲಿರುವ ಈ ಗ್ರಾಮದಲ್ಲಿ  ಸಂತೋಷದ ಅಲೆಯೆದ್ದಿದೆ. “ಅಹ್ಮದ್ ರವರ ಪ್ರಯತ್ನಗಳು ನಮ್ಮ ದೇಶವಾಸಿಗಳ ಆತ್ಮಬಲದ ಸಂಕೇತ” ಎಂದು ಪ್ರಧಾನಿ ಹೇಳಿದ್ದರು.  ಪ್ರಧಾನಿಯ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ತಮ್ಮ ಪತ್ನಿ, ಮೂವರು ಪುತ್ರರು ಹಾಗೂ ಕೆಲ ಸಂಬಂಧಿಗಳೊಂದಿಗೆ ಕುಳಿತು ಕೇಳುತ್ತಿದ್ದ ಅಹ್ಮದ್ ಗೆ ಪ್ರಧಾನಿ ತಮ್ಮ ಹೆಸರು ಉಲ್ಲೇಖಿಸಿದ್ದನ್ನು ಕೇಳಿ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.

ತಾವು ಸ್ವತಃ ಶಿಕ್ಷಣವನ್ನು ಅರ್ಧದಲ್ಲಿಯೇ ತೊರೆದವರಾದರೂ ತಮ್ಮ ಊರಿನ ಮಕ್ಕಳು ವಿದ್ಯಾವಂತರಾಗಬೇಕೆಂಬ ಹಂಬಲದಿಂದ ಶಾಲೆಗಳನ್ನು ಆರಂಭಿಸಿರುವ ಅಹ್ಮದ್, ಸ್ಥಳೀಯರ ನೆರವಿನಿಂದ ಇಷ್ಟೆಲ್ಲ ಸಾಧ್ಯವಾಯಿತು ಎಂದಿದ್ದಾರೆ.

1978ರಲ್ಲಿ ತಮ್ಮ ಬಳಿಯಿದ್ದ ಒಂದು ತುಂಡು ಭೂಮಿಯನ್ನು ಮಾರಾಟ ಮಾಡಿ ಅದರಿಂದ ಬಂದ ಹಣ ಹಾಗೂ ಗ್ರಾಮಸ್ಥರಿಂದ ಸಂಗ್ರಹಿಸಿದ ಹಣದಿಂದ ಕಿರಿಯ ಪ್ರಾಥಮಿಕ  ಶಾಲೆ ಆರಂಭಿಸಿದ್ದರು. ಅವರ ಬಳಿ ಒಟ್ಟು 36 ಬಿಘಾ ಜಮೀನಿತ್ತು. ಪ್ರತಿ ಬಾರಿ ಶಾಲೆ ಆರಂಭಿಸುವಾಗಲೂ ಒಂದೊಂದು ತುಂಡು ಜಮೀನು ಮಾರಿದ್ದರು. ಹೀಗೆ 32 ಬಿಘಾ ಜಮೀನು ಮಾರಿ ಅವರು ಮೂರು ಕಿರಿಯ ಪ್ರಾಥಮಿಕ ಶಾಲೆಗಳು, ಐದು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಒಂದು ಹೈಸ್ಕೂಲನ್ನು ಮಧುರ್‍ ಬಂದ್ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಆರಂಭಿಸಿದ್ದರು.

ಒಟ್ಟು ಹತ್ತು ಶಾಲೆಗಳನ್ನು ಹಾಗೂ ಒಂದು ಜೂನಿಯರ್ ಕಾಲೇಜನ್ನು ತೆರೆಯಬೇಕೆಂಬುದು ಅವರ ಕನಸಾಗಿದೆ. ಬಡ ಕುಟುಂಬಗಳ ಮಕ್ಕಳು ಶಾಲೆಯನ್ನು ಅರ್ಧದಲ್ಲಿಯೇ ತೊರೆಯುವಂತಾಗಬಾದೆಂಬುದು ಅವರ ಇಚ್ಛೆ. ಅವರು ಆರಂಭಿಸಿದ ಒಂಬತ್ತು ಶಾಲೆಗಳ ಪೈಕಿ ಒಂದು ಶಾಲೆಗೆ ಮಾತ್ರ ಅವರ ಹೆಸರನ್ನಿಡಲಾಗಿದೆ. ಗ್ರಾಮಸ್ಥರ ಸತತ ಒತ್ತಾಯದ ನಂತರ ತಮ್ಮ ಹೆಸರನ್ನು ಶಾಲೆಯೊಂದಕ್ಕೆ ಇಡಲು ಅವರು ಒಪ್ಪಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X