Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಫ್‌ಐಆರ್ ದಾಖಲಿಸಿದರೆ ಮಾತ್ರ ಸರಿಯಾದ...

ಎಫ್‌ಐಆರ್ ದಾಖಲಿಸಿದರೆ ಮಾತ್ರ ಸರಿಯಾದ ತನಿಖೆ ಸಾಧ್ಯ: ರವಿಕಿರಣ್

ಶಿರೂರು ಸ್ವಾಮೀಜಿ ನಿಗೂಢ ಸಾವಿನ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ11 Aug 2018 9:08 PM IST
share
ಎಫ್‌ಐಆರ್ ದಾಖಲಿಸಿದರೆ ಮಾತ್ರ ಸರಿಯಾದ ತನಿಖೆ ಸಾಧ್ಯ: ರವಿಕಿರಣ್

ಉಡುಪಿ, ಆ.11: ಶಿರೂರು ಸ್ವಾಮೀಜಿ ಸಾವಿನ ಬಗ್ಗೆ ಹಲವು ಸಂದೇಹ, ಅನುಮಾನಗಳಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯ ಕೇಳಿಬರುತ್ತಿವೆ. ಆದರೆ ಈ ಪ್ರಕರಣದ ಬಗ್ಗೆ ಸರಿಯಾದ ತನಿಖೆ ನಡೆಯಬೇಕಾದರೆ ಮೊದಲು ಯೋಗ್ಯ ಹಾಗೂ ಕಾನೂನುಬದ್ಧ ಪ್ರಥಮ ವರ್ತಮಾನ ವರದಿ(ಎಫ್‌ಐಆರ್) ದಾಖಲಾಗಬೇಕು. ಈವರೆಗೆ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲೇ ಆಗಿಲ್ಲ ಎಂದು ಶಿರೂರು ಶ್ರೀ ಅಭಿಮಾನಿ ಸಮಿತಿಯ ಕಾನೂನು ಸಲಹೆಗಾರ ಹಾಗೂ ಹಿರಿಯ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ್ ತಿಳಿಸಿದ್ದಾರೆ.

ಶಿರೂರು ಶ್ರೀ ಅಭಿಮಾನಿ ಸಮಿತಿಯ ವತಿಯಿಂದ ಶನಿವಾರ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್ ಬಳಿಯ ಮಥುರಾ ಛತ್ರದಲ್ಲಿ ನಡೆದ ಸ್ವಾಮೀಜಿ ಸಾವಿನ ಕುರಿತ ಮುಂದಿನ ಹೋರಾಟದ ಕುರಿತ ಸಮಾಲೋಚನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಇದೀಗ ಈ ಪ್ರಕರಣದ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು ಅಸ್ವಾಭಾವಿಕ ಮರಣದ ಕುರಿತ ಯುಡಿಆರ್ ಮಾತ್ರ. ನಮಗೆ ಸಾವಿನ ಬಗ್ಗೆ ಸಂಶಯವಿದ್ದರೆ ಕಾನೂನು ಬದ್ಧವಾದ ದೂರನ್ನು ನೀಡಿ ಪ್ರಥಮ ವರ್ತಮಾನ ವರದಿ ದಾಖಲಾಗುವಂತೆ ಮಾಡಬೇಕು. ಆಗ ಮಾತ್ರ ಪೊಲೀಸರಿಗೆ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸಲು ಸಾಧ್ಯವಾಗುತ್ತದೆ ಎಂದರು.

ಮರಣೋತ್ತರ ಪರೀಕ್ಷೆ ವರದಿ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ವಿಷದ ಅಂಶ ಇರುವುದು ಕಂಡು ಬಂದರೆ ಈಗ ದಾಖಲಾಗಿರುವ ಯುಡಿಆರ್‌ನ್ನು ಸ್ವಯಂಪ್ರೇರಿತವಾಗಿ ಪ್ರಥಮ ವರ್ತಮಾನ ವರದಿಯಾಗಿ ಪರಿವರ್ತನೆ ಮಾಡಿಕೊಳ್ಳುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಇದು ಅರ್ಥ ಇಲ್ಲದ ವಿಚಾರವಾಗಿದೆ ಎಂದು ಅವರು ಹೇಳಿದರು.

ನಾನು ದೂರು ಬರೆದುಕೊಡುತ್ತೇನೆ. ಯಾರಾದಾರೂ ಧೈರ್ಯವಂತರು ಮುಂದೆ ಬಂದು ದೂರು ಕೊಡುವ ಕೆಲಸ ಮಾಡಬೇಕು. ನಾವು ಯಾರ ಮೇಲೆಯೂ ಸಂಶಯ ಇದೆ ಎಂದು ಹೇಳಿ ದೂರು ಕೊಡಬೇಕಾಗಿಲ್ಲ. ಅಪರಾಧ ನಡೆದಿರುವ ಬಗ್ಗೆ ದೂರು ಕೊಟ್ಟರೆ ಸಾಕು. ಮುಂದೆ ಅದನ್ನು ಪತ್ತೆ ಮಾಡುವ ಕೆಲಸ ಪೊಲೀಸರಿಗೆ ಇರುತ್ತದೆ. ದೂರು ನೀಡದಿದ್ದರೆ ನಾವು ಯಾವುದೇ ಹೋರಾಟ ಮಾಡಿದರೂ ವ್ಯರ್ಥವಾಗುತ್ತದೆ ಎಂದರು.

ಈ ಪ್ರಕರಣದ ತನಿಖೆ ವಿಳಂಬವಾದರೆ ಸ್ವಾಮೀಜಿಯ ದೇಹದಲ್ಲಿ ಪತ್ತೆಯಾದ ವಿಷವು ವಿಷವಾಗಿ ಉಳಿಯುವುದಿಲ್ಲ. ಅದು ವಿಷತ್ವವನ್ನೇ ಕಳೆದುಕೊಳ್ಳುತ್ತದೆ. ನಾಳೆ ವಿಷ ಇಲ್ಲ ಎಂದು ವರದಿ ಬಂದರೆ ಅದಕ್ಕೆ ತನಿಖೆಯಲ್ಲಿ ಆಗಿರುವ ವಿಳಂಬವೇ ಕಾರಣವಾಗುತ್ತದೆ. ಆದುದರಿಂದ ಸಕಾಲದಲ್ಲಿ ಎಫ್‌ಐಆರ್ ದಾಖಲು ಮಾಡಬೇಕು ಹಾಗೂ ಪೊಲೀಸರು ವಿಳಂಬ ಮಾಡದೆ ತನಿಖೆ ಮಾಡಬೇಕು ಎಂದು ಅವರು ತಿಳಿಸಿದರು.

ಕೇಮಾರು ಶ್ರೀಈಶ ವಿಠಲ ಸ್ವಾಮೀಜಿ ಮಾತನಾಡಿ, ಪೊಲೀಸ್ ಇಲಾಖೆ ಬೇಧಿಸುವ ನಂಬಿಕೆ ಇದೆ. ಈ ಪ್ರಕರಣದ ಬಗ್ಗೆ ಸರಿಯಾದ ತನಿಖೆ ಆಗಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂಬುದು ನಮ್ಮ ಆಗ್ರಹ. ನಮಗೆ ಯಾರ ಬಗ್ಗೆಯೂ ಸಂಶಯ ಇಲ್ಲ. ಅದು ತನಿಖೆಯಿಂದ ಗೊತ್ತಾಗಬೇಕು ಎಂದು ಹೇಳಿದರು.

ಮರಣದ ನಂತರ ಸ್ವಾಮೀಜಿಯನ್ನು ದೂಷಣೆ ಮಾಡುವುದು ಸರಿಯಲ್ಲ. ಯಾಕೆಂದರೆ ಅದಕ್ಕೆ ಉತ್ತರ ನೀಡಲು ಅವರು ಇಲ್ಲ. ಇದು ಯಾರಿಗೂ ಭೂಷಣ ಅಲ್ಲ. 48 ವರ್ಷಗಳ ಕಾಲ ಕೃಷ್ಣ ಪೂಜೆ ಮಾಡಿದ ಮತ್ತು ಮೂರು ಬಾರಿ ಪರ್ಯಾಯ ಪೀಠಾರೋಹಣ ಮಾಡಿರುವ ಸ್ವಾಮೀಜಿಗೆ ಇಂದು ಸಂತಾಪ ಸೂಚಿಸಲು ಹಾಗೂ ಅವರ ಪರ ಧ್ವನಿ ಎತ್ತಲು ಸಾಧ್ಯವಾಗುತ್ತಿಲ್ಲ ಎಂಬುದು ಬೇಸರದ ಸಂಗತಿ ಎಂದರು.

ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಮಾತನಾಡಿ, ಸ್ವಾಮೀಜಿ ಸಾವಿನ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಿಸುವ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದು ಕೊಳ್ಳಲಾಗುವುದು. ಆ.18ರಂದು ಸ್ವಾಮೀಜಿಗೆ ಬೃಹತ್ ಶ್ರದ್ಧಾಂಜಲಿ ಸಭೆ ಯನ್ನು ಏರ್ಪಡಿಸಲಾಗುವುದು. ನಂತರ ಸ್ವಾಮೀಜಿ ಸಾವಿನ ತನಿಖೆಯ ಬಗ್ಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಮನವಿ ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಯರಾಮ್ ಅಂಬೆಕಲ್ಲು, ಲಾತವ್ಯ ಆಚಾರ್ಯ, ಯುವ ಬ್ರಾಹ್ಮಣ ಪರಿಷತ್‌ನ ಮಾಜಿ ಅಧ್ಯಕ್ಷ ಶಶಿಧರ್, ವಿಜಯ ರಾಘವ ಮೊದಲಾದವರು ಉಪಸ್ಥಿತರಿದ್ದರು. ಸಮಿತಿಯ ಕಾರ್ಯದರ್ಶಿ ನವೀನ್ ರಾವ್ ಕಾರ್ಯ ಕ್ರಮ ನಿರೂಪಿಸಿದರು.

ಸಾಮಾಜಿಕ ಜಾಲತಾಣಗಳ ಮೂಲಕ ರಣಹೇಡಿಗಳು ನನಗೆ ಬೆದರಿಕೆ ಹಾಕುತ್ತಿದ್ದಾರೆ. ಹೇಡಿಗಳ ಕೃತ್ಯಕ್ಕೆ ನಾನು ಹೆದರುವುದಿಲ್ಲ. ನಮ್ಮಿಂದ ಬೇರೆ ಸ್ವಾಮೀಜಿಗಳಿಗೆ ಅಪಮಾನ ಆಯಿತು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ನಾನು ಕೂಡ ಒಬ್ಬ ಸ್ವಾಮೀಜಿ. ಹಿಂದುಳಿದವರ್ಗದಿಂದ ಬಂದ ಬ್ರಾಹ್ಮಣೇತರ ಸ್ವಾಮೀಜಿ ಎಂಬ ಕಾರಣಕ್ಕೆ ನನ್ನನ್ನು ಇವರು ದೂರಬಹುದೇ ? ನನಗೆ ಅವಮಾನ, ಬೆದರಿಕೆ ಬಂದಾಗ ಇವರು ಯಾಕೆ ಧ್ವನಿ ಎತ್ತುವುದಿಲ್ಲ ಎಂದು ಕೇಮಾರು ಶ್ರೀಈಶ ವಿಠಲ ಸ್ವಾಮೀಜಿ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X