Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತೀಯತೆ ಯಾವುದೇ ಧರ್ಮ, ಜನಾಂಗದ...

ಭಾರತೀಯತೆ ಯಾವುದೇ ಧರ್ಮ, ಜನಾಂಗದ ಸೊತ್ತಲ್ಲ: ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ

ವಾರ್ತಾಭಾರತಿವಾರ್ತಾಭಾರತಿ11 Aug 2018 5:33 PM IST
share
ಭಾರತೀಯತೆ ಯಾವುದೇ ಧರ್ಮ, ಜನಾಂಗದ ಸೊತ್ತಲ್ಲ: ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ

ಶಿವಮೊಗ್ಗ, ಆ. 11: ಜಾತ್ಯಾತೀತ ತತ್ವವು ನಮ್ಮ ದೇಶದ ದೊಡ್ಡ ಆಸ್ತಿಯಾಗಿದೆ. ಎಲ್ಲರೂ ನಮ್ಮವರೇ ಎಂದುಕೊಂಡು ನಾವು ಬೆಳೆದುಕೊಂಡು ಬಂದಿದ್ದೇವೆ. ಈ ಕಾರಣದಿಂದಲೇ ಪ್ರಜಾಪ್ರಭುಪ್ರಭುತ್ವ ವ್ಯವಸ್ಥೆ ಬಲಿಷ್ಠವಾಗಿದೆ ಎಂದು ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಅಭಿಪ್ರಾಪಟ್ಟಿದ್ದಾರೆ. 

ಮಹಾತ್ಮಾಗಾಂಧಿ ಗ್ರಾಮೀಣಾಭಿವೃದ್ದಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್, ರಾಮಕೃಷ್ಣ ಚಾರಿಟಬಲ್ ಟ್ರಸ್ಟ್ ಮತ್ತು ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಕುವೆಂಪು ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ 'ಪ್ರಜಾಪ್ರಭುತ್ವ ಬಲವರ್ಧನೆಯಲ್ಲಿ ವಿದ್ಯಾರ್ಥಿ ಹಾಗೂ ಯುವಜನರ ಪಾತ್ರ' ಎಂಬ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಭಾರತೀಯತೆ ಎನ್ನುವುದು ಯಾವುದೇ ಧರ್ಮ, ಜನಾಂಗದ ಸೊತ್ತಲ್ಲ. ಇದನ್ನು ಪ್ರತಿಯೋರ್ವರು ಅರಿತುಕೊಳ್ಳಬೇಕಾಗಿದೆ. ದೇಶ ಸುತ್ತಿ ಕೋಶ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ನಮ್ಮ ಕಣ್ಣು ತೆರೆಸುತ್ತದೆ. ಭಾರತೀಯ ಸಂಸ್ಕೃಯಲ್ಲಿ ಎಲ್ಲವೂ ಅಡಕಗೊಂಡಿದೆ. ಇದನ್ನು ಮನಗಂಡು ನಾವೆಲ್ಲ ಮುಂದೆ ಸಾಗಬೇಕು ಎಂದು ತಿಳಿಸಿದರು. 

ಪ್ರಪಂಚದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯೇ ಎಲ್ಲದಕ್ಕಿಂತ ಶ್ರೇಷ್ಠ ಎಂಬುವುದು ಖಂಡಿತ ಸರಿಯಲ್ಲ. ಆದರೆ ಇನ್ನಿತರ ಆಡಳಿತ ಪದ್ದತಿಗಿಂತ ಪ್ರಜಾಪ್ರಭುತ್ವ ಉತ್ತಮವಾಗಿದೆ ಎಂಬುವುದು ಸತ್ಯವಾಗಿದೆ. ಉತ್ತರ ಕೋರಿಯಾದಲ್ಲಿ ಮಿಲಿಟರಿ ಆಡಳಿತ, ಚೈನಾದಲ್ಲಿ ಕಮ್ಯೂನಿಸ್ಟ್ ಆಡಳಿತವಿದೆ. ಅಮೆರಿಕಾ, ಯೂರೋಪ್ ದೇಶಗಳಲ್ಲಿ ಪ್ರಜಾಪ್ರಭುತ್ವ ಪಾಲಿಸಿಕೊಂಡು ಬರಲಾಗುತ್ತಿದ್ದರೂ, ಭಾರತದ ಪ್ರಜಾಪ್ರಭುತ್ವ ವಿಶಿಷ್ಠವಾಗಿದೆ ಎಂದು ಅಭಿಪ್ರಾಯಪಟ್ಟರು. 

ಕಡಿಮೆಯಾಗಿಲ್ಲ: ದೇಶದ ಯುವಜನರಲ್ಲಿ ದೇಶಾಭಿಮಾನ ಕಡಿಮೆಯಾಗಿದೆ ಎಂದೆನಿಸುತ್ತಿಲ್ಲ. ನಮ್ಮ ಪೀಳಿಗೆಗಿಂತ ಇಂದಿನ ಪೀಳಿಗೆಯಲ್ಲಿಯೇ ದೇಶಾಭಿಮಾನ ಹೆಚ್ಚಿದೆ ಎಂದು ಪಿ.ಜಿ.ಆರ್.ಸಿಂಧ್ಯಾ ಇದೇ ಸಂದರ್ಭದಲ್ಲಿ ಹೇಳಿದರು. 

ಸಮಾರಂಭದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಮಾದೇಶ್ ಹೆಗ್ಡೆ, ಕಾಲೇಜು ಪ್ರಾಂಶುಪಾಲ ಮಧು, ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ದಿ ಟ್ರಸ್ಟ್ ನಿರ್ದೇಶಕ ಕೆ.ಸಿ.ಬಸವರಾಜ್ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X