Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಫ್ತಾಕ್ಕಾಗಿ ಬಿಲ್ಡರ್ರ್‌ಗೆ ಕೊಲೆ...

ಹಫ್ತಾಕ್ಕಾಗಿ ಬಿಲ್ಡರ್ರ್‌ಗೆ ಕೊಲೆ ಬೆದರಿಕೆ: ಆರೋಪಿಗಳು ಪೊಲೀಸ್ ಕಸ್ಟಡಿಗೆ

ವಾರ್ತಾಭಾರತಿವಾರ್ತಾಭಾರತಿ7 Aug 2018 8:29 PM IST
share

ಮಲ್ಪೆ, ಆ.7: ಉಡುಪಿ ಅಂಬಾಗಿಲಿನ ಕ್ಲಾಸಿಕ್ ಬಿಲ್ಡರ್ಸ್‌ನ ಪ್ರಭಾಕರ ಪೂಜಾರಿ ಎಂಬವರಿಗೆ 25ಲಕ್ಷ ರೂ. ಹಫ್ತಾ ನೀಡುವಂತೆ ಕೊಲೆ ಬೆದರಿಕೆಯೊಡ್ಡಿ ಬಂಧಿತರಾಗಿರುವ ಕಟಪಾಡಿ ಏಣಗುಡ್ಡೆಯ ಧನು ಯಾನೆ ಧನರಾಜ್(25) ಹಾಗೂ ಮಲ್ಪೆಯ ಉಲ್ಲಾಸ್(27) ಎಂಬವರನ್ನು ಉಡುಪಿ ನ್ಯಾಯಾಲಯವು ಆ.10ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಭೂ ವ್ಯವಹಾರ ಹಾಗೂ ಬಿಲ್ಡಿಂಗ್ ಕನ್‌ಸ್ಟ್ರಕ್ಷನ್ ಮಾಡಿಕೊಂಡಿದ್ದ ಪ್ರಭಾಕರ ಪೂಜಾರಿಗೆ ಕಳೆದ ಒಂದು ವಾರದಿಂದ ಅನಾಮಧೇಯ ಕರೆಗಳು ಬರುತ್ತಿದ್ದು, ಆರೋಪಿಗಳು ಆ. 6ರಂದು ಮಧ್ಯಾಹ್ನ 2ಗಂಟೆಗೆ ಮಲ್ಪೆ ಬೀಚ್‌ಗೆ ಬರುವಂತೆ ಕರೆ ಮಾಡಿದ್ದರು. ಈ ಬಗ್ಗೆ ಪ್ರಭಾಕರ ಪೂಜಾರಿ ಪೊಲೀಸರಿಗೆ ಮಾಹಿತಿ ನೀಡಿ, ತನ್ನ ಕಾರಿನಲ್ಲಿ ಮಲ್ಪೆ ಬೀಚ್‌ಗೆ ಹೋಗಿದ್ದರು.

ಅಲ್ಲಿ ರಿಟ್ಜ್ ಕಾರಿನಲ್ಲಿ ಬಂದ ಧನ್‌ರಾಜ್ ಹಾಗೂ ಉಲ್ಲಾಸ್, ನಾವು ಬನ್ನಂಜೆ ರಾಜನ ಸಹಚರರು ಎಂದು ಹೇಳಿಕೊಂಡು ಪ್ರಭಾಕರ್ ಪೂಜಾರಿಗೆ ಮೊಬೈಲ್ ಕೊಟ್ಟು ಮಾತನಾಡುವಂತೆ ತಿಳಿಸಿದ್ದರು. ಮೊಬೈಲ್‌ನಲ್ಲಿ ವಿಕ್ಕಿ ಪೂಜಾರಿ ಎಂದು ಹೇಳಿಕೊಂಡು ಮಾತನಾಡಿದ ವ್ಯಕ್ತಿಯು, 25ಲಕ್ಷ ರೂ. ಹಣ ನೀಡಬೇಕು, ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಪ್ರಭಾಕರ್ ಪೂಜಾರಿಗೆ ಬೆದರಿಕೆಯೊಡ್ಡಿದ್ದನು. ಈ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದರು.

25ಲಕ್ಷ ಹಫ್ತಾ ವಸೂಲಿಗೆ ಬೇಡಿಕೆ ಇಟ್ಟು, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿರುವುದಾಗಿ ಉಲ್ಲಾಸ್, ಧನರಾಜ್ ಹಾಗೂ ವಿಕ್ಕಿ ಪೂಜಾರಿ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಗಳನ್ನು ಇಂದು ಬೆಳಗ್ಗೆ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿ ರುವ ಮಲ್ಪೆ ಪೊಲೀಸರು, ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ಕೊಂಡು ತನಿಖೆ ಮುಂದುವರೆಸಿದ್ದಾರೆ.

ಜೈಲಿನಲ್ಲಿದ್ದೆ ಹಫ್ತಾಕ್ಕಾಗಿ ಬೆದರಿಕೆ?
ಮಂಗಳೂರು ತೊಕ್ಕೊಟ್ಟು ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಬೆಂಗಳೂರು ಜೈಲಿನಲ್ಲಿರುವ ರೌಡಿ ವಿಕ್ಕಿ ಪೂಜಾರಿ, ಜೈಲಿನಲ್ಲಿದ್ದುಕೊಂಡೇ ಬಿಲ್ಡರ್ ಪ್ರಭಾಕರ ಪೂಜಾರಿಗೆ ಹಫ್ತಾ ನೀಡುವಂತೆ ಬೆದರಿಕೆಯೊಡ್ಡಿದ್ದಾನೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಆ.6ರಂದು ವಿಕ್ಕಿ ಪೂಜಾರಿ ಎಂದು ಹೇಳಿಕೊಂಡು ಪ್ರಭಾಕರ ಪೂಜಾರಿ ಜೊತೆ ಮೊಬೈಲ್‌ನಲ್ಲಿ ಮಾತನಾಡಿದ ವ್ಯಕ್ತಿ 25ಲಕ್ಷ ರೂ. ಹಫ್ತಾ ನೀಡುವಂತೆ ಬೆದರಿಕೆಯೊಡ್ಡಿದ್ದ ಎಂದು ದೂರಲಾಗಿದೆ. ಪ್ರಭಾಕರ ಪೂಜಾರಿ ಜೊತೆ ಮೊಬೈಲ್‌ನಲ್ಲಿ ಮಾತನಾಡಿದ ವ್ಯಕ್ತಿ, ಈಗ ಜೈಲಿನಲ್ಲಿರುವ ವಿಕ್ಕಿ ಪೂಜಾರಿಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಹೆಚ್ಚಿನ ತನಿಖೆಗಾಗಿ ಬಂಧಿತರಿಬ್ಬ ರನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದು, ವಿಚಾರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X