Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನಸ್ತೇಷಿಯಾ ವೈದ್ಯರ ಪ್ರಾಮುಖ್ಯತೆ ಇಂದು...

ಅನಸ್ತೇಷಿಯಾ ವೈದ್ಯರ ಪ್ರಾಮುಖ್ಯತೆ ಇಂದು ಹೆಚ್ಚಾಗಿದೆ: ಶಾಮನೂರು ಶಿವಶಂಕರಪ್ಪ

ವಾರ್ತಾಭಾರತಿವಾರ್ತಾಭಾರತಿ12 Aug 2018 10:34 PM IST
share
ಅನಸ್ತೇಷಿಯಾ ವೈದ್ಯರ ಪ್ರಾಮುಖ್ಯತೆ ಇಂದು ಹೆಚ್ಚಾಗಿದೆ: ಶಾಮನೂರು ಶಿವಶಂಕರಪ್ಪ

ದಾವಣಗೆರೆ,ಆ.12: ಅನಸ್ತೇಷಿಯಾ ವೈದ್ಯರಿಲ್ಲದೇ, ಶಸ್ತ್ರ ಚಿಕಿತ್ಸೆ ನಡೆಯುವುದೇ ಇಲ್ಲ. ಹಾಗಾಗಿ, ಅನಸ್ತೇಷಿಯಾ ವೈದ್ಯರ ಪ್ರಾಮುಖ್ಯತೆ ಹಿಂದೆಂಗಿಂತಲೂ ಇಂದು ಹೆಚ್ಚಾಗಿದೆ, ಅನಿವಾರ್ಯವೂ ಆಗಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು. 

ನಗರದ ಬಾಪೂಜಿ ಸಭಾಂಗಣದಲ್ಲಿ ಇಂಡಿಯನ್ ಸೊಸೈಟಿ ಆಫ್ ಅನಸ್ತೀಶಿಯಾಲಜಿಸ್ಟ್ (ಐಎಸ್‍ಎ) ಜಿಲ್ಲಾ ಶಾಖೆ, ಜೆಜೆಎಂ ಮೆಡಿಕಲ್ ಕಾಲೇಜಿನ ಅರವಳಿಕೆ ಹಾಗೂ ಆಪತ್ತು ನಿರ್ವಹಣಾ ವಿಭಾಗ ಮತ್ತು ಎಸ್‍ಎಸ್‍ ವೈದ್ಯಕೀಯ ಕಾಲೇಜು ಸಹಯೋಗದಲ್ಲಿ 34ನೇ ಅರವಳಿಕೆ ತಜ್ಞರ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಸಾಮಾನ್ಯವಾಗಿ ಅನಸ್ತೇಷಿಯಾ ವೈದ್ಯರಿಲ್ಲದೆ ಶಸಚಿಕಿತ್ಸಾ ವೈದ್ಯರು ಎಷ್ಟೇ ಬುದ್ಧಿವಂತರಾಗಿದ್ದರೂ ಪ್ರಯೋಜನಕ್ಕೆ ಬರುವುದಿಲ್ಲ. ಅನಸ್ತೇಷಿಯಾ ವೈದ್ಯರು ಬಂದ ನಂತರವೇ ಶಸ್ತ್ರಚಿಕಿತ್ಸೆ ನಡೆಯಬೇಕು. ಈ ಹಿನ್ನೆಲೆಯಲ್ಲಿ ಅತ್ಯುತ್ತಮ ಪರಿಣಿತಿ ಸಾಧಿಸಿ, ಜಗತ್ತಿನೆಲ್ಲೆಡೆ ಕಂಡು ಬರುತ್ತಿರುವ ಹೊಸ ಸಂಶೋಧನೆ, ಆವಿಷ್ಕಾರಗಳನ್ನು ನಮ್ಮ ವೈದ್ಯರು ಅಳವಡಿಸಿಕೊಂಡು, ರೋಗಿಗಳಿಗೆ ಒಳ್ಳೆಯ ಚಿಕಿತ್ಸೆ ನೀಡಬೇಕು ಎಂದರು. 

ಹಿಂದೆಲ್ಲಾ ಅನಸ್ತೇಷಿಯಾ ವೈದ್ಯರ ದಿನಾಂಕ ನಿಗದಿಯಾದ ನಂತರವೇ ಶಸಚಿಕಿತ್ಸೆಯ ದಿನಾಂಕ ನಿರ್ಧರಿಸಲಾಗುತ್ತಿತ್ತು. ಈಗ ಅನಸ್ತೇಷಿಯಾ ವೈದ್ಯರು ಸಾಕಷ್ಟು ಸಂಖ್ಯೆಯಲ್ಲಿದ್ದು, ಆ ವಿಭಾಗಕ್ಕೆ ಒಳ್ಳೆಯ ಬೇಡಿಕೆಯೂ ಬಂದಿದೆ. ಅಲ್ಲದೇ, ಹೊಸ ತಂತ್ರಜ್ಞಾನ, ಸಂಶೋಧನೆಗಳೂ ಅನಸ್ತೇಷಿಯಾ ವೈದ್ಯರಿಗೆ, ತಜ್ಞರಿಗೆ ವರದಾನವಾಗಿದೆ. ಯಾವುದೇ ಕಾರಣಕ್ಕೂ ವೈದ್ಯಕೀಯ ಕ್ಷೇತ್ರದಲ್ಲಿ ಅನಸ್ತೇಷಿಯಾ ಕ್ಷೇತ್ರವನ್ನು ಯಾರೂ ಕಡೆಗಣಿಸುವಂತಿಲ್ಲ ಎಂದು ಅವರು ತಿಳಿಸಿದರು.

ಇಂತಹ ಸಮ್ಮೇಳನಗಳು ಆಗಾಗ್ಗೆ ನಡೆಯುತ್ತಿರಬೇಕು. ರಾಜ್ಯದ ವಿವಿಧೆಡೆಯಿಂದ ಬರುವ ಪ್ರತಿಭಾವಂತ, ಪರಿಣಿತ ವೈದ್ಯರಿಂದ ಪರಸ್ಪರ ವಿಚಾರ ವಿನಿಮಯವಾದಲ್ಲಿ ಅನಸ್ತೇಷಿಯಾ ಕ್ಷೇತ್ರವು ಮತ್ತಷ್ಟು ಪರಿಣಾಮಕಾರಿಯಾಗಿ ಬೆಳೆಯುತ್ತದೆ. ಅರವಳಿಕೆ ವೈದ್ಯರು, ತಜ್ಞರಿಗೂ ಅನುಕೂಲವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. 

ಅನಸ್ತೇಷಿಯಾ ತಜ್ಞ ವೈದ್ಯರ ಸಂಘದ ಅಧ್ಯಕ್ಷ ಡಾ.ಶ್ರೀನಿವಾಸಲು ಅಧ್ಯಕ್ಷತೆ ವಹಿಸಿದ್ದರು., ರಾಷ್ಟ್ರೀಯ ಅಧ್ಯಕ್ಷ ಡಾ. ಬಾಲಭಾಸ್ಕರ, ಕಾರ್ಯದರ್ಶಿ ಡಾ.ವೆಂಕಟಗಿರಿ ಮಾತನಾಡಿದರು. ಡಾ.ಡಿ.ಮಲ್ಲಿಕಾರ್ಜುನಪ್ಪ ಅವರಿಗೆ ಜೀವಮಾನ ಶ್ರೇಷ್ಟ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಶಿಲ್ಪಶ್ರೀ ಸಂಪಾದಕತ್ವದ ಸ್ಮರಣ ಸಂಚಿಕೆಯನ್ನು ಡಾ.ಶಾಮನೂರು ಶಿವಶಂಕರಪ್ಪ ಬಿಡುಗಡೆ ಮಾಡಿದರು.

ಜೆಜೆಎಂ ವೈದ್ಯಕೀಯ ಕಾಲೇಜು ಪ್ರಾರ್ಚಾ ಡಾ.ಎಸ್.ಬಿ.ಮುರುಗೇಶ, ಎಸ್ಸೆಸ್ ವೈದ್ಯ ಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಪ್ರಾಚಾರ್ಯ ಡಾ.ಬಿ.ಎಸ್. ಪ್ರಸಾದ, ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ.ಆರ್.ರವಿ, ಡಾ.ಅರುಣಕುಮಾರ, ಕಾರ್ಯದರ್ಶಿ ಡಾ.ಬಿ.ಜಿ. ಪ್ರಭು, ಡಾ. ಅಶೋಕ, ಡಾ.ಅರುಣ, ಡಾ.ಬಿ.ಜಿ.ಪ್ರಭು, ಡಾ.ರವಿಶಂಕರ, ಡಾ.ಕೆ.ಪಿ ಶಿವಕುಮಾರ, ಡಾ.ಕೆ.ಜಿ. ಸಂತೋಷ ಇದ್ದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X