Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಲೀಸ್ ವಶದಲ್ಲಿದ್ದ ಉಡುಪಿ ಶಿರೂರು ಮಠ...

ಪೊಲೀಸ್ ವಶದಲ್ಲಿದ್ದ ಉಡುಪಿ ಶಿರೂರು ಮಠ ಸೋದೆ ಮಠದ ಸುಪರ್ದಿಗೆ

ವಾರ್ತಾಭಾರತಿವಾರ್ತಾಭಾರತಿ12 Aug 2018 8:29 PM IST
share
ಪೊಲೀಸ್ ವಶದಲ್ಲಿದ್ದ ಉಡುಪಿ ಶಿರೂರು ಮಠ ಸೋದೆ ಮಠದ ಸುಪರ್ದಿಗೆ

ಉಡುಪಿ, ಆ.12: ಶೀರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಗೂಢ ಸಾವಿನ ತನಿಖೆಯ ಹಿನ್ನೆಲೆಯಲ್ಲಿ ಪೊಲೀಸರ ವಶದಲ್ಲಿದ್ದ ಉಡುಪಿ ರಥಬೀದಿಯಲ್ಲಿರುವ ಶೀರೂರು ಮಠವನ್ನು ಆ.13ರಂದು ದ್ವಂದ್ವ ಮಠವಾದ ಸೋದೆ ಮಠದ ಸುಪರ್ದಿಗೆ ನೀಡಲಾಗುತ್ತಿದೆ.

ಜು.19ರಂದು ಸ್ವಾಮೀಜಿಯ ನಿಗೂಢ ಸಾವಿನ ಬಳಿಕ ಪೊಲೀಸರು, ತನಿಖೆಗಾಗಿ ಉಡುಪಿಯಲ್ಲಿರುವ ಶಿರೂರು ಮಠ ಹಾಗೂ ಹಿರಿಯಡ್ಕದಲ್ಲಿರುವ ಮೂಲ ಮಠವನ್ನು ಸುಪರ್ದಿಗೆ ಪಡೆದುಕೊಂಡು ಬಿಗಿ ಭದ್ರತೆ ಒದಗಿಸಿದ್ದರು. ಇದರಿಂದ ಮಠದೊಳಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.

‘ಪೊಲೀಸರ ವಶದಲ್ಲಿದ್ದ ಉಡುಪಿಯ ಶಿರೂರು ಮಠವನ್ನು ಸೋದೆ ಮಠಕ್ಕೆ ಬಿಟ್ಟು ಕೊಡಲಾಗುತ್ತಿದೆ. ಅದೇ ರೀತಿ ಸದ್ಯವೇ ಪೊಲೀಸ್ ಇಲಾಖೆ ಮೂಲ ಶೀರೂರು ಮಠವನ್ನೂ ಕೂಡ ಸೋದೆ ಮಠಕ್ಕೆ ಬಿಟ್ಟು ಕೊಡಲಿದೆ ಎಂದು ಸೋದೆ ಮಠದ ದಿವಾನ ಪಿ. ಶ್ರೀನಿವಾಸ ತಂತ್ರಿ ತಿಳಿಸಿದ್ದಾರೆ.

ಮಠದ ಹಸ್ತಾಂತರ ಪ್ರಕ್ರಿಯೆ ಮುಗಿದ ಕೂಡಲೇ ಸ್ವಾಮೀಜಿಯ ಆರಾಧನೆಯನ್ನು ನಡೆಸಲಾಗುವುದು. ಇತ್ತೀಚಿಗೆ ಶಿರೂರು ಸ್ವಾಮೀಜಿ ನಡೆಸಲುದ್ದೇಶಿಸಿದ ವನಮಹೋತ್ಸವಕ್ಕೆ ತಂದ ಸಸಿಗಳ ವಿತರಣೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈವರೆಗೆ ಉಡುಪಿಯ ಶಿರೂರು ಮಠಕ್ಕೆ ಎಎಸ್ಸೈ ರತ್ನಾಕರ್ ನೇತೃತ್ವದಲ್ಲಿ 10 ಮಂದಿ ಪೊಲೀಸರು ಬೆಳಗ್ಗಿನ ಪಾಳಿ ಹಾಗೂ ಎಎಸ್ಸೈ ನಾರಾಯಣ ನೇತೃತ್ವ ದಲ್ಲಿ 15 ಪೊಲೀಸರು ರಾತ್ರಿ ಪಾಳಿಯಲ್ಲಿ ಭದ್ರತೆಯನ್ನು ಒದಗಿಸುತ್ತಿದ್ದರು. ನಾಳೆಯಿಂದ ಈ ಭದ್ರತೆಯನ್ನು ಇಲಾಖೆ ಹಿಂದಕ್ಕೆ ಪಡೆದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಶಿರೂರು ಮೂಲ ಮಠದಲ್ಲಿದ್ದ ಮುಖ್ಯಪ್ರಾಣ ದೇವರ ಬೆಳ್ಳಿಯ ಮುಖ ವಾಡ, ಚಿನ್ನಾಭರಣಗಳು, ಬೆಳ್ಳಿಯ ಆಭರಣಗಳು, ಪೂಜಾ ಸಾಮಗ್ರಿ ಸೇರಿದಂತೆ ಬೆಳೆಬಾಳುವ ಸೊತ್ತುಗಳನ್ನು ಸುರಕ್ಷತೆಯ ದೃಷ್ಠಿಯಿಂದ ಆ. 1ರಂದು ದ್ವಂದ್ವ ಮಠದ ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಪೊಲೀಸರ ಸಮ್ಮುಖದಲ್ಲಿ ಉಡುಪಿಯ ಶಿರೂರು ಮಠದ ಲಾಕರ್‌ನಲ್ಲಿ ತಂದಿಸಿದ್ದರು.

‘ಸದ್ಯಕ್ಕೆ ಉಡುಪಿಯಲ್ಲಿರುವ ಶಿರೂರು ಮಠವನ್ನು ದ್ವಂದ್ವ ಮಠವಾಗಿರುವ ಸೋದೆ ಮಠಕ್ಕೆ ಸೋಮವಾರ ಹಸ್ತಾಂತರ ಮಾಡಲಾಗುವುದು. ಆದರೆ ಮೂಲಮಠ ವನ್ನು ಒಪ್ಪಿಸುವ ಬಗ್ಗೆ ಇನ್ನು ನಿರ್ಧಾರ ಮಾಡಿಲ್ಲ. ಅಲ್ಲಿಯವರೆಗೆ ಮೂಲಮಠಕ್ಕೆ ನೀಡಿರುವ ಪೊಲೀಸ್ ಭದ್ರತೆ ಮುಂದುವರೆಯುತ್ತದೆ.’

-ಲಕ್ಷ್ಮಣ್ ಬ.ನಿಂಬರ್ಗಿ, ಪೊಲೀಸ್ ಅಧೀಕ್ಷಕರು, ಉಡುಪಿ ಜಿಲ್ಲೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X