Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ವ್ಯಸನ ಮುಕ್ತ, ಆರೋಗ್ಯ ಯುಕ್ತ...

ದಾವಣಗೆರೆ: ವ್ಯಸನ ಮುಕ್ತ, ಆರೋಗ್ಯ ಯುಕ್ತ ಜೀವನಕ್ಕಾಗಿ ಜಯದೇವ ಜೋಳಿಗೆ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ11 Aug 2018 10:27 PM IST
share
ದಾವಣಗೆರೆ: ವ್ಯಸನ ಮುಕ್ತ, ಆರೋಗ್ಯ ಯುಕ್ತ ಜೀವನಕ್ಕಾಗಿ ಜಯದೇವ ಜೋಳಿಗೆ ಅಭಿಯಾನ

ದಾವಣಗೆರೆ,ಆ.11: ಉತ್ತಮ ಸಂಸ್ಕಾರ, ಜ್ಞಾನ ಮೌಲ್ಯಗಳನ್ನು ತುಂಬಿಕೊಂಡು ಸುಖಕರ ಜೀವನ ನಡೆಸುವಂತೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಸಲಹೆ ನೀಡಿದರು. 

ನಗರದ ಕೊಂಡಜ್ಜಿ ರಸ್ತೆಯ ಮಾರುತಿ ಮಂದಿರ ಎದುರಿನ ಸವಿತಾ ಮಹರ್ಷಿ ಸಮುದಾಯ ಭವನದಲ್ಲಿ ಬೆಳಗ್ಗೆ ಬಸವ ಕೇಂದ್ರ, ಶ್ರೀ ಮುರುಘ ರಾಜೇಂದ್ರ ವಿರಕ್ತಮಠ, ಸವಿತಾ ಸಮಾಜ ಸಂಘ, ಗದ್ವಾಲ್ ಜಮುಲಮ್ಮ ಸೇವಾ ಸಂಘ ಆಶ್ರಯದಲ್ಲಿ ವ್ಯಸನ ಮುಕ್ತ, ಆರೋಗ್ಯ ಯುಕ್ತ ಜೀವನಕ್ಕಾಗಿ ಜಯದೇವ ಜೋಳಿಗೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿನ ತಿಜೋರಿಯಲ್ಲಿ ಬೆಲೆ ಬಾಳುವ ಬೆಳ್ಳಿ, ಬಂಗಾರ, ರೇಷ್ಮೆ ಸೀರೆ, ಬಟ್ಟೆಗಳನ್ನು ಇಡುತ್ತಾರೆ ವಿನಃ, ಕಸವನ್ನು ಇಡುವುದಿಲ್ಲ. ಅದರಂತೆ ಬೆಲೆ ಕಟ್ಟಲಾಗದಂತಹ ದೇಹವೆಂಬ ನಮ್ಮ ತಿಜೋರಿಯಲ್ಲಿ ಒಳ್ಳೆಯ ಸಂಸ್ಕಾರ, ಆಚಾರ, ವಿಚಾರಗಳನ್ನು ಇಡಬೇಕೆಂದು ಕರೆ ನೀಡಿದರು.

ದುಶ್ಚಟಗಳಿಗೆ ದಾಸರಾದರೆ ಕಣ್ಣು, ಕವಿ, ಕಿಡ್ನಿ, ಹೃದಯ ಹಾಳಾಗುತ್ತವೆ. ಕ್ಯಾನ್ಸರ್ ಬರುತ್ತದೆ. ಬೆಲೆಬಾಳುವ ಅಂಗಾಂಗ ಊನವಾದರೆ ಮರು ಸೃಷ್ಠಿ ಅಸಾಧ್ಯ. ಹಾಳಾದ ನಮ್ಮ ದೇಹದ ಪ್ರಮುಖ ಅಂಗಗಳನ್ನು ಯಾರೂ ಕೊಡುವುದಿಲ್ಲ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಇರುವುದರಿಂದ ಅದನ್ನು ಜೋಪಾನವಾಗಿ ಕಾಪಾಡಿಕೊಳ್ಳಬೇಕೆಂದರು.

ಇತ್ತಿಚೆಗೆ ಯುವಕರು, ಬಡವರು ಹೆಚ್ಚಾಗಿ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಬೀಡಿ, ತಂಬಾಕು, ಸಾರಾಯಿ, ಗುಟ್ಕಾ ಸೇವನೆ ಮಾಡುತ್ತಾ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವು ಯುವಕರು ಚಿತ್ರ ತಾರೆಯರ ಸ್ಟೈಲ್‍ಗಳನ್ನು ಅನುಕರಣೆ ಮಾಡಲು ಹೋಗಿ ಹಾಳಾಗುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು.

ಜಯದೇವ ಜೋಳಿಗೆ ಕಾರ್ಯಕ್ರಮ ಕಳೆದ 10 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. ಪವಿತ್ರವಾದ ಶ್ರಾವಣ ಮಾಸ ಭಕ್ತಿಗೆ ಸುಗ್ಗಿಯ ಕಾಲವಿದ್ದಂತೆ. ಈ ತಿಂಗಳಲ್ಲಿ ದುಶ್ಚಟಗಳಿಂದ ದೂರ ಉಳಿದರೆ, ಜೀವನ ಪರ್ಯಂತ ಅವುಗಳಿಂದ ದೂರ ಉಳಿಯಲು ಸಾಧ್ಯವಾಗುತ್ತದೆ. ನಮ್ಮ ಅಭಿಯಾನದಿಂದ ಹಲವಾರು ಯುವಕರು ಬೀಡಿ, ತಂಬಾಕು ಸೇವನೆಯಿಂದ ದೂರ ಉಳಿದು, ಆರೋಗ್ಯಕರ ಜೀವನ ಸಾಗಿಸುತ್ತಿದ್ದಾರೆ. ಅವರ ಕುಟುಂಬದವರು ನೆಮ್ಮದಿಯಿಂದ ಇದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಪರಿಣಾಮ ಎಲ್ಲರ ಮೇಲೆ ಬಿರಲಿದೆ. ದಾವಣಗೆರೆ ನಗರ ದುಶ್ವಟ ಮುಕ್ತ ನಗರವಾಗಬೇಕು ಎಂಬುದೇ ನಮ್ಮ ಆಶಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮೇಯರ್ ಶೋಭಾ ಪಲ್ಲಾಗಟ್ಟೆ, ಪಾಲಿಕೆ ಮಾಜಿ ನಗರಸಭಾಧ್ಯಕ್ಷ ಬಿ.ವೀರಣ್ಣ, ಶಿವಾನಂದಪ್ಪ ಪಲ್ಲಾಗಟ್ಟೆ, ಸವಿತಾ ಸಮಾಜ ಸಂಘದ ಅದ್ಯಕ್ಷ ಎನ್.ರಂಗಸ್ವಾಮಿ, ಗದ್ವಾಲ್ ಜಮುಲಮ್ಮ ಸೇವಾ ಸಂಘದ ಅಧ್ಯಕ್ಷ ಜಿ.ಎಸ್.ಪರಶುರಾಮ್, ಕರಿಬಸಪ್ಪ, ಆರ್, ಎನ್.ಜೆ.ಶಿವಕುಮಾರ್, ಎಂ.ಬಸವರಾಜ್, ಎಸ್.ಜಿ.ಸಂಗಪ್ಪ, ಚನ್ನಬಸವ ಶೀಲವಂತ, ಉಮೇಶ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಜಯದೇವ ಜೋಳಿಗೆ ಅಭಿಯಾನವು ನಗರದ ಸವಿತಾ ಮಹರ್ಷಿ ಸಮುದಾಯ ಭವನದಿಂದ ಕೊಂಡಜ್ಜಿ ರಸ್ತೆಯಿಂದ ವಾಲ್ಮೀಕಿ ವೃತ್ತದವರೆಗೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X