Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜಕಾರಣಿಗಳಿಗೆ ‘ಸಂವಿಧಾನ ಪರೀಕ್ಷೆ’...

ರಾಜಕಾರಣಿಗಳಿಗೆ ‘ಸಂವಿಧಾನ ಪರೀಕ್ಷೆ’ ಕಡ್ಡಾಯಗೊಳಿಸಬೇಕು: ಶಿವರುದ್ರ ಸ್ವಾಮೀಜಿ

'ಬಹುಧರ್ಮಗಳು ಮತ್ತು ಭಾರತೀಯತೆ’ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ13 Aug 2018 9:35 PM IST
share
ರಾಜಕಾರಣಿಗಳಿಗೆ ‘ಸಂವಿಧಾನ ಪರೀಕ್ಷೆ’ ಕಡ್ಡಾಯಗೊಳಿಸಬೇಕು: ಶಿವರುದ್ರ ಸ್ವಾಮೀಜಿ

ಬೆಂಗಳೂರು, ಆ.13: ರಾಜಕಾರಣಿಗಳಿಗೆ ಸಂವಿಧಾನ ಕುರಿತ ಪರೀಕ್ಷೆ ಕಡ್ಡಾಯಗೊಳಿಸಬೇಕು. ಈ ಸಂಬಂಧ ಪ್ರಾಧಿಕಾವೊಂದನ್ನು ರಚನೆ ಮಾಡಬೇಕು ಎಂದು ಬೇಲಿಮಠ ಮಹಾಸಂಸ್ಥಾನದ ಶಿವರುದ್ರ ಸ್ವಾಮೀಜಿ ತಿಳಿಸಿದರು.

ಸೋಮವಾರ ನಗರದ ಕುಮಾರಕೃಪದಲ್ಲಿರುವ ಗಾಂಧಿ ಭವನ ಸಭಾಂಗಣದಲ್ಲಿ ಸಮಂಜಸ ಆಯೋಜಿಸಿದ್ದ, ‘ಬಹುಧರ್ಮಗಳು ಮತ್ತು ಭಾರತೀಯತೆ’ ಒಂದು ವ್ಯಾಖ್ಯಾನ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯತ್ ಸದಸ್ಯ ಸೇರಿದಂತೆ ರಾಜಕೀಯ ಸ್ಥಾನ ಪಡೆಯುವ ಎಲ್ಲರೂ ಕಡ್ಡಾಯವಾಗಿ ಸಂವಿಧಾನ ಕುರಿತ ಪರೀಕ್ಷೆ ಬರೆದು ಉತ್ತೀರ್ಣ ಆಗಬೇಕು. ಹೀಗಾದರೆ, ಮಾತ್ರ ಸಂವಿಧಾನವನ್ನು ಸಂಪೂರ್ಣವಾಗಿ ರಕ್ಷಿಸಲು ಸಾಧ್ಯವಾಗಲಿದೆ. ಇನ್ನು ಚುನಾವಣೆ ಆಯೋಗವು ಈ ಬಗ್ಗೆ ಕ್ರಮವಹಿಸಬೇಕು. ಜೊತೆಗೆ ಇದಕ್ಕಾಗಿಯೇ ಒಂದು ಪ್ರಾಧಿಕಾರ ರಚನೆಯಾಗಲಿ ಎಂದು ಹೇಳಿದರು.

ಪೊಲೀಸ್ ಪೇದೆ ನೇಮಕ ಮಾಡಲು ನಾವು ಮಾನಸಿಕ ಮತ್ತು ದೈಹಿಕ ಪರೀಕ್ಷೆ ನಡೆಸುತ್ತಿದ್ದೇವೆ. ಹೀಗಿರುವಾಗ, ಇಡೀ ಸಮಾಜವನ್ನು ಸುರಕ್ಷಿತವಾಗಿಡುವ ರಾಜಕಾರಣಿಗಳ ಆಯ್ಕೆಗೆ ನಾವು ಏಕೆ ಪರೀಕ್ಷೆ ನಡೆಸಬಾರದು. ಈ ಬಗ್ಗೆ ಸಾರ್ವಜನಿಕವಾಗಿಯೂ ಚರ್ಚೆಗಳು ನಡೆಯಬೇಕು ಎಂದು ಶಿವರುದ್ರ ಸ್ವಾಮೀಜಿ ನುಡಿದರು.

ವೇದಗಳನ್ನು ಜನ ಸಾಮಾನ್ಯರಿಗೆ ತಲುಪದಂತೆ ಯಾರು ನೋಡಿಕೊಂಡರೋ ಅವರೇ, ಇಂದು ಸಂವಿಧಾನದ ಆಶಯವನ್ನು ಹರಡದಂತೆ ನೋಡಿ ಕೊಳ್ಳುತ್ತಿದ್ದಾರೆ. ಆದರೆ, ಸಂವಿಧಾನವೇ ನಮ್ಮ ಧರ್ಮವಾಗಿದ್ದು, ಇದನ್ನು ಗಟ್ಟಿಯಾಗಿ ಕಾಪಾಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.

ಭಕ್ತಿ ಎಂದರೆ ಪೂಜೆ ಎನ್ನುವುದು ಬರೀ ಬುರಡೆಯಾಗಿದೆ. ಭಕ್ತಿ ಎಂದರೆ ಮಾತು ಮತ್ತು ಮನಸ್ಸು ಒಂದಾಗಿರುವುದು ಎಂದರ್ಥ. ಈ ರೀತಿ ಇನ್ನೊಬ್ಬರಿಗೆ ಹೇಳುವವರನ್ನು ಭಕ್ತ ಎನ್ನುತ್ತಾರೆ ಎಂದ ಅವರು, ಬೆಳಕು ಒಬ್ಬರನ್ನು ಬೇರೆಯವರಿಗೆ ತೋರಿಸುತ್ತದೆ ಕತ್ತಲು ತನ್ನನ್ನು ತಾನೇ ತೋರಿಸಿಕೊಳ್ಳುತ್ತದೆ. ಅದರಂತೆ ಅಜ್ಞಾನಿಗಳು ಅಹಂಕಾರದಿಂದ ತನ್ನನ್ನು ತಾನು ತೋರಿಸಿಕೊಂಡರೆ ಉತ್ತಮರು ಮತ್ತು ಜ್ಞಾನಿಗಳು ಬೇರೆಯವರ ಪ್ರತಿಭೆ ಮತ್ತು ಸಾಧನೆಗಳನ್ನು ಲೋಕಕ್ಕೆ ತೋರಿಸುತ್ತಾರೆ ಎಂದರು.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ವಿ.ಗೋಪಾಲಗೌಡ ಮಾತನಾಡಿ, ಪಟ್ಟಭದ್ರ ಹಿತಾಸಕ್ತಿಗಳು, ಕೋಮುವಾದಿಗಳು ದೇಶಕ್ಕೆ ಒಂದೇ ಮತವಿರಬೇಕು. ಏಕ ಸಂಸ್ಕೃತಿ ಬೇಕೆಂಬ ತಪ್ಪು ವ್ಯಾಖ್ಯಾನ ಮಾಡುತ್ತಿವೆ ಎಂದ ಅವರು, ಚುನಾವಣೆ ಆಯೋಗ, ವಿಧಾನಸಭೆ, ಸಂಸತ್ತು, ಪ್ರಧಾನಿ, ಮುಖ್ಯಮಂತ್ರಿ ಸೇರಿ ಎಲ್ಲವೂ ಸಂವಿಧಾನದಡಿಯಲ್ಲಿಯೇ ಬರುತ್ತದೆ. ಆದರೆ, ರಾಜಕೀಯ ಲಾಭಕ್ಕಾಗಿ ದಿಕ್ಕು ತಪ್ಪಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಶಿಕ್ಷಣ ತಜ್ಞ ಪ್ರೊ.ಕೆ.ಈ.ರಾಧಾಕೃಷ್ಣ ಮಾತನಾಡಿ, ಕೆಲವರು ನಾಲಗೆಯನ್ನು ಅಸ್ತ್ರವಾಗಿಟ್ಟು ಕೊಂಡು ಉದ್ದೇಶ ಪೂರ್ವಕವಾಗಿ ವಿವಾದಿತ ಮಾತುಗಳನ್ನು ಹೇಳುತ್ತಾರೆ. ಅಲ್ಲದೆ, ರಾಜಕಾರಣಿಗಳು ಜನರನ್ನು ಒಗ್ಗೂಡಿಸುವ ಬದಲು ವಿಭಜನೆಗೆ ಅವಕಾಶ ನೀಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ವಿಚಾರ ಸಂಕಿರಣದಲ್ಲಿ ಸಂಸದ ಕೆ.ಸಿ.ರಾಮಮೂರ್ತಿ, ಸಮಂಜಸ ಸಲಹೆಗಾರರಾದ ಎ.ಎನ್.ನಟರಾಜ್ ಗೌಡ, ಮಂಜುನಾಥ ಅದ್ದೆ ಸೇರಿದಂತೆ ಪ್ರಮುಖರಿದ್ದರು.

ಭಾರತ ಬಹುಸಂಸ್ಕೃತಿಯ ರಾಷ್ಟ್ರವಾಗಿದೆ. ಆದರೆ, ಹಿಂದೂ ರಾಷ್ಟ್ರವಾಗಬೇಕು ಎನ್ನುವ ಪ್ರತಿಪಾದನೆ ಅಮಾನವೀಯ. ಅದೂ ಅಲ್ಲದೆ, ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎನ್ನುವುದು ನಾಚಿಕೆಗೇಡಿನ ಸಂಗತಿ.

-ವಿ.ಗೋಪಾಲಗೌಡ, ಸುಪ್ರೀಂ ಕೋರ್ಟ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X