Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶ್ಯನ್ ಗೇಮ್ಸ್: ಹೊರಗುಳಿದ...

ಏಶ್ಯನ್ ಗೇಮ್ಸ್: ಹೊರಗುಳಿದ ವೇಟ್‌ಲಿಫ್ಟರ್ ಮಿರಾಬಾಯಿ ಚಾನು

ವಾರ್ತಾಭಾರತಿವಾರ್ತಾಭಾರತಿ7 Aug 2018 11:49 PM IST
share
ಏಶ್ಯನ್ ಗೇಮ್ಸ್: ಹೊರಗುಳಿದ ವೇಟ್‌ಲಿಫ್ಟರ್ ಮಿರಾಬಾಯಿ ಚಾನು

ಹೊಸದಿಲ್ಲಿ, ಆ.7: ಬೆನ್ನುನೋವಿನಿಂದ ಸಂಪೂರ್ಣ ಚೇತರಿಸಿಕೊಳ್ಳಲು ವಿಫಲವಾಗಿರುವ ವಿಶ್ವ ಚಾಂಪಿಯನ್ ವೇಟ್‌ಲಿಫ್ಟರ್ ಸೈಖೊಮ್ ಮಿರಾಬಾಯಿ ಚಾನು ಪ್ರತಿಷ್ಠಿತ ಏಶ್ಯನ್ ಗೇಮ್ಸ್‌ನಿಂದ ಹೊರಗುಳಿದಿದ್ದಾರೆ.

‘‘ಹೌದು, ಮಿರಾಬಾಯಿ ಚಾನು ಏಶ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುವುದಿಲ್ಲ’’ ಎಂದು ಭಾರತೀಯ ವೇಟ್‌ಲಿಫ್ಟಿಂಗ್ ಫೆಡರೇಶನ್(ಐಡಬ್ಲುಎಫ್)ಕಾರ್ಯದರ್ಶಿ ಸಹದೇವ್ ಯಾದವ್ ಸುದ್ದಿಸಂಸ್ಥೆಗೆ ದೃಢಪಡಿಸಿದ್ದಾರೆ.

ಈ ವರ್ಷಾಂತ್ಯದಲ್ಲಿ ನಡೆಯುವ ಒಲಿಂಪಿಕ್ಸ್ ಕ್ವಾಲಿಫೈಯರ್‌ಗೆ ಫಿಟ್ ಇರುವ ಉದ್ದೇಶದಿಂದ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಚಾನು ಆ.18 ರಿಂದ ಜಕಾರ್ತದಲ್ಲಿ ಆರಂಭವಾಗಲಿರುವ ಏಶ್ಯನ್ ಗೇಮ್ಸ್ ನಿಂದ ಹೊರಗುಳಿಯಲೇಬೇಕು ಎಂದು ರಾಷ್ಟ್ರೀಯ ಕೋಚ್ ವಿಜಯ್ ಶರ್ಮಾ ಶಿಫಾರಸು ಮಾಡಿದ ಬೆನ್ನಿಗೇ ಈ ನಿರ್ಧಾರಕ್ಕೆ ಬರಲಾಗಿದೆ.

ಚಾನು ಮೇ ತಿಂಗಳಿಂದ ಬೆನ್ನುನೋವಿನಿಂದ ಬಳಲುತ್ತಿದ್ದು ಇನ್ನಷ್ಟೇ ಪೂರ್ಣಪ್ರಮಾಣದ ವೇಟ್ ಲಿಫ್ಟಿಂಗ್ ತರಬೇತಿಯಲ್ಲಿ ಪಾಲ್ಗೊಳ್ಳಬೇಕಾಗಿದೆ.

‘‘ಒಲಿಂಪಿಕ್ಸ್ ಕ್ವಾಲಿಫೈಯರ್ ಟೂರ್ನಿ ಹತ್ತಿರವಾಗುತ್ತಿದೆ. ಇದು ಏಶ್ಯನ್ ಗೇಮ್ಸ್‌ಗಿಂತಲೂ ಪ್ರಮುಖವಾಗಿದೆ. ಒಲಿಂಪಿಕ್ಸ್ ಕ್ವಾಲಿಫೈಯರ್‌ಗೆ ಮೊದಲು ಗಾಯದ ಭೀತಿಯಿಂದ ಬಚಾವಾಗಲು ಚಾನು ಟೂರ್ನಿಯಿಂದ ದೂರವುಳಿಯುವುದೇ ಉತ್ತಮ’’ ಎಂದು ಶರ್ಮಾ ಫೆಡರೇಶನ್‌ಗೆ ಸಲಹೆ ನೀಡಿದ್ದಾರೆ.

ಮಣಿಪುರದ ವೇಟ್‌ಲಿಫ್ಟರ್ ಚಾನು ಮುಂಬರುವ ಏಶ್ಯನ್ ಗೇಮ್ಸ್‌ನಿಂದ ದೂರ ಉಳಿದಿರುವುದು ಭಾರತಕ್ಕೆ ತೀವ್ರ ಹಿನ್ನಡೆವುಂಟು ಮಾಡಿದೆ. ಚಾನು ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸುವ ಓರ್ವ ಪ್ರಬಲ ಸ್ಪರ್ಧಿಯಾಗಿದ್ದರು.

‘‘ನನಗೆ ಮೇ 25 ರಿಂದ ಬೆನ್ನುನೋವು ಕಾಣಿಸಿಕೊಂಡಿದೆ. ದಿಲ್ಲಿ ಹಾಗೂ ಮುಂಬೈ ಸಹಿತ ಹಲವು ನಗರಗಳಿಗೆ ಚಿಕಿತ್ಸೆಗಾಗಿ ತೆರಳಿದ್ದೆ. ಆದರೆ, ನನ್ನ ಬೆನ್ನುನೋವಿಗೆ ಕಾರಣವೇನೆಂದು ವೈದ್ಯರಿಗೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ವೈದ್ಯರು ನಡೆಸಿದ್ದ ಎಲ್ಲ ಪರೀಕ್ಷೆಗಳು ಸಕಾರಾತ್ಮಕವಾಗಿವೆ. ಎಕ್ಸ್ ರೇನಲ್ಲೂ ಏನೂ ಸಮಸ್ಯೆ ಕಂಡುಬಂದಿಲ್ಲ’’ಎಂದು ಮಿರಾಬಾಯಿ ಚಾನು ಹೇಳಿದ್ದಾರೆ.

ನ.1 ರಿಂದ ವಿಶ್ವ ಚಾಂಪಿಯನ್‌ಶಿಪ್ ಅಶ್ಗಬಾಟ್‌ನಲ್ಲಿ ಆರಂಭವಾಗಲಿದ್ದು, ಇದು ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಇರುವ ಮೊದಲ ಟೂರ್ನಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X