Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳು ಭಾಷೆಯನ್ನು ಬಳಸಿ, ಬೆಳೆಸಿ:...

ತುಳು ಭಾಷೆಯನ್ನು ಬಳಸಿ, ಬೆಳೆಸಿ: ಚಂದ್ರಹಾಸ ಸುವರ್ಣ

ಪಣಿಯಾಡಿ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ15 Aug 2018 10:35 PM IST
share
ತುಳು ಭಾಷೆಯನ್ನು ಬಳಸಿ, ಬೆಳೆಸಿ: ಚಂದ್ರಹಾಸ ಸುವರ್ಣ

ಉಡುಪಿ, ಆ.15: ಅಂಡಮಾನ್ ದ್ವೀಪ ಸಮೂಹದಲ್ಲಿ ಬುಡಕಟ್ಟು ಜನಾಂಗದವರು ಬಳಸುತಿದ್ದ ಭಾಷೆಯೊಂದು ಇತ್ತೀಚೆಗೆ ಅಳಿದು ಹೋದಂತ ಸ್ಥಿತಿ ತುಳುವಿಗೆ ಬಾರದಿರಲು ತುಳುವರೆಲ್ಲರೂ ತಮ್ಮ ಭಾಷೆಯನ್ನು ಹೆಚ್ಚು ಹೆಚ್ಚು ಬಳಸಿ, ಬೆಳೆಸುವಂತೆ ಮುಂಬಯಿಯ ತುಳು ಸಾಹಿತಿ, ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಸಿಮಂತೂರು ಚಂದ್ರಹಾಸ ಸುವರ್ಣ ಕರೆ ನೀಡಿದ್ದಾರೆ.

ತುಳುಕೂಟ ಉಡುಪಿ ವತಿಯಿಂದ 24ನೇ ವರ್ಷದ ಪಣಿಯಾಡಿ ಕಾದಂಬರಿ ಪ್ರಶಸ್ತಿಯನ್ನು ತಮ್ಮ ತುಳು ಕಾದಂಬರಿ ‘ಮಣ್ಣ್‌ದ ಮದಿಪು’ಗೆ ಸ್ವೀಕರಿಸಿ ಅವರು ಮಾತನಾಡುತಿದ್ದರು.

 ತುಳು ಭಾಷೆಯೂ ಅಳಿದು ಹೋಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ತುಳುವರ ಮೇಲಿದೆ. ಗುಜರಾತಿ, ಮರಾಠಿ ಜನರು ಪ್ರತಿ ಸಂವಹನಕ್ಕೂ ತಮ್ಮ ಭಾಷೆಯನ್ನು ಬಳಸುವಂತೆ ತುಳುವರೂ ತಮ್ಮ ಭಾಷೆಯನ್ನು ಅಭಿಮಾನದಿಂದ ಬಳಸುವಂತೆ ಅವರು ನುಡಿದರು.
ತಾನು ‘ಮಣ್ಣ್‌ದ ಮದಿಪು’ ಕಾದಂಬರಿಯನ್ನು ಪ್ರಶಸ್ತಿಗಾಗಿ ಬರೆಯಲಿಲ್ಲ. ನನ್ನ ಭಾಷೆಯ ಮೇಲಿನ ಅಭಿಮಾನದಿಂದ ಬರೆದಿದ್ದೇನೆ ಎಂದರು. ತಾನಿರುವ ಮಹಾರಾಷ್ಟ್ರ ಹಾಗೂ ಮುಂಬಯಿಯಲ್ಲಿರುವಷ್ಟು ತುಳು ಸಂಸ್ಕೃತಿ, ಇಂದು ಊರಿನಲ್ಲಿ ಕಾಣಲು ಸಿಗುತ್ತಿಲ್ಲ ಎಂದವರು ವಿಷಾಧಿಸಿದರು.

ಇಂದು ನಮ್ಮ ಕೋಲದಲ್ಲೂ ಇಂಗ್ಲೀಷ್ ಭಾಷೆ ಬಳಕೆಯಾಗುತ್ತಿದೆ. ಇದು ನಿಜವಾದ ದುರಂತ. ಪಾಡ್ದನವೂ ಇಂದು ಕೃತಿ ಚೌರ್ಯಕ್ಕೊಳಗಾಗುತ್ತಿದೆ. ಮರಾಠಿ ರಂಗಭೂಮಿಯ ಔನ್ನತ್ಯ ಹಾಗೂ ಅಲ್ಲಿ ಕಲಾವಿದರಿಗೆ ಸಿಗುವ ಗೌರವಕ್ಕೆ ಹೋಲಿಸಿದರೆ ತುಳು ರಂಗಭೂಮಿ ಹಿಂದುಳಿದಿದೆ ಎಂದವರು ಅಭಿಪ್ರಾಯ ಪಟ್ಟರು.

 ಅತಿಥಿಯಾಗಿ ಭಾಗವಹಿಸಿದ್ದ ಮಲ್ಪೆಯ ಉದ್ಯಮಿ ಎನ್.ಟಿ.ಅಮೀನ್ ಅವರು ಸಿಮಂತೂರು ಚಂದ್ರಹಾಸ ಸುವರ್ಣರಿಗೆ ಪಣಿಯಾಡಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ‘ಮಣ್ಣ್‌ದ ಮದಿಪು’ ಕಾದಂಬರಿಯನ್ನು ಖ್ಯಾತ ಸಾಹಿತಿ, ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ಬಿಡುಗಡೆಗೊಳಿಸಿದರು.

ತುಳುಕೂಟದ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು. ತುಳುಕೂಟದ ಗೌರವಾಧ್ಯಕ್ಷ ಡಾ.ಭಾಸ್ಕರಾನಂದ ಕುಮಾರ್, ಸದಸ್ಯ ಚೈತನ್ಯ ಎಂ.ಜಿ. ಉಪಸ್ಥಿತರಿದ್ದರು.

ತುಳುಕೂಟ ಪಣಿಯಾಡಿ ಕಾದಂಬರಿ ಪ್ರಶಸ್ತಿ ಸಮಿತಿಯ ಸಂಚಾಲಕ ಪ್ರಕಾಶ್ ಸುವರ್ಣ ಕಟಪಾಡಿ ಅತಿಥಿಗಳನ್ನು ಸ್ವಾಗತಿಸಿದರೆ, ಉಪಾಧ್ಯಕ್ಷ ವಿ.ಜಿ.ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ಪುಸ್ತಕವನ್ನು ಪರಿಚಯಿಸಿದರೆ, ಕಾರ್ಯದರ್ಶಿ ಗಂಗಾಧರ ಕಿದಿಯೂರು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X