Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತನ್ನ ವಿರುದ್ಧ ಪುಸ್ತಕ ಬರೆದ ಮಾಜಿ...

ತನ್ನ ವಿರುದ್ಧ ಪುಸ್ತಕ ಬರೆದ ಮಾಜಿ ಸಹಾಯಕಿಯನ್ನು ‘ನಾಯಿ’ ಎಂದ ಟ್ರಂಪ್

ವಾರ್ತಾಭಾರತಿವಾರ್ತಾಭಾರತಿ15 Aug 2018 10:11 PM IST
share
ತನ್ನ ವಿರುದ್ಧ ಪುಸ್ತಕ ಬರೆದ ಮಾಜಿ ಸಹಾಯಕಿಯನ್ನು ‘ನಾಯಿ’ ಎಂದ ಟ್ರಂಪ್

ವಾಶಿಂಗ್ಟನ್, ಆ. 15: ತನ್ನೊಂದಿಗೆ ಕೆಲಸ ಮಾಡುತ್ತಿದ್ದ ಅವಧಿಯಲ್ಲಿ ಮಾಡಿಕೊಂಡಿದ್ದ ಧ್ವನಿಮುದ್ರಿಕೆಗಳನ್ನು ಸಾರ್ವಜನಿಕವಾಗಿ ಬಿಡುಗಡೆಗೊಳಿಸುತ್ತಿರುವ ಶ್ವೇತಭವನದ ಮಾಜಿ ಸಹಾಯಕಿ ಒಮರೋಸಾ ಮ್ಯಾನಿಗಾಲ್ಟ್ ನ್ಯೂಮನ್ ವಿರುದ್ಧ ಆಕ್ರೋಶಗೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಆಕೆಯನ್ನು ‘ನಾಯಿ’ ಎಂಬುದಾಗಿ ಕರೆದಿದ್ದಾರೆ.

ಶ್ವೇತಭವನದಲ್ಲಿ ತಾನು ಕೆಲಸ ಮಾಡಿದ ಅವಧಿಯಲ್ಲಿನ ತನ್ನ ಅನುಭವಗಳನ್ನೊಳಗೊಂಡ ಪುಸ್ತಕ ‘ಅನ್‌ಹಿಂಜ್ಡ್’ನ್ನು ನ್ಯೂಮನ್ ಬಿಡುಗಡೆಗೊಳಿಸಿದ ಬಳಿಕ, ಆಕೆಯ ವಿರುದ್ಧದ ವಾಗ್ದಾಳಿಯನ್ನು ಟ್ರಂಪ್ ಹೆಚ್ಚಿಸಿದ್ದಾರೆ.

ಟ್ರಂಪ್ ಅಧ್ಯಕ್ಷರಾಗುವುದಕ್ಕೂ ಮುನ್ನ ನಡೆಸಿಕೊಟ್ಟಿದ್ದ ‘ದಿ ಅಪ್ರೆಂಟಿಸ್’ ಎಂಬ ರಿಯಾಲಿಟಿ ಶೋನಲ್ಲಿ ನ್ಯೂಮನ್ ಸ್ಪರ್ಧಿಯಾಗಿದ್ದರು ಎಂಬುದನ್ನು ಸ್ಮರಿಸಬಹುದಾಗಿದೆ.

ಅವರು ರಿಪಬ್ಲಿಕನ್ ಪಕ್ಷದ ಅಧ್ಯಕ್ಷರ ಕಟ್ಟಾ ಕರಿಯ ಬೆಂಬಲಿಗರ ಪೈಕಿ ಒಬ್ಬರಾಗಿದ್ದರು.

ಅವರನ್ನು ಕಳೆದ ವರ್ಷದ ಡಿಸೆಂಬರ್‌ನಲ್ಲಿ ಶ್ವೇತಭವನದ ಕೆಲಸದಿಂದ ಉಚ್ಚಾಟಿಸಲಾಗಿತ್ತು.

ತನ್ನ ಉಚ್ಚಾಟನೆ ವೇಳೆ ಶ್ವೇತಭವನದ ಸಿಬ್ಬಂದಿ ಮುಖ್ಯಸ್ಥ ಜಾನ್ ಕೆಲ್ಲಿ ಆಡಿದ ಮಾತುಗಳ ಧ್ವನಿಮುದ್ರಿಕೆ ಹಾಗೂ ಟ್ರಂಪ್ ಮಾಡಿದ ಫೋನ್ ಕರೆಯೊಂದರ ಧ್ವನಿಮುದ್ರಿಕೆಯನ್ನು ನ್ಯೂಮನ್ ಸಾರ್ವಜನಿಕವಾಗಿ ಬಿಡುಗಡೆಗೊಳಿಸಿದ್ದರು.

 ನ್ಯೂಮನ್‌ರ ಉಚ್ಚಾಟನೆ ಬಗ್ಗೆ ತನಗೆ ತಿಳಿದಿಲ್ಲ ಎಂಬುದಾಗಿ ಈ ಫೋನ್ ಕರೆಯ ವೇಳೆ ಟ್ರಂಪ್ ಹೇಳುತ್ತಾರೆ.

  ಮಂಗಳವಾರ ಟ್ವೀಟ್ ಮಾಡಿದ ಟ್ರಂಪ್, ‘‘ನೈತಿಕತೆ ಇಲ್ಲದ ಹುಚ್ಚಿಗೆ ಸಹಾಯ ಮಾಡಿದೆ ಹಾಗೂ ಶ್ವೇತಭವನದಲ್ಲಿ ಕೆಲಸ ನೀಡಿದೆ. ಆದರೆ, ಅದು ಫಲಪ್ರದವಾಗಲಿಲ್ಲ. ಆ ನಾಯಿಯನ್ನು ಬೇಗನೇ ಒದ್ದೋಡಿಸುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದೀರಿ ಜನರಲ್ ಕೆಲ್ಲಿ ಅವರೇ!’’ ಎಂದು ಹೇಳಿದ್ದಾರೆ.

ಟ್ರಂಪ್ ಆಡಿದ ಜನಾಂಗೀಯ ಅವಹೇಳನ ಪದ

ಸಿಬಿಎಸ್ ನ್ಯೂಸ್ ಮಂಗಳವಾರ ಇನ್ನೊಂದು ಧ್ವನಿಮುದ್ರಿಕೆಯನ್ನು ಬಿಡುಗಡೆಗೊಳಿಸಿದೆ.

‘ದಿ ಅಪ್ರೆಂಟಿಸ್’ನ ಚಿತ್ರೀಕರಣದ ವೇಳೆ ಟ್ರಂಪ್ ಜನಾಂಗೀಯ ನಿಂದನೆ ಪದವನ್ನು ಆಡುವುದನ್ನು ತೋರಿಸುವ ಧ್ವನಿಮುದ್ರಿಕೆಯ ಸಂಭಾವ್ಯ ಪರಿಣಾಮದ ಬಗ್ಗೆ 2016 ಅಕ್ಟೋಬರ್‌ನಲ್ಲಿ ನ್ಯೂಮನ್ ಮತ್ತು ಟ್ರಂಪ್‌ರ ಇತರ ಹಲವಾರು ಚುನಾವಣಾ ಪ್ರಚಾರ ಸಹಾಯಕರು ಚರ್ಚಿಸುವುದು ಈ ಧ್ವನಿಮುದ್ರಿಕೆಯಲ್ಲಿದೆ.

ಇಂಥ ಯಾವುದೇ ಧ್ವನಿಮುದ್ರಿಕೆ ಅಸ್ತಿತ್ವದಲ್ಲಿಲ್ಲ ಎಂದು ಟ್ರಂಪ್ ಸೋಮವಾರ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X