Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಏಷ್ಯನ್ ಗೇಮ್ಸ್‌: ಭಾರತ ಅಮೆಚೂರ್ ಕಬಡ್ಡಿ...

ಏಷ್ಯನ್ ಗೇಮ್ಸ್‌: ಭಾರತ ಅಮೆಚೂರ್ ಕಬಡ್ಡಿ ತಂಡದ ಮ್ಯಾನೇಜರ್ ಹುದ್ದೆಗೆ ಕರ್ನಾಟಕದ ಎಂ.ಶ್ರೀಕಾಂತ್ ನೇಮಕ

ವಾರ್ತಾಭಾರತಿವಾರ್ತಾಭಾರತಿ6 Aug 2018 11:17 PM IST
share
ಏಷ್ಯನ್ ಗೇಮ್ಸ್‌: ಭಾರತ ಅಮೆಚೂರ್ ಕಬಡ್ಡಿ ತಂಡದ ಮ್ಯಾನೇಜರ್ ಹುದ್ದೆಗೆ ಕರ್ನಾಟಕದ ಎಂ.ಶ್ರೀಕಾಂತ್ ನೇಮಕ

ಶಿವಮೊಗ್ಗ, ಆ. 6: ಪ್ರತಿಷ್ಠಿತ ಏಷಿಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತಿರುವ ಭಾರತ ಅಮೆಚೂರ್ ಕಬಡ್ಡಿ ಪುರುಷರ 18ರ ವಯೋಮಾನದೊಳಗಿನ ತಂಡದ ಮ್ಯಾನೇಜರ್ ಆಗಿ ರಾಜ್ಯದ ಮೂಲತಃ ಶಿವಮೊಗ್ಗದ ಎಂ.ಶ್ರೀಕಾಂತ್ ಅವರನ್ನು ನೇಮಿಸಿ ಅಮೆಚೂರ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷೆ ಡಾ. ಮ್ರಿದುಲಾ ಬಹದ್ದೂರಿಯಾ ಆದೇಶ ಹೊರಡಿಸಿದ್ದಾರೆ.

ಎಂ.ಶ್ರೀಕಾಂತ್ ಅವರು ಪ್ರಸ್ತುತ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್’ ರಾಜ್ಯಾಧ್ಯಕ್ಷರಾಗಿದ್ದು, ರಾಜ್ಯ ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಪಂದ್ಯಾವಳಿ: ಮಲೇಷ್ಯಾ ರಾಜಧಾನಿ ಜರ್ಕಾತದಲ್ಲಿ ಈ ಬಾರಿಯ ಏಷಿಯನ್ಸ್ ಗೇಮ್ಸ್ ಪಂದ್ಯಾವಳಿ ಆಯೋಜಿತವಾಗಿದೆ. ಕಬಡ್ಡಿಯ 18 ರ ವಯೋಮಾನ ವಿಭಾಗದಡಿ ಭಾರತದಿಂದ ಪುರುಷ ಹಾಗೂ ಮಹಿಳಾ ತಂಡಗಳು ಭಾಗವಹಿಸುತ್ತಿವೆ. ಆಗಸ್ಟ್ 18 ರಿಂದ ಸೆಪ್ಟೆಂಬರ್ 2 ರವರೆಗೆ ಈ ಪಂದ್ಯಾವಳಿಗಳು ನಡೆಯಲಿವೆ. ಈಗಾಗಲೇ ಎರಡೂ ವಿಭಾಗಗಳಿಗೂ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ. ಮಹಿಳಾ ವಿಭಾಗದಲ್ಲಿ ಕರ್ನಾಟಕ ರಾಜ್ಯದ ಉಷಾರಾಣಿ ನರಸಿಂಹಯ್ಯ ಅವರಿಗೆ ಸ್ಥಾನ ಸಿಕ್ಕಿದೆ. ರಾಜ್ಯದ ಶಿವಣ್ಣ ಎಂಬವರು ರೆಫ್ರಿಯಾಗಿ ಆಯ್ಕೆಯಾಗಿದ್ದಾರೆ.

ದಶಕಗಳ ನಂತರ ಪ್ರಾತಿನಿಧ್ಯ: ಈ ಮೊದಲು ರಾಜ್ಯಕ್ಕೆ ಸೇರಿದ ಸೀತಾರಾಂ ಎಂಬುವರು ಭಾರತ ಕಬಡ್ಡಿ ತಂಡದ ಮ್ಯಾನೇಜರ್ ಆಗಿ ಆಯ್ಕೆಯಾಗಿದ್ದರು. ಇದಾದ ನಂತರ ರಾಜ್ಯದ ಯಾರಿಗೂ ರಾಷ್ಟ್ರೀಯ ಕಬಡ್ಡಿ ತಂಡದ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾಗುವ ಯೋಗ ಒಲಿದು ಬಂದಿರಲಿಲ್ಲ. ಸುಮಾರು ಎರಡು ದಶಕಗಳ ನಂತರ ರಾಷ್ಟ್ರೀಯ ಕಬಡ್ಡಿ ತಂಡದ ಮ್ಯಾನೇಜರ್ ಹುದ್ದೆಯೂ ಕರ್ನಾಟಕ ರಾಜ್ಯಕ್ಕೆ ಒಲಿದು ಬಂದಿರುವುದು, ರಾಜ್ಯ ಕಬಡ್ಡಿ ವಲಯದಲ್ಲಿ ಸಂತಸ ಉಂಟು ಮಾಡಿದೆ. ಶ್ರೀಕಾಂತ್ ಪ್ರಸ್ತುತ ಶಿವಮೊಗ್ಗದವರಗಿದ್ದು, ಜಿಲ್ಲೆಯ ಕ್ರೀಡಾ ಇತಿಹಾಸದಲ್ಲಿಯೇ ಇಲ್ಲಿಯವರೆಗೂ ಯಾರೊಬ್ಬರು ರಾಷ್ಟ್ರೀಯ ಕ್ರೀಡಾ ತಂಡವೊಂದರ ಮ್ಯಾನೇಜರ್ ಹುದ್ದೆಯ ಪಟ್ಟ ಅಲಂಕರಿಸಿಲ್ಲ. ಎಂ.ಶ್ರೀಕಾಂತ್ ಅವರೇ ಪ್ರಪ್ರಥಮ ವ್ಯಕ್ತಿಯಾಗಿದ್ದಾರೆ ಎಂದು ಸ್ಥಳೀಯ ಕ್ರೀಡಾಪಟುಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀಕಾಂತ್, ಪ್ರತಿಷ್ಠಿತ ಏಷಿಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತಿರುವ ಭಾರತ ಅಮೆಚೂರ್ ಕಬಡ್ಡಿ ಪುರುಷರ 18 ರ ವಯೋಮಾನದೊಳಗಿನ ತಂಡದ ಮ್ಯಾನೇಜರ್ ಆಗಿ ತಮ್ಮನ್ನು ನಿಯೋಜಿಸಿರುವುದು ಅತೀವ ಸಂತಸ ಉಂಟು ಮಾಡಿದೆ. ತಮ್ಮ ಜೀವಮಾನದಲ್ಲಿಯೇ ಎಂದಿಗೂ ಮರೆಯದ ಕ್ಷಣ ತಿಳಿಸಿದ್ದಾರೆ.

ತಮ್ಮನ್ನು ಮ್ಯಾನೇಜರ್ ಹುದ್ದೆಗೆ ಆಯ್ಕೆ ಮಾಡಿದ ರಾಷ್ಟ್ರೀಯ ಹಾಗೂ ರಾಜ್ಯ ಅಮೆಚೂರು ಕಬಡ್ಡಿ ಫೆಡರೇಷನ್‌ನ ಮುಖಂಡರಿಗೆ ಅಭಿನಂದನೆ ಸಲ್ಲಿಸುವುದುದಾಗಿ ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X