Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷಿ ಭೂಮಿ ಆದಾಯಮಿತಿ ಹೆಚ್ಚಿಸಬಾರದು:...

ಕೃಷಿ ಭೂಮಿ ಆದಾಯಮಿತಿ ಹೆಚ್ಚಿಸಬಾರದು: ಮುಖ್ಯಮಂತ್ರಿಗೆ ಬಸವರಾಜ ಹೊರಟ್ಟಿ ಪತ್ರ

ವಾರ್ತಾಭಾರತಿವಾರ್ತಾಭಾರತಿ6 Aug 2018 9:10 PM IST
share
ಕೃಷಿ ಭೂಮಿ ಆದಾಯಮಿತಿ ಹೆಚ್ಚಿಸಬಾರದು: ಮುಖ್ಯಮಂತ್ರಿಗೆ ಬಸವರಾಜ ಹೊರಟ್ಟಿ ಪತ್ರ

ಬೆಂಗಳೂರು, ಆ.6: ರಾಜ್ಯ ಸರಕಾರ ಕೃಷಿ ಭೂಮಿ ಖರೀದಿಸಲು ಆದಾಯಮಿತಿ ಹೆಚ್ಚಿಸಬಾರದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ.  

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಉಳುವವನೆ ಭೂಮಿಯ ಒಡೆಯ ಎಂಬ ಮಹಾತ್ವಾಕಾಂಕ್ಷಿ ಕಾನೂನನ್ನು ಜಾರಿಗೆ ತಂದರು. ಇದರಿಂದ ರೈತರ ಬಾಳಿನಲ್ಲಿ ಹೊಸಬೆಳಕು ಮೂಡಿತ್ತು. ಕರ್ನಾಟಕ ಭೂ ಸುಧಾರಣೆ ಕಾನೂನು 1961 ರ ಪ್ರಕಾರ ರಾಜ್ಯದಲ್ಲಿ ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸಲು 12 ಸಾವಿರ ರೂ. ಆದಾಯಮಿತಿ ನಿಗದಿಯಾಗಿತ್ತು. 1991ರಲ್ಲಿ ಈ ಮಿತಿಯನ್ನು ರೂ 50 ಸಾವಿರಕ್ಕೆ 1995 ರಲ್ಲಿ 2 ಲಕ್ಷ ರೂ ಗೆ ಏರಿಕೆ ಮಾಡಲಾಗಿದೆ. ಆದರೆ, ಸರಕಾರ ಈ ಆದಾಯ ಮಿತಿ ದುಪ್ಪಟ್ಟು ಮಾಡಲು ಹೊರಟಿದೆ ಎಂದು ಪತ್ರಿಕಾ ವರದಿಯೊಂದು ತಿಳಿಸಿದೆ. ಅಲ್ಲದೆ, ಕೃಷಿಕರಲ್ಲದವರು ಕೃಷಿ ಭೂಮಿಯನ್ನು ಖರೀದಿಸಿ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಬಳಸುವುದರ ಮೂಲಕ ಕೋಟ್ಯಾಧಿಪತಿಗಳಿಗೆ ಆಯಾ ಕಾಲದ ಸರಕಾರಗಳೇ ರತ್ನಗಂಬಳಿ ಹಾಸುವುದರ ಮೂಲಕ ರಾಜ್ಯದಲ್ಲಿ ಕೃಷಿ ಭೂಮಿ ಕ್ಷೀಣಿಸುವಂತೆ ಮಾಡಿವೆ.

ಇನ್ನು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಕೃಷಿ ಭೂಮಿ ಕಡಿಮೆಯಾಗುತ್ತಿದ್ದು, ರಾಜ್ಯದ ಸಾಮಾಜಿಕ ಆರ್ಥಿಕ ಹಾಗೂ ರಾಜಕೀಯ ಪರಿಸ್ಥಿತಿಯ ಮೇಲೂ ಗಂಭೀರ ಪರಿಣಾಮ ಬೀರಲಿವೆ. ಆದಾಯ ಮಿತಿ ರದ್ದುಗೊಳಿಸಿದರೆ ಕೃಷಿಗೆ ಎಲ್ಲರನ್ನೂ ಆಕರ್ಷಿಸಬಹುದೆಂಬುದು ತಪ್ಪು ಕಲ್ಪನೆ. ಅಲ್ಲದೆ, ಕೃಷಿ ಎಂದರೆ ಏನೆಂಬುದರ ಬಗ್ಗೆ ಏನೂ ಗೊತ್ತಿಲ್ಲದವರು ಕೃಷಿ ಭೂಮಿಯ ಮಾಲಕರಾಗುವುದನ್ನು ತಪ್ಪಿಸುವ ಗುರುತರ ಜವಾಬ್ದಾರಿ ಸರಕಾರದ ಮೇಲೆ ಇದೆ. ಕ್ಷಣಿಕ ಆಸೆ ಹಾಗೂ ತುರ್ತು ಅವಶ್ಯಕತೆಗಳನ್ನು ಪೂರೈಸಲು ರೈತರು ತಮ್ಮ ಬೆಲೆಬಾಳುವ ಜಮೀನುಗಳನ್ನು ಅರೆಕಾಸಿಗೆ ಮಾರಿ ಬೀದಿಗೆ ಬೀಳುವುದನ್ನು ತಪ್ಪಿಸಲು ಆದಾಯ ಮಿತಿಯನ್ನು ಹೆಚ್ಚಿಸಬಾರದೆಂದು ಬಸವರಾಜ ಹೊರಟ್ಟಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X