Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶ್ಯನ್ ಗೇಮ್ಸ್: 804 ಸದಸ್ಯರ ಭಾರತದ...

ಏಶ್ಯನ್ ಗೇಮ್ಸ್: 804 ಸದಸ್ಯರ ಭಾರತದ ನಿಯೋಗಕ್ಕೆ ಕ್ರೀಡಾ ಸಚಿವಾಲಯ ಅನುಮತಿ

ವಾರ್ತಾಭಾರತಿವಾರ್ತಾಭಾರತಿ11 Aug 2018 11:52 PM IST
share
ಏಶ್ಯನ್ ಗೇಮ್ಸ್: 804 ಸದಸ್ಯರ ಭಾರತದ ನಿಯೋಗಕ್ಕೆ ಕ್ರೀಡಾ ಸಚಿವಾಲಯ ಅನುಮತಿ

ಹೊಸದಿಲ್ಲಿ, ಆ.11: ಏಶ್ಯನ್ ಗೇಮ್ಸ್‌ಗೆ 572 ಅಥ್ಲೀಟ್‌ಗಳು ಸೇರಿದಂತೆ 804 ಸದಸ್ಯರನ್ನು ಒಳಗೊಂಡ ಭಾರತದ ನಿಯೋಗಕ್ಕೆ ಕೇಂದ್ರ ಕ್ರೀಡಾ ಸಚಿವಾಲಯ ಹಸಿರು ನಿಶಾನೆ ತೋರಿದೆ. ಆದರೆ 755 ಸದಸ್ಯರುಗಳ ಖರ್ಚನ್ನು ಮಾತ್ರ ತಾನು ಭರಿಸುವುದಾಗಿ ಸ್ಪಷ್ಟಪಡಿಸಿದೆ. 232 ಅಧಿಕಾರಿಗಳಲ್ಲಿ 49 ಮಂದಿಯ ಖರ್ಚನ್ನು ಸರಕಾರ ಭರಿಸುವುದಿಲ್ಲ ಎಂದು ಕೇಂದ್ರ ಸಚಿವಾಲಯ ತಿಳಿಸಿದೆ.

    ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಶಿಫಾರಸು ಮಾಡಿರುವ ಎಲ್ಲ ಅಥ್ಲೀಟ್‌ಗಳು ಹಾಗೂ ಅಧಿಕಾರಿಗಳನ್ನು ಕ್ರೀಡಾ ಸಚಿವಾಲಯ ಒಪ್ಪಿಕೊಂಡಿದೆ. ಭಾರತದ ನಿಯೋಗದಲ್ಲಿರುವ 49 ಅಧಿಕಾರಿಗಳ ಖರ್ಚು-ವೆಚ್ಚವನ್ನು ಆಯಾ ಫೆಡರೇಶನ್‌ಗಳು ನೋಡಿಕೊಳ್ಳಬೇಕಾಗಿದೆ.ಸರಕಾರ 572 ಅಥ್ಲೀಟ್‌ಗಳು, 183 ಅಧಿಕಾರಿಗಳು, 119 ಕೋಚ್‌ಗಳು, 21 ವೈದ್ಯರು ಹಾಗೂ ಫಿಜಿಯೋಗಳು, 43 ಇತರ ಅಧಿಕಾರಿಗಳ ಖರ್ಚು-ವೆಚ್ಚವನ್ನು ಸರಕಾರ ಭರಿಸಲು ನಿರ್ಧರಿಸಿದೆ. 36 ಕ್ರೀಡೆಗಳಲ್ಲಿ 572 ಅಥ್ಲೀಟ್‌ಗಳು ಭಾಗವಹಿಸಲಿದ್ದು ಈ ಪೈಕಿ 312 ಪುರುಷರು ಹಾಗೂ 260 ಮಹಿಳಾ ಅಥ್ಲೀಟ್‌ಗಳಿದ್ದಾರೆ.

 ಐಒಎ ಸಲ್ಲಿಸಿರುವ ಪಟ್ಟಿಯಲ್ಲಿರುವ ಎಲ್ಲ 26 ಮ್ಯಾನೇಜರ್‌ಗಳ ಖರ್ಚು-ವೆಚ್ಚಗಳನ್ನು ಭರಿಸಲು ಸರಕಾರ ನಿರಾಕರಿಸಿದೆ. ಮೂರು ಕೋಚ್‌ಗಳು ಹಾಗೂ 20 ಇತರ ಹೆಚ್ಚುವರಿ ಅಧಿಕಾರಿಗಳ ಖರ್ಚು-ವೆಚ್ಚವನ್ನು ಸರಕಾರ ನೋಡಿಕೊಳ್ಳುವುದಿಲ್ಲ. ಕ್ರೀಡಾ ಸಚಿವಾಲಯ ಅನುಮತಿ ನೀಡಿರುವ 12 ಸದಸ್ಯರ ಐಒಎ ನಿಯೋಗದಲ್ಲಿ ಚೀಫ್ ಡಿ ಮಿಶನ್ ಹಾಗೂ ಅವರ ನಾಲ್ವರು ಸಹಾಯಕರೂ ಇದ್ದಾರೆ. ಹೀಗಾಗಿ ಇದು ಸರಕಾರದ ಅಚ್ಚರಿಯ ನಡೆಯಾಗಿದೆ.

ತನ್ನ 12 ಸದಸ್ಯರ ನಿಯೋಗದಲ್ಲಿ ಕಚೇರಿ ಸಿಬ್ಬಂದಿ ಹಾಗೂ ವೈದ್ಯಕೀಯ ತಂಡವಿದೆ. ಇವರಿಗೆ ಸರಕಾರದ ಅನುಮತಿ ಬೇಕಾಗಿಲ್ಲ. ಇವರೆಲ್ಲರೂ ಸ್ವಂತ ಖರ್ಚಿನಲ್ಲೇ ತೆರಳಲಿದ್ದಾರೆ ಎಂದು ಐಒಎ ತಿಳಿಸಿದೆ.

ವಿವಾದಿತ ವ್ಯಕ್ತಿ ರಾಜ್‌ಕುಮಾರ್ ಸಚೇಟಿ ಚೀಫ್ ಡಿ ಮಿಶನ್‌ನ ನಾಲ್ವರು ಸಹಾಯಕರ ಪೈಕಿ ಒಬ್ಬರಾಗಿದ್ದು ರಾಜ್‌ಕುಮಾರ್ ಆಯ್ಕೆ ಕುರಿತು ಈ ಹಿಂದೆ ಆಕ್ಷೇಪಣೆ ವ್ಯಕ್ತವಾಗಿದೆ.

2014ರ ಆವೃತ್ತಿಯ ಏಶ್ಯನ್ ಗೇಮ್ಸ್‌ನಲ್ಲಿ ಭಾರತದ ಅಥ್ಲೀಟ್‌ಗಳು ಗರಿಷ್ಠ ಪ್ರಮಾಣದ(13)ಪದಕಗಳನ್ನು ಜಯಿಸಿದ್ದರು. ಕಳೆದ ಆವೃತ್ತಿಯಲ್ಲಿ ಭಾರತ ಶೂಟಿಂಗ್‌ನಲ್ಲಿ ಎರಡನೇ ಗರಿಷ್ಠ(9)ಸಂಖ್ಯೆಯ ಪದಕಗಳನ್ನು ಜಯಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X