Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚಿತ್ತಾಲರು ಮುಂಬೈ ಕನ್ನಡ ಸಾಹಿತ್ಯದ...

ಚಿತ್ತಾಲರು ಮುಂಬೈ ಕನ್ನಡ ಸಾಹಿತ್ಯದ ರೂವಾರಿ: ಜಯಂತ್ ಕಾಯ್ಕಿಣಿ

ಯಶವಂತ ಚಿತ್ತಾಲರ ಬದುಕು-ಬರಹ ಸಂವಾದ

ವಾರ್ತಾಭಾರತಿವಾರ್ತಾಭಾರತಿ11 Aug 2018 8:34 PM IST
share
ಚಿತ್ತಾಲರು ಮುಂಬೈ ಕನ್ನಡ ಸಾಹಿತ್ಯದ ರೂವಾರಿ: ಜಯಂತ್ ಕಾಯ್ಕಿಣಿ

ಬೆಂಗಳೂರು, ಆ.11: ಮುಂಬೈನಲ್ಲಿ ಕನ್ನಡ ಸಾಹಿತ್ಯವನ್ನು ಬೆಳೆಸಿ ಉಳಿಸಿದ ಕೀರ್ತಿ ಹಿರಿಯ ಸಾಹಿತಿ ಯಶವಂತ ಚಿತ್ತಾಲರಿಗೆ ಸಲ್ಲಬೇಕೆಂದು ಸಾಹಿತಿ ಜಯಂತ್ ಕಾಯ್ಕಿಣಿ ಶ್ಲಾಘಿಸಿದರು.

ಶನಿವಾರ ನಗರದ ಆನಂದ ವೃತ್ತದ ಕೆಪಿಟಿಸಿಎಲ್ ಕಚೇರಿಯಲ್ಲಿ ಕೆಪಿಟಿಸಿಎಲ್ ಲೆಕ್ಕಾಧಿಕಾರಿಗಳ ಸಂಘ ಆಯೋಜಿಸಿದ ಯಶವಂತ ಚಿತ್ತಾಲರ ಬದುಕು-ಬರಹ ಸಂವಾದದಲ್ಲಿ ಮಾತನಾಡಿದ ಅವರು, ಯಶವಂತ ಚಿತ್ತಾಲರು ದೈಹಿಕವಾಗಿ ರಾಜ್ಯವನ್ನು ಬಿಟ್ಟಿದ್ದರು. ಆದರೆ, ಮುಂಬೈಯಲ್ಲಿ ಕಾಯಕ ಮಾಡಿಕೊಂಡೆ, ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ತಮ್ಮ ಸಾಹಿತ್ಯದ ಮೂಲಕ ಜಗತ್ತಿಗೆ ಉಣ ಬಡಿಸಿದರು ಎಂದು ಸ್ಮರಿಸಿದರು.

ಈಗಿನ ಹೊಸ ತಲೆಮಾರು ವಾಟ್ಸ್ ಆ್ಯಪ್, ಫೇಸ್‌ಬುಕ್ ಇತರೆ ಸಾಮಾಜಿಕ ಮಾಧ್ಯಗಳಲ್ಲಿನ ವಿಷಯಗಳ ಕುರಿತು ಚರ್ಚೆ ಮಾಡುತ್ತಾರೆ. ಇದರಿಂದ ಯಾವುದೆ ವಿಷಯದ ಕುರಿತು ಆಳವಾಗಿ ತಿಳಿಯಲು ಸಾಧ್ಯವಿಲ್ಲ. ಹಾಗೂ ನಮ್ಮೊಳಗೆ ಸಂವೇದನೆಯು ಹುಟ್ಟುವುದಿಲ್ಲ ಎಂದ ಅವರು, ಯಶವಂತ ಚಿತ್ತಾಲರ ಸಾಹಿತ್ಯವನ್ನು ಓದುವ ಮೂಲಕ ಸಂವೇದನಾಶೀಲವಾಗಿ ಬದುಕುವುದನ್ನು ಕರಗತ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.

ಕೃತಿಗಳು ನಮ್ಮನ್ನು ಮೀರಿ ಬೆಳೆಯಬೇಕು ಎನ್ನುತ್ತಿದ್ದ ಚಿತ್ತಾಲರ ಕಾದಂಬರಿಗಳಲ್ಲಿ ಕುಟುಂಬದ ಸಾಂಗತ್ಯವಿತ್ತು. ಅಷ್ಟೇ ಅಲ್ಲದೆ, 70ರ ದಶಕದಲ್ಲಿಯೇ ಮುಂದೆ ನಡೆಯಬಹುದಾದ ಎಷ್ಟೋ ಘಟನೆಗಳು, ದುಡ್ಡೇ ದೊಡ್ಡಪ್ಪ, ಮಾಧ್ಯಮ-ಅಂಡರ್‌ವರ್ಲ್ಡ್, ಬಿಲ್ಡರ್ ಹಾಗೂ ಸೂಕ್ಷ್ಮ ಮನಸ್ಸಿನವರ ಬಗ್ಗೆ ತಮ್ಮ ಸಾಹಿತ್ಯದ ಮೂಲಕ ದಾಖಲಿಸಿದ್ದಾರೆ ಎಂದು ಅವರು ವಿವರಿಸಿದರು.

ಹುಟ್ಟುತ್ತಲೆ ಯಾರೂ ಮಾನವೀಯ ಗುಣಗಳನ್ನು ಪಡೆದುಕೊಂಡಿರುವುದಿಲ್ಲ. ಉತ್ತಮ ವಿಚಾರ ಹಾಗೂ ಮೌಲ್ಯಗಳನ್ನು ಪಡೆಯುತ್ತಲೆ ಮನುಷ್ಯತ್ವದೆಡೆಗೆ ಸಾಗಬೇಕೆಂಬುದು ಯಶವಂತ ಚಿತ್ತಾಲರ ಆಶಯವಾಗಿತ್ತು. ಆ ನಿಟ್ಟಿನಲ್ಲಿ ಯುವಜನತೆ ಸಾಗಬೇಕು ಎಂದು ಅವರು ಆಶಿಸಿದರು.

ಸಂವಾದದಲ್ಲಿ ಕೆಪಿಟಿಸಿಎಲ್ ಲೆಕ್ಕಾಧಿಕಾರಿ ಸಂಘದ ಅಧ್ಯಕ್ಷ ಎಚ್.ಎಲ್.ಮುಕುಂದ, ಮಾಜಿ ಅಧ್ಯಕ್ಷ ಬಿ.ಟಿ.ರಾಮನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X