Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಮ್ರಾನ್ ಪ್ರಮಾಣವಚನ ವಿಳಂಬ?

ಇಮ್ರಾನ್ ಪ್ರಮಾಣವಚನ ವಿಳಂಬ?

ವಾರ್ತಾಭಾರತಿವಾರ್ತಾಭಾರತಿ9 Aug 2018 9:18 PM IST
share
ಇಮ್ರಾನ್ ಪ್ರಮಾಣವಚನ ವಿಳಂಬ?

 ಇಸ್ಲಾಮಾಬಾದ್, ಆ. 9: ಪಾಕಿಸ್ತಾನದ ಮುಂದಿನ ಪ್ರಧಾನಿ ಎಂಬುದಾಗಿ ಭಾವಿಸಲಾಗಿರುವ ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್‌ರ ಪ್ರಮಾಣವಚನ ಈ ಮೊದಲು ಘೋಷಿಸಿರುವಂತೆ ಆಗಸ್ಟ್ 11ರಂದು ನಡೆಯಲಾರದು ಎಂದು ಹೇಳಲಾಗಿದೆ.

ಪ್ರಮಾಣವಚನ ಕಾರ್ಯಕ್ರಮವು ಆಗಸ್ಟ್ 16 ಅಥವಾ 17ರಂದು ನಡೆಯುವ ಸಾಧ್ಯತೆಗಳಿವೆ ಎಂದು ವರದಿಗಳು ಹೇಳಿವೆ.

ತಾನು ಆಗಸ್ಟ್ 11ರಂದು ಪ್ರಮಾಣವಚನ ಸ್ವೀಕರಿಸಲು ಉದ್ದೇಶಿಸಿದ್ದೇನೆ ಎಂಬುದಾಗಿ ಇಮ್ರಾನ್ ಖಾನ್ ಪಿಟಿಐ ನಾಯಕರಿಗೆ ಹೇಳಿದ್ದರು.

ಆದಾಗ್ಯೂ, ಪ್ರಮಾಣವಚನ ಕಾರ್ಯಕ್ರಮ ಆಗಸ್ಟ್ 16 ಅಥವಾ 17ರಂದು ನಡೆಯುವ ಸಾಧ್ಯತೆಯಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ನೂತನ ಪ್ರಧಾನಿಯನ್ನು ಆರಿಸಲು ಪಿಟಿಐ ಪಕ್ಷವು ಸಂಸತ್ತಿನಲ್ಲಿ ಇನ್ನೂ ಅಗತ್ಯ ಬಲವನ್ನು ಹೊಂದಿಲ್ಲದಿರುವ ಹಿನ್ನೆಲೆಯಲ್ಲಿ ಈ ವಿಳಂಬವಾಗಿರಬಹುದು ಎಂದು ವರದಿಗಳು ಹೇಳಿವೆ.

9 ಕ್ಷೇತ್ರಗಳ ಫಲಿತಾಂಶಕ್ಕೆ ತಡೆ

 ಈ ನಡುವೆ, ಪಾಕಿಸ್ತಾನದಲ್ಲಿ ಸರಕಾರ ರಚನೆಗೆ ಇನ್ನೊಂದು ಅಡಚಣೆ ಎದುರಾಗಿದೆ. ಆ ದೇಶದ ಚುನಾವಣಾ ಆಯೋಗವು ಜುಲೈ 25ರಂದು ನಡೆದ ಚುನಾವಣೆಯ ಅಂತಿಮ ಫಲಿತಾಂಶವನ್ನು ಈ ವಾರ ಪ್ರಕಟಿಸಿದೆಯಾದರೂ, ರಾಷ್ಟ್ರೀಯ ಸಂಸತ್ತಿನ 9 ಕ್ಷೇತ್ರಗಳು ಮತ್ತು ಪ್ರಾಂತೀಯ ಅಸೆಂಬ್ಲಿಯ 17 ಕ್ಷೇತ್ರಗಳ ಫಲಿತಾಂಶವನ್ನು ತಡೆಹಿಡಿದಿದೆ.

ಇದು ಸರಕಾರ ರಚನೆಯ ಪ್ರಕ್ರಿಯೆ ಮೇಲೆ ಪರಿಣಾಮ ಬೀರಿದೆ ಹಾಗೂ ವಿವಾದಕ್ಕೂ ಕಾರಣವಾಗಿದೆ.

ಪಾಕಿಸ್ತಾನ ಸಂಸತ್ತು ನ್ಯಾಶನಲ್ ಅಸೆಂಬ್ಲಿಯ 272 ಸ್ಥಾನಗಳಿಗಾಗಿ ನಡೆದ ಚುನಾವಣೆಯಲ್ಲಿ ಪಿಟಿಐ ಪಕ್ಷ ಈ ಮೊದಲು 116 ಸ್ಥಾನಗಳನ್ನು ಗಳಿಸಿತ್ತು. ಈಗ ಅದರ ಸ್ಥಾನಗಳ ಸಂಖ್ಯೆ 112ಕ್ಕೆ ಇಳಿದಿದೆ.

ಅದೇ ರೀತಿ, ಅದರ ಮಿತ್ರಪಕ್ಷ ಬಲೂಚಿಸ್ತಾನ ಅವಾಮಿ ಪಾರ್ಟಿಯ ಸ್ಥಾನಗಳ ಸಂಖ್ಯೆ 4ರಿಮದ 3ಕ್ಕೆ ಇಳಿದಿದೆ.

ಫಲಿತಾಂಶಗಳನ್ನು ಯಾಕೆ ತಡೆಹಿಡಿಯಲಾಯಿತು ಎಂಬುದಕ್ಕೆ ಕಾರಣಗಳನ್ನು ಆಯೋಗವು ನೀಡಿಲ್ಲವಾದರೂ, ಕೆಲವು ಕ್ಷೇತ್ರಗಳಲ್ಲಿ ರಹಸ್ಯ ಮತದಾನದ ನಿಯಮಗಳನ್ನು ಉಲ್ಲಂಘಿಸಿರುವುದಕ್ಕಾಗಿ ಈ ಕ್ರಮಗಳನ್ನು ತೆಗೆದುಕೊಂಡಿರುವ ಸಾಧ್ಯತೆಯಿದೆ ಎಂದು ಊಹಿಸಲಾಗಿದೆ.

ಚುನಾವಣಾ ಕಮಿಶನರ್ ಮಲಗಿದ್ದರು: ಮುಖ್ಯ ನ್ಯಾಯಾಧೀಶ

ಪಾಕಿಸ್ತಾನದ ಮುಖ್ಯ ಚುನಾವಣಾ ಕಮಿಶನರ್ ನ್ಯಾಯಮೂರ್ತಿ (ನಿವೃತ್ತ) ಸರ್ದಾರ್ ಮುಹಮ್ಮದ್ ರಝಾರನ್ನು ಟೀಕಿಸಿರುವ ಮುಖ್ಯ ನ್ಯಾಯಾಧೀಶ ಸಾಕಿಬ್ ನಿಸಾರ್, ಮತದಾನದ ದಿನದಂದು ತಾನು ಅವರಿಗೆ ಮೂರು ಬಾರಿ ಕರೆ ಮಾಡಿದೆ, ಆದರೆ ಅವರು ಫೋನ್ ಸ್ವೀಕರಿಸಿಲ್ಲ, ಬಹುಶಃ ಅವರು ಮಲಗಿರಬೇಕು ಎಂದಿದ್ದಾರೆ.

ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್ (ಪಿಟಿಐ) ಪಕ್ಷದ ಅಭ್ಯರ್ಥಿ ಆಬಿದಾ ರಝಾರ ನಾಮಪತ್ರವನ್ನು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಮೊಕದ್ದಮೆಯೊಂದರ ವಿಚಾರಣೆಯ ವೇಳೆ ಮುಖ್ಯ ನ್ಯಾಯಾಧೀಶ ನಿಸಾರ್ ಈ ಮಾತುಗಳನ್ನು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X