Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಳೆಯ ಮಕ್ಕಳಲ್ಲಿ ಸಂಸ್ಕೃತಿಯ ಬೀಜ...

ಎಳೆಯ ಮಕ್ಕಳಲ್ಲಿ ಸಂಸ್ಕೃತಿಯ ಬೀಜ ಬಿತ್ತುವ ಕೆಲಸವಾಗಬೇಕು: ಕವಿ ವೆಂಕಟೇಶ್‍ ಮೂರ್ತಿ

ವಾರ್ತಾಭಾರತಿವಾರ್ತಾಭಾರತಿ7 Aug 2018 11:18 PM IST
share
ಎಳೆಯ ಮಕ್ಕಳಲ್ಲಿ ಸಂಸ್ಕೃತಿಯ ಬೀಜ ಬಿತ್ತುವ ಕೆಲಸವಾಗಬೇಕು: ಕವಿ ವೆಂಕಟೇಶ್‍ ಮೂರ್ತಿ

ಮೈಸೂರು,ಆ.7: ಪುಸ್ತಕ ಮಸ್ತಕಕ್ಕೆ ಬರದೇ ಸಾರ್ಥಕತೆ ಪಡೆಯಲಾರದು, ಅದಕ್ಕಾಗಿ ಎಳೆಯ ಮಕ್ಕಳಲ್ಲಿ ಸಂಸ್ಕೃತಿಯ ಬೀಜ ಬಿತ್ತುವ ಕೆಲಸವಾಗಬೇಕು ಎಂದು ಖ್ಯಾತ ಕವಿ, ಲೇಖಕ ಡಾ.ಹೆಚ್.ಎಸ್.ವೆಂಕಟೇಶಮೂರ್ತಿ ತಿಳಿಸಿದರು.

ವಿಜಯನಗರದ ಮೊದಲನೇ ಹಂತದಲ್ಲಿರುವ ಭಾರತೀಯ ವಿದ್ಯಾಭವನ ಭವನ್ಸ್ ಪ್ರಿಯಂವದಾ ಬಿರ್ಲಾ ಇನ್ಸಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ವತಿಯಿಂದ ಸಂಸ್ಥೆಯ ಮಂಗಳವಾರ ನಾ.ರಾಮಾನುಜ ರಚಿತ ನಗೆ ನಾಟಕ 'ಗ್ರೀನ್ ರೂಂ ಗಲಾಟೆ' ಕೃತಿ ಲೋಕಾರ್ಪಣೆಗೊಳಿಸಿ, ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ರಾಮಾನುಜ ಅವರು ನಿಜವಾಗಿಯೂ ಸೊಗಸಾಗಿ ನಾಟಕಗಳನ್ನು ಬರೆಯುವವರು. ಇದಕ್ಕೂ ಹೆಚ್ಚಿನ ಹಾಸ್ಯ ನಾಟಕ ಬರೆಯುವ ಸಾಮರ್ಥ್ಯ ಅವರಲ್ಲಿದೆ. ಅವರು ಬದುಕನ್ನು ಕುರಿತು ಬರೆದರೂ ಅದು ಅದ್ಭುತ ಕೃತಿಯಾಗಲಿದೆ. ಕನ್ನಡ ಸಂಸ್ಕೃತಿಯನ್ನು ಕಟ್ಟಿಕೊಡುವ ಅದ್ಭುತ ಕಲಾಪ್ರಯೋಗ ಅದು. ಪಟ್ಟು ಹಿಡಿದು ಇಂಥ ಕೃತಿ ಬರೆಸಿ ಎಂದರು. ವೆಂಕಣಯ್ಯ ಅವರ ಹೆಸರಿನಲ್ಲಿ ಗ್ರಂಥಮಾಲೆ ತೆರೆದು ಅವರ ನೆನಪನ್ನು ಚಿರಂತನವಾಗಿಸುವ ಕೆಲಸ ಸಂಸ್ಥೆ ಮಾಡುತ್ತಿದೆ. ಮರಣಹೊಂದಿದವರನ್ನು ಚಿರಂತನವಾಗಿರಿಸುವುದೇ ಸ್ಮರಣೆ ಎಂಬುದು ನನ್ನ ಭಾವನೆ. ಇಲ್ಲಿನ ಹಿರಿಯರು ಕನ್ನಡವನ್ನು ಇನ್ನೂ ಜೀವಂತವಾಗಿರಿಸಿದ್ದಾರೆ. ಹಿರಿಯರ ಜೊತೆ ಕಿರಿಯರು ಕೂಡ ಸಮಪಾಲು ತೆಗೆದುಕೊಳ್ಳಬೇಕು. ಕಿರಿಯರು ದೊಡ್ಡ ಪರಂಪರೆಯ ವಾರಸುದಾರರು. ದೊಡ್ಡವರು ಮಾತನಾಡುವಾಗ ಅದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು.

ಎಳೆಯ ಮಕ್ಕಳಲ್ಲಿ ಸಂಸ್ಕೃತಿಯ ಬೀಜ ಬಿತ್ತುವ ಕೆಲಸವಾಗಬೇಕು. ಅವರಿಗೆ ಬೇಕೋ, ಬೇಡವೋ, ಬಲವಂತವಾಗಿಯಾದರೂ ಈ ಬಿತ್ತನೆ ಕೆಲಸ ನಡೆಯಬೇಕು. ಅವಮಾನವಾದರೂ ಸರಿಯೇ, ಅಪಹಾಸ್ಯಕ್ಕೀಡಾದರೂ ಚಿಂತೆಯಿಲ್ಲ. ನಾವು ಮಾಡಬಹುದಾದ ಕೆಲಸವನ್ನು ದೃಢವಾಗಿ ಮಾಡಬೇಕಿದೆ. ಹಾಗೆ ಮಾಡದಿದ್ದಲ್ಲಿ ನಮ್ಮ ದೇಶದ ಭವಿಷ್ಯ ಅಂಧಕಾರವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು ಎಂದರು.

ಕದಂಬ ರಂಗ ವೇದಿಕೆ ಅಧ್ಯಕ್ಷ ರಾಜಶೇಖರ್ ಕದಂಬ ಮಾತನಾಡಿ, ಗ್ರೀನ್ ರೂಂ ಗಲಾಟೆ ನಾಟಕದಲ್ಲಿ ತಿಳಿಯಾದ ಹಾಸ್ಯವಿದೆ. ಚಿಕ್ಕದಾದರೂ ಚೊಕ್ಕದಾಗಿದೆ. ಪೂರ್ಣ ಅವಧಿಯ ನಾಟಕ ಸೃಷ್ಟಿ ಮಾಡಿಕೊಟ್ಟರೆ ನಮ್ಮ ವೇದಿಕೆಯಿಂದ ರಂಗದ ಮೇಲೆ ತರುತ್ತೇವೆ. ಅಂಥಹ ನಾಟಕ ಮಾಡಿಕೊಡಿ, ಕಾಮಿಡಿ ಕಿಲಾಡಿಗೆ ಪುಸ್ತಕವನ್ನು ಕಳುಹಿಸಿ ಕೊಟ್ಟು ಅಲ್ಲಿ ನಟಿಸುವಂತೆ ಸಲಹೆ ನೀಡುತ್ತೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ವಿದ್ಯಾಭವನದ ಅಧ್ಯಕ್ಷ  ಡಾ.ಎ.ವಿ.ನರಸಿಂಹಮೂರ್ತಿ, ಎಂ.ಚಂದ್ರಶೇಖರ್, ಟಿ.ಎಸ್.ಛಾಯಾಪತಿ ಡಾ.ಎ.ಟಿ.ಭಾಷ್ಯಂ, ಕೃತಿಯ ಕರ್ತೃ ನಾ.ರಾಮಾನುಜ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X