Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ಅಂಡರ್ -20 ತಂಡಕ್ಕೆ ಐತಿಹಾಸಿಕ ಜಯ

ಭಾರತದ ಅಂಡರ್ -20 ತಂಡಕ್ಕೆ ಐತಿಹಾಸಿಕ ಜಯ

ವಾರ್ತಾಭಾರತಿವಾರ್ತಾಭಾರತಿ6 Aug 2018 11:43 PM IST
share
ಭಾರತದ ಅಂಡರ್ -20 ತಂಡಕ್ಕೆ ಐತಿಹಾಸಿಕ ಜಯ

ವೆಲೆನ್ಸಿಯಾ(ಸ್ಪೇನ್), ಆ.6: ಆರು ಬಾರಿಯ ಅಂಡರ್-20 ವಿಶ್ವ ಚಾಂಪಿಯನ್ ಅರ್ಜೆಂಟೀನವನ್ನು ಮಣಿಸಿದ ಭಾರತದ ಅಂಡರ್-20 ತಂಡ ಕೊಟಿಫ್ ಕಪ್ ಫುಟ್ಬಾಲ್ ಟೂರ್ನಿಯಲ್ಲಿ ಅತ್ಯಂತ ಸ್ಮರಣೀಯ ಗೆಲುವು ದಾಖಲಿಸಿ ಇತಿಹಾಸ ನಿರ್ಮಿಸಿದೆ.

10 ಆಟಗಾರರೊಂದಿಗೆ ಆಡಿದ ಹೊರತಾಗಿಯೂ ಉತ್ತಮ ಪ್ರದರ್ಶನ ನೀಡಿದ ಭಾರತ ತಂಡ ಅರ್ಜೆಂಟೀನವನ್ನು 2-1 ಅಂತರದಿಂದ ಮಣಿಸಿದೆ. ತಲಾ ಒಂದು ಗೋಲು ಬಾರಿಸಿದ ದೀಪಕ್ ಟಾಂಗ್ರಿ (4ನೇ ನಿಮಿಷ) ಹಾಗೂ ಅನ್ವರ್ ಅಲಿ(68ನೇ ನಿಮಿಷ) ಭಾರತದ ಅಂಡರ್-20 ತಂಡದ ಹೀರೊಗಳಾಗಿ ಹೊರಹೊಮ್ಮಿದರು. ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. 2006ರ ವಿಶ್ವಕಪ್ ತಂಡದ ಸದಸ್ಯ ಲಿಯೊನೆಲ್ ಸ್ಕಾಲೊನಿ ಅವರಿಂದ ಕೋಚಿಂಗ್ ಪಡೆದಿರುವ ಅರ್ಜೆಂಟೀನ 72ನೇ ನಿಮಿಷದಲ್ಲಿ ಏಕೈಕ ಗೋಲು ಬಾರಿಸಿತು. ಫ್ಲೋಯ್ಡೋ ಪಿಂಟೋ ಕೋಚಿಂಗ್‌ನಲ್ಲಿ ಪಳಗಿರುವ ಭಾರತ ತಂಡ ಬಲಿಷ್ಠ ಅರ್ಜೆಂಟೀನವನ್ನು ಸೋಲಿಸಿ ಗಮನಾರ್ಹ ಸಾಧನೆ ಮಾಡಿದೆ. ಇದೇ ಟೂರ್ನಿಯಲ್ಲಿ ಮುರ್ಸಿಯಾ(0-2), ವೌರಿಟಾನಿಯಾ(0-3)ತಂಡದ ವಿರುದ್ಧ ಸೋಲುಂಡಿದ್ದ ಭಾರತ ತಂಡ ವೆನೆಜುವೆಲಾ ವಿರುದ್ಧ ಗೋಲುರಹಿತ ಡ್ರಾ ಸಾಧಿಸಿತ್ತು.

 ‘‘ಈ ಗೆಲುವು ಖಂಡಿತವಾಗಿಯೂ ಭಾರತದ ಫುಟ್ಬಾಲ್‌ಗೆ ವಿಶ್ವಮಟ್ಟದಲ್ಲಿ ಗೌರವ ತಂದುಕೊಡಲಿದೆ. ಈ ಗೆಲುವಿನ ಮೂಲಕ ವಿಶ್ವ ಶ್ರೇಷ್ಠ ತಂಡದೊಂದಿಗೆ ಭಾರತಕ್ಕೆ ಆಡುವ ಅವಕಾಶ ತೆರೆದುಕೊಳ್ಳಲಿದೆ. ಈ ಗೆಲುವು ನಂಬಲಸಾಧ್ಯ ವಿಚಾರ. ಸರಿಯಾದ ಪ್ರೋತ್ಸಾಹ ಲಭಿಸಿದರೆ ವಿಶ್ವದ ಶ್ರೇಷ್ಠ ತಂಡವನ್ನು ಮಣಿಸಲು ನಮಗೆ ಸಾಧ್ಯವಿದೆ ಎಂದು ತೋರಿಸಿಕೊಟ್ಟಿದೇವೆ’’ ಎಂದು ಕೋಚ್ ಪಿಂಟೋ ಸಂಭ್ರಮ ವ್ಯಕ್ತಪಡಿಸಿದರು.

ಭಾರತದ ಗೋಲ್‌ಕೀಪರ್ ಪ್ರಭ್‌ಸುಖಾನ್ ಗಿಲ್ 56ನೇ ಹಾಗೂ 61ನೇ ನಿಮಿಷದಲ್ಲಿ ಎದುರಾಳಿ ತಂಡಕ್ಕೆ ಗೋಲು ನಿರಾಕರಿಸಿದರು. ಅವರ ಪ್ರಯತ್ನದಿಂದ ಭಾರತ ಮುನ್ನಡೆ ಕಾಯ್ದುಕೊಳ್ಳಲು ಸಾಧ್ಯವಾಗಿದೆ. 4ನೇ ನಿಮಿಷದಲ್ಲಿ ಗೋಲು ಬಾರಿಸಿದ ಭಾರತ ಉತ್ತಮ ಆರಂಭ ಪಡೆದಿತ್ತು. 68ನೇ ನಿಮಿಷದಲ್ಲಿ ಫ್ರೀಕಿಕ್‌ನಲ್ಲಿ ಗೋಲು ಬಾರಿಸಿದ ಅನ್ವರ್ ಅಲಿ ಭಾರತದ ಮುನ್ನಡೆಯನ್ನು ದ್ವಿಗುಣಗೊಳಿಸಿದರು. 54ನೇ ನಿಮಿಷದಲ್ಲಿ ಫಾರ್ವರ್ಡ್ ಆಟಗಾರ

ಅಂಕಿತ್ ಜಾಧವ್ ರೆಡ್ ಕಾರ್ಡ್ ಪಡೆದು ನಿರ್ಗಮಿಸಿದಾಗ ಭಾರತ 10 ಆಟಗಾರರೊಂದಿಗೆ ಆಡಬೇಕಾಯಿತು.

ಭಾರತೀಯ ಫುಟ್ಬಾಲ್ ಸಂಸ್ಥೆ(ಐಒಎ)ನಿರಾಕ್ಷೇಪಣಾ ಪತ್ರ ನೀಡದ ಕಾರಣ ಭಾರತ ಫುಟ್ಬಾಲ್ ತಂಡ ಮುಂಬರುವ ಏಶ್ಯನ್ ಗೇಮ್ಸ್ ನಲ್ಲಿ ಭಾಗವಹಿಸುವುದರಿಂದ ವಂಚಿತವಾಗಿದೆ. ಅಂಡರ್-17 ವಿಶ್ವಕಪ್‌ನಲ್ಲಿ ಭಾರತದ ಕಳಪೆ ಪ್ರದರ್ಶನವನ್ನು ಸೀನಿಯರ್ ಫುಟ್ಬಾಲ್ ತಂಡದ ಕೋಚ್ ಸ್ಟೀಫನ್ ಟೀಕಿಸಿದ ಒಂದು ವಾರದ ಬಳಿಕ ಅಪೂರ್ವ ಸಾಧನೆ ಮಾಡಿರುವ ಕಿರಿಯರ ತಂಡ ಟೀಕಾಕಾರರ ಬಾಯಿ ಮುಚ್ಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X