ಶಿವಮೊಗ್ಗ: ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತ್ಯು
ಶಿವಮೊಗ್ಗ, ಆ. 15: ಕೆಎಸ್ಆರ್ಟಿಸಿ ಬಸ್ವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206 ರ ಗಡಿಕಲ್ಲು-ಕಾರೇಹಳ್ಳಿ ಗ್ರಾಮದ ಸಮೀಪ ಮಂಗಳವಾರ ರಾತ್ರಿ ನಡೆದಿದೆ.
ಮಂಜುನಾಥ್ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಬೈಕ್ ಹಿಂಬದಿ ಕುಳಿತಿದ್ದ ವಡಿವೇಲು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ನಂತರ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಹಿನ್ನೆಲೆ: ಮೃತ ಮಂಜುನಾಥ್ರವರು ವಡಿವೇಲುರವರನ್ನು ಕುಳ್ಳರಿಸಿಕೊಂಡು ಬೈಕ್ನಲ್ಲಿ ಭದ್ರಾವತಿ ಪಟ್ಟಣದಿಂದ ಸಿದ್ಲಿಪುರಕ್ಕೆ ತೆರಳುತ್ತಿದ್ದ ವೇಳೆ, ಎದುರಿನಿಂದ ಆಗಮಿಸಿದ ಕೆಎಸ್ಆರ್ಟಿಸಿ ಬಸ್ ಚಾಲಕ ಢಿಕ್ಕಿ ಹೊಡೆಸಿದ್ದರಿಂದ ಈ ಅವಘಢ ಸಂಭವಿಸಿದೆ ಎನ್ನಲಾಗಿದೆ.
Next Story