Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪತ್ನಿಯ ಕತ್ತು ಹಿಸುಕಿ ಹತ್ಯೆಗೈದ...

ಪತ್ನಿಯ ಕತ್ತು ಹಿಸುಕಿ ಹತ್ಯೆಗೈದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ13 Aug 2018 9:54 PM IST
share
ಪತ್ನಿಯ ಕತ್ತು ಹಿಸುಕಿ ಹತ್ಯೆಗೈದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್

ಬೆಂಗಳೂರು, ಆ.13: ಪರ ಪುರುಷನೊಂದಿಗೆ ಅನೈತಿಕ ಸಂಬಂಧವಿರುವ ಅನುಮಾನದ ಮೇಲೆ ಪತ್ನಿಯ ಕತ್ತು ಹಿಸುಕಿ ಹತ್ಯೆಗೈದು, ಮೃತದೇಹವನ್ನು ಮನೆಯಲ್ಲಿಯೇ ಹೂತಿದ್ದ ಮೈಸೂರಿನ ಎಚ್.ಡಿ.ಕೋಟೆಯ ಗೆಂಡೆಗೌಡನ ಕಾಲನಿಯ ದಾಸಪ್ಪಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ಕಾಯಂಗೊಳಿಸಿದೆ.

ದಾಸಪ್ಪನನ್ನು ದೋಷಿ ಎಂದು ಹೈಕೋರ್ಟ್ ತೀರ್ಮಾನಿಸಲು ಕಾರಣವಾಗಿದ್ದು, ಆತನ ಮಕ್ಕಳು ನುಡಿದ ಸಾಕ್ಷಿ. ಮಕ್ಕಳ ಸಾಕ್ಷ್ಯ ಪರಿಗಣಿಸಿದ ಹೈಕೋರ್ಟ್, ಪತ್ನಿ ವಸಂತಮ್ಮಳನ್ನು ದಾಸಪ್ಪನೇ ಕೊಲೆ ಮಾಡಿರುವುದಾಗಿ ತೀರ್ಮಾನಿಸಿತು. ಹಾಗೆಯೇ, ಆತನಿಗೆ ಕೌಟುಂಬಿಕ ದೌರ್ಜನ್ಯ, ಕೊಲೆ ಮತ್ತು ಸಾಕ್ಷಾಧಾರ ನಾಶ ಪ್ರಕರಣದಲ್ಲಿ ಮೈಸೂರಿನ 4ನೆ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿಯಿತು. ಇದರೊಂದಿಗೆ ಮಕ್ಕಳು, ತನ್ನ ತಾಯಿಯ ಮೃತ ದೇಹವು ಮನೆಯಲ್ಲಿಯೇ ಕೊಳೆತು ನಾರುವಂತೆ ಮಾಡಿದ್ದ ತಂದೆಯನ್ನು ಜೀವನ ಪರ್ಯಂತ ಜೈಲಿನಲ್ಲಿ ಕೊಳೆಯುವಂತೆ ಮಾಡಿದ್ದಾರೆ.

ದಾಸಪ್ಪ ಹಾಗೂ ವಸಂತಮ್ಮ 28 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿ 2003ರಿಂದ ಗೆಂಡೇಗೌಡನ ಕಾಲನಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ದಾಸಪ್ಪ ಸಂಸಾರ ಸಾಗಿಸಲು ದಿನಗೂಲಿ ಮಾಡುತ್ತಾ ಟೀ ಅಂಗಡಿ ಸಹ ನಡೆಸುತ್ತಿದ್ದ. ದಂಪತಿಗೆ ನಾಲ್ವರು ಮಕ್ಕಳು. ಮೊದಲ ಪುತ್ರ ಅನೀಶ್ ಮೈಸೂರಿನಲ್ಲಿ ಉದ್ಯೋಗ ಮಾಡಿಕೊಂಡು ನೆಲೆಸಿದ್ದ. ಮೊದಲ ಪುತ್ರಿ ಆಶಾ, ಅಣ್ಣನ ಜತೆಯಲ್ಲಿ ನೆಲೆಸಿ ವ್ಯಾಸಂಗ ಮಾಡುತ್ತಿದ್ದಳು. ಮೂರನೇ ಪುತ್ರ ಅರುಣ್ ಮತ್ತು ನಾಲ್ಕನೇ ಪುತ್ರಿ ಅನುಘ್ನ ತಂದೆ-ತಾಯಿಯೊಂದಿಗೆ ಗೆಂಡೆಗೌಡನ ಕಾಲನಿಯಲ್ಲಿ ನೆಲೆಸಿದ್ದರು.

2010ರ ಆ.4ರಂದು ಮಧ್ಯಾಹ್ನ 2ಗಂಟೆಗೆ ದಾಸಪ್ಪ, ವಸಂತಮ್ಮಳ ಕೊರಳಿಗೆ ಹಗ್ಗ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಯಾರಿಗೂ ಅನುಮಾನ ಬರಬಾರದು ಎಂಬ ಕಾರಣಕ್ಕೆ ಮೃತದೇಹವನ್ನು ಅಡುಗೆ ಮನೆಯ ಒಲೆ ಪಕ್ಕದಲ್ಲಿ ಗುಂಡಿ ತೆಗೆದು ಹೂತಿಟ್ಟಿದ್ದ. ತಾಯಿ ಕಾಣದಕ್ಕೆ ಪುತ್ರ ಅರುಣ್ ಮತ್ತು ಪುತ್ರಿ ಅನುಘ್ನ ದಾಸಪ್ಪ ಬಳಿ ವಿಚಾರಿಸಿದರೆ, ತವರು ಮನೆಗೆ ಹೋಗಿದ್ದಾಳೆ ಎಂದು ತಿಳಿಸಿದ್ದ. ಈ ವಿಚಾರವನ್ನು ಅರುಣ್ ತನ್ನ ಸೋದರ ಅನೀಶ್‌ಗೆ ದೂರವಾಣಿ ಮೂಲಕ ತಿಳಿಸಿದ್ದ. ಅರುಣ್ ತನ್ನ ಸಂಬಂಧಿಕರೊಂದಿಗೆಲ್ಲಾ ವಿಚಾರಿಸಿದರೂ ಯಾವುದೇ ಸುಳಿವು ಸಿಗದಕ್ಕೆ ಮನೆಗೆ ಬಂದಿದ್ದ. ಈ ಮಧ್ಯೆ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದನ್ನು ಅನೀಶ್ ಗಮನಿಸಿ ಶೋಧನೆ ನಡೆಸಿದ್ದ. ಅಡುಗೆ ಮನೆಯ ಒಲೆ ಪಕ್ಕದಲ್ಲಿ ಮಣ್ಣು ಮೇಲೆದಿದ್ದು ಕಣ್ಣಿಗೆ ಬಿತ್ತು. ಅಲ್ಲಿಂದಲೇ ದುವಾರ್ಸನೆ ಬರುತ್ತಿದ್ದರಿಂದ ಅನುಮಾನಗೊಂಡ ಅನೀಶ್, ಕೂಡಲೇ ಎಚ್.ಡಿ.ಕೋಟೆ ಠಾಣೆಗೆ ತೆರಳಿ ದೂರು ನೀಡಿದ್ದ. ಪೊಲೀಸರು ಮನೆಗೆ ಬಂದು ಒಲೆ ಪಕ್ಕದಲ್ಲಿ ಹೂತಿದ್ದ ವಸಂತಮ್ಮಳ ಮೃತದೇಹ ಹೊರತೆಗೆದಿದ್ದರು.

ಬಳಿಕ ದಾಸಪ್ಪನ್ನು ಬಂಧಿಸಿ, ತನಿಖೆ ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅಧೀನ ನ್ಯಾಯಾಲಯದ ಮುಂದೆ ಹಾಜರಾಗಿದ್ದ ದಾಸಪ್ಪನ ನಾಲ್ವರು ಮಕ್ಕಳು ಸಹ, ತನ್ನ ತಂದೆಯು ತಾಯಿ ಶೀಲದ ಬಗ್ಗೆ ಸದಾ ಅನುಮಾನಿಸಿದ್ದರು. ಇದೇ ವಿಚಾರವಾಗಿ ಪದೇ ಪದೇ ಮನೆಯಲ್ಲಿ ಗಲಾಟೆ ನಡೆಸಿ ತಾಯಿ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಸಾಕ್ಷ್ಯ ನುಡಿದ್ದರು. ಮಕ್ಕಳ ಸಾಕ್ಷ ಮತ್ತು ತನಿಖೆಯಲ್ಲಿ ಪೊಲೀಸರು ಒದಗಿಸಿದ ಇತರೆ ಸಾಕ್ಷಾಧಾರ ಪರಿಗಣಿಸಿದ್ದ ಮೈಸೂರಿನ 4ನೆ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ದಾಸಪ್ಪನ್ನು ದೋಷಿ ಎಂದು ತೀರ್ಮಾನಿಸಿ, ಜೀವಾವಧಿ ವಿಧಿಸಿ 2013ರ ಮೇ 9ರಂದು ಆದೇಶಿಸಿತ್ತು. ಈ ಆದೇಶ ರದ್ದುಕೋರಿ ದಾಸಪ್ಪ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಹೈಕೋರ್ಟ್ ಸಹ ಮಕ್ಕಳ ಸಾಕ್ಷಿ ಪರಿಗಣಿಸಿ ದಾಸಪ್ಪಗೆ ಜೀವಾವಧಿ ಶಿಕ್ಷೆ ಕಾಯಂಗೊಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X