Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಹಜ್‌ಗಾಗಿ ಸೇನಾ ಪಥ ಸಂಚಲನ

ಹಜ್‌ಗಾಗಿ ಸೇನಾ ಪಥ ಸಂಚಲನ

ವಾರ್ತಾಭಾರತಿವಾರ್ತಾಭಾರತಿ14 Aug 2018 11:36 PM IST
share
ಹಜ್‌ಗಾಗಿ ಸೇನಾ ಪಥ ಸಂಚಲನ

ಜಿದ್ದಾ, ಆ. 14: ಸೌದಿ ಅರೇಬಿಯದ ಆಂತರಿಕ ಸಚಿವ ರಾಜಕುಮಾರ ಅಬ್ದುಲಝೀಝ್ ಬಿನ್ ಸೌದ್ ಬಿನ್ ನಯೀಫ್ ಸೋಮವಾರ ಹಜ್ ಭದ್ರತಾ ಪಡೆಗಳ ಸೇನಾ ಪಥಸಂಚಲನವನ್ನು ವೀಕ್ಷಿಸಿದರು.

ಉನ್ನತ ಹಜ್ ಸಮಿತಿಯ ಅಧ್ಯಕ್ಷರೂ ಆಗಿರುವ ಅವರು, ಹಜ್ ಯಾತ್ರಿಕರ ಸೇವೆಗೆ ನಡೆಸಲಾಗುತ್ತಿರುವ ಸಿದ್ಧತೆಗಳನ್ನೂ ಪರಿಶೀಲಿಸಿದರು.

ಹಜ್ ಯಾತ್ರಿಕರಿಗೆ ಸುರಕ್ಷಿತ ಪರಿಸರವನ್ನು ಒದಗಿಸಲು ಸೌದಿ ಅರೇಬಿಯದ ಭದ್ರತಾ ಪಡೆಗಳು ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ.

ಈ ಬಾರಿಯ ಹಜ್‌ನ ವ್ಯವಸ್ಥೆಯಲ್ಲಿ ತೊಡಗಿರುವ ಎಲ್ಲ ಕ್ಷೇತ್ರಗಳು ಸರ್ವ ಸನ್ನದ್ಧವಾಗಿವೆ ಎಂದು ರಾಜಕುಮಾರ ಅಬ್ದುಲಝೀಝ್ ಘೋಷಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಆಂತರಿಕ ಸಚಿವ ಜನರಲ್ ಸಯೀದ್ ಬಿನ್ ಅಬ್ದುಲ್ಲಾ ಅಲ್-ಕಹ್ತಾನಿ, ‘‘ಭದ್ರತಾ ಪಡೆಗಳು ಮಕ್ಕಾ, ಮದೀನಾ ಹಾಗೂ ಇತರ ಪವಿತ್ರ ಸ್ಥಳಗಳಲ್ಲಿ ಹಾಗೂ ಹಜ್ ನಿರ್ವಹಣೆ ಪ್ರದೇಶಗಳಿಗೆ ಹೋಗುವ ಎಲ್ಲ ರಸ್ತೆಗಳಲ್ಲಿ ತಮ್ಮ ಕರ್ತವ್ಯಗಳನ್ನು ಆರಂಭಿಸಿವೆ’’ ಎಂದು ಹೇಳಿದರು.

18 ನ್ಯಾಯಾಂಗ ಸಮಿತಿಗಳು, 6 ಚಲಿಸುವ ನೋಟರಿಗಳ ನಿಯೋಜನೆ

ಈ ಬಾರಿಯ ಹಜ್ ಋತುವಿನಲ್ಲಿ ಯಾತ್ರಿಕರಿಗೆ ಸೇವೆ ನೀಡಲು ಮಕ್ಕಾ, ಮಿನಾ ಮತ್ತು ಅರಫಾತ್‌ನಾದ್ಯಂತ 18 ನ್ಯಾಯಾಂಗ ಸಮಿತಿಗಳು ಮತ್ತು 6 ಚಲಿಸುವ ನೋಟರಿಗಳನ್ನು ನಿಯೋಜಿಸಿರುವುದಾಗಿ ಸೌದಿ ಕಾನೂನು ಸಚಿವಾಲಯ ಪ್ರಕಟಿಸಿದೆ.

‘‘ಹಜ್ ಋತುವಿನ ಅವಧಿಯಲ್ಲಿ ಕಾನೂನು ಸೇವೆಗಳನ್ನು ಒದಗಿಸಲು ಸಚಿವಾಲಯವು ತನ್ನೆಲ್ಲ ಸಂಪನ್ಮೂಲಗಳನ್ನು ಬಳಸಿಕೊಳ್ಳುತ್ತದೆ. ಹಜ್‌ಗೆ ಸೌದಿ ಅರೇಬಿಯವು ಹೆಚ್ಚಿನ ಮಹತ್ವವನ್ನು ನೀಡುತ್ತದೆ. ಯಾತ್ರಿಕರ ಪವಿತ್ರ ಪ್ರವಾಸದ ಸಂದರ್ಭದಲ್ಲಿ ಅವರಿಗೆ ಸೇವೆ ಸಲ್ಲಿಸುವುದು ನಮ್ಮ ಭಾಗ್ಯವಾಗಿದೆ’’ ಎಂದು ಸಚಿವಾಲಯದ ಹಜ್ ಸಮಿತಿಯ ಮುಖ್ಯಸ್ಥ ಹಾಮದ್ ಅಲ್-ಖುಡೈರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X