Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಸಯೋಗ್ಯ ನಗರದ ಪಟ್ಟಿ: ಪುಣೆಗೆ...

ವಾಸಯೋಗ್ಯ ನಗರದ ಪಟ್ಟಿ: ಪುಣೆಗೆ ಅಗ್ರಸ್ಥಾನ, ದಿಲ್ಲಿಗೆ 65ನೇ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ13 Aug 2018 11:15 PM IST
share
ವಾಸಯೋಗ್ಯ ನಗರದ ಪಟ್ಟಿ: ಪುಣೆಗೆ ಅಗ್ರಸ್ಥಾನ, ದಿಲ್ಲಿಗೆ 65ನೇ ಸ್ಥಾನ

ಹೊಸದಿಲ್ಲಿ, ಆ.13: ಕೇಂದ್ರ ಸರಕಾರ ರೂಪಿಸಿರುವ ವಾಸಸೋಗ್ಯ ನಗರಗಳ ಸೂಚ್ಯಂಕ ಪಟ್ಟಿಯಲ್ಲಿ ಪುಣೆ, ನವಿ ಮುಂಬೈ ಹಾಗೂ ಗ್ರೇಟರ್ ಮುಂಬೈ ನಗರಗಳು ಪ್ರಥಮ ಮೂರು ಸ್ಥಾನ ಪಡೆದಿದ್ದರೆ, ದಿಲ್ಲಿ 65ನೇ ಸ್ಥಾನದಲ್ಲಿದೆ.

111 ನಗರಗಳ ಈ ಪಟ್ಟಿಯಲ್ಲಿ ಉತ್ತರಪ್ರದೇಶದ ರಾಂಪುರ ಕಡೆಯ ಸ್ಥಾನದಲ್ಲಿದೆ. ಕೋಲ್ಕತಾ ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿಲ್ಲ. ಚೆನ್ನೈ 14ನೇ ಸ್ಥಾನದಲ್ಲಿದೆ. ಮಹಾರಾಷ್ಟ್ರದ ಮೂರು ನಗರಗಳು ಅಗ್ರ ಮೂರು ಸ್ಥಾನ ಗಳಿಸಿರುವುದು ವಿಶೇಷವಾಗಿದೆ. ವಸತಿ ಮತ್ತು ಗ್ರಾಮೀಣ ವ್ಯವಹಾರಗಳ ಇಲಾಖೆ ಪ್ರಕಟಿಸಿರುವ ಸೂಚ್ಯಂಕ ಪಟ್ಟಿಯಲ್ಲಿ ತಿರುಪತಿ, ಚಂಡೀಗಡ, ಥಾಣೆ, ರಾಯ್‌ಪುರ, ಇಂದೋರ್, ವಿಜಯವಾಡ ಮತ್ತು ಭೋಪಾಲ್ ನಗರಗಳು ಕ್ರಮವಾಗಿ 4ರಿಂದ 10ರವರೆಗಿನ ಸ್ಥಾನ ಗಳಿಸಿವೆ.

ಬಳಿಕದ ಸ್ಥಾನಗಳಲ್ಲಿ ಕ್ರಮವಾಗಿ ತೆಲಂಗಾಣದ ಕರೀಂನಗರ, ತಿರುಚಿರಾಪಳ್ಳಿ, ಬಿಲಾಸ್‌ಪುರ, ಜಬಲ್‌ಪುರ, ಅಮರಾವತಿ, ವಿಶಾಖಪಟ್ಟಣಂ, ಭುವನೇಶ್ವರ, ಸೂರತ್, ವಸೈ-ವಿರಾರ್ ನಗರ, ನಾಶಿಕ್, ಸೋಲಾಪುರ ನಗರಗಳಿವೆ. ಅಹ್ಮದಾಬಾದ್ 23ನೇ, ಹೈದರಾಬಾದ್ 27ನೇ ಮತ್ತು ವಾರಾಣಸಿ 33ನೇ ಸ್ಥಾನದಲ್ಲಿದೆ. ಅಗ್ರ 10ರಲ್ಲಿ ಉತ್ತರಪ್ರದೇಶ ಅಥವಾ ತಮಿಳುನಾಡಿನ ಯಾವುದೇ ನಗರಗಳು ಕಾಣಿಸಿಕೊಂಡಿಲ್ಲ. ಶ್ರೀನಗರ 100ನೇ, ಜಮ್ಮು 95ನೇ, ಪಣಜಿ 90ನೇ, ಆಲಿಗಢ 86ನೇ, ಗುರುಗ್ರಾಮ್ 88ನೇ , ಮೀರತ್ 101ನೇ, ಘಾಜಿಯಾಬಾದ್ 46ನೇ, ರಾಯ್‌ಬರೇಲಿ 49ನೇ ಸ್ಥಾನ ಗಳಿಸಿದೆ. ಆಡಳಿತ, ಸಾಮಾಜಿಕ, ಆರ್ಥಿಕ ಹಾಗೂ ಭೌತಿಕ ಮೂಲಸೌಕರ್ಯಗಳನ್ನು ಮಾನದಂಡವನ್ನಾಗಿ ಇರಿಸಿಕೊಂಡು ಇದೇ ಮೊದಲ ಬಾರಿಗೆ ಸಚಿವಾಲಯ ಈ ಸೂಚ್ಯಂಕ ಪಟ್ಟಿ ತಯಾರಿಸಿದೆ. ಒಟ್ಟು 100 ಅಂಕಗಳನ್ನು ಮೂಲವಾಗಿರಿಸಿಕೊಂಡು ಸೂಚ್ಯಂಕ ಪಟ್ಟಿ ತಯಾರಿಸಲಾಗಿದೆ ಎಂದು ವಸತಿ ಮತ್ತು ಗ್ರಾಮೀಣ ವ್ಯವಹಾರಗಳ ಇಲಾಖೆಯ ಸಚಿವ ಹರ್ದೀಪ್‌ಸಿಂಗ್ ಪುರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X