Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಜಗಲೂರಿನಲ್ಲಿ ರಾಷ್ಟ್ರಕೂಟರ...

ದಾವಣಗೆರೆ: ಜಗಲೂರಿನಲ್ಲಿ ರಾಷ್ಟ್ರಕೂಟರ ಕಾಲದ ಅಪರೂಪದ ಶಿಲ್ಪಗಳು ಪತ್ತೆ

ವಾರ್ತಾಭಾರತಿವಾರ್ತಾಭಾರತಿ16 Aug 2018 6:12 PM IST
share
ದಾವಣಗೆರೆ: ಜಗಲೂರಿನಲ್ಲಿ ರಾಷ್ಟ್ರಕೂಟರ ಕಾಲದ ಅಪರೂಪದ ಶಿಲ್ಪಗಳು ಪತ್ತೆ

ದಾವಣಗೆರೆ, ಆ.16: ದಾವಣಗೆರೆ ಜಿಲ್ಲೆಯ ಜಗಲೂರು ತಾಲೂಕಿನ ಮುಸ್ಟೂರು ಗ್ರಾಮದ ದೇವಾಲಯವೊಂದರ ಸಮೀಪ ಹೂತು ಹೋಗಿದ್ದ ರಾಷ್ಟ್ರಕೂಟರ ಕಾಲದ ದ್ವಿಬಾಹು ಗಣೇಶ, ಸ್ಮಾರಕ ಶಿಲ್ಪಗಳು ಹಾಗೂ ಭೈರವಿ ವಿಗ್ರಹ ಪತ್ತೆಯಾಗಿರುವ ಘಟನೆ ನಡೆದಿದೆ. 

ಈ ಕುರಿತಂತೆ ಶಿವಮೊಗ್ಗ ನಗರದ ಶಿವಪ್ಪನಾಯಕ ಅರಮನೆ ಆವರಣದಲ್ಲಿರುವ, ಪುರಾತತ್ವ ಸಂಗ್ರಹಾಲಯಗಳ ಮತ್ತು ಪರಂಪರೆ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್.ಶೇಜೇಶ್ವರ್ ರವರು ಮಾಹಿತಿ ನೀಡಿದ್ದಾರೆ. 

ಪತ್ತೆಯಾಗಿತ್ತು: ಮುಸ್ಟೂರು ಗ್ರಾಮದ ಶ್ರೀ ಓಂಕಾರ ಹುಚ್ಚನಾಗಲಿಂಗಸ್ವಾಮಿ ದಾಸೋಹ ಮಠದವರು, ಕಲ್ಲೇಶ್ವರ ದೇವಾಲಯ ಮುಂಭಾಗದಲ್ಲಿ ಹೆಬ್ಬಾಗಿಲು ನಿರ್ಮಿಸಲು ಮುಂದಾಗಿದ್ದರು. ಜೆಸಿಬಿ ಮುಖಾಂತರ ತಳಪಾಯ ತೆಗೆಯುತ್ತಿದ್ದಾಗ ದ್ವಿಬಾಹು ಗಣೇಶ, ಸ್ಮಾರಕ ಶಿಲ್ಪಗಳು ಹಾಗೂ ಭೈರವಿ ವಿಗ್ರಹಗಳು ಪತ್ತೆಯಾಗಿದ್ದವು. ಈ ಕುರಿತಂತೆ ಮಠದವರು ಪುರಾತತ್ವ ಇಲಾಖೆಯವರ ಗಮನಕ್ಕೆ ತಂದಿದ್ದರು. 

ವಿಷಯ ತಿಳಿಯುತ್ತಿದ್ದಂತೆ ಪುರಾತತ್ವ ಸಂಗ್ರಹಾಲಯಗಳ ಮತ್ತು ಪರಂಪರೆ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್.ಶೇಜೇಶ್ವರ್ ಹಾಗೂ ಚಿತ್ರದುರ್ಗದ ರಂಗಯ್ಯನ ಬಾಗಿಲು ಬಳಿಯಿರುವ ಪುರಾತತ್ವ ಸಂಗ್ರಹಾಲಯ-ಪರಂಪರೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರಹ್ಲಾದ್ ಜಿ. ರವರು ಭೇಟಿಯಿತ್ತು ಶಿಲ್ಪಗಳ ಪರಿಶೀಲನೆ ನಡೆಸಿದ್ದರು. 

ಹಿನ್ನೆಲೆ: 1902 ರಲ್ಲಿ ಬಿ.ಎಸ್.ರೈಸ್‍ರವರು ಎಫಿಗ್ರಾಫಿಯ ಕರ್ನಾಟಕ ಪುಸ್ತಕದಲ್ಲಿ ಜಗಲೂರು ತಾಲೂಕಿನ ಶಾಸನದ ವಿವರಣೆಯಲ್ಲಿ, ಮುಸ್ಟೂರು ಗ್ರಾಮದ ಕಲ್ಲೇಶ್ವರ ದೇವಾಲಯದ ಮುಂಭಾಗದಲ್ಲಿ ನೊಳಂಬ ಪಲ್ಲವ ಅರಸನ ಕಿ.ಶ. 920 ರ ಶಾಸನವಿರುವುದನ್ನು ಉಲ್ಲೇಖಿಸಿದ್ದರು. ಇದರಿಂದ ಈ ದೇವಾಲಯ ನಿರ್ಮಾಣದ ಇತಿಹಾಸ ದೊರಕುತ್ತದೆ. 

ಪ್ರಸ್ತುತ ದೇವಾಲಯವಿದ್ದು, ಬಿ.ಎಲ್.ರೈಸ್‍ರವರು ಉಲ್ಲೇಖಿಸಿದ್ದ ಶಾಸನ ಕಂಡುಬರುವುದಿಲ್ಲವಾಗಿದೆ. ಪ್ರಸ್ತುತ ಅಪರೂಪದ ಶಿಲ್ಪಗಳು ದೊರಕಿರುವ ಜಾಗದಲ್ಲಿಯೇ ಆ ಶಾಸನ ಕೂಡ ಮಣ್ಣಿನಲ್ಲಿ ಹೂತು ಹೋಗಿರುವ ಸಾಧ್ಯತೆಯಿದೆ ಎಂದು ಆರ್.ಶೇಜೇಶ್ವರ್ ರವರು ಮಾಹಿತಿ ನೀಡುತ್ತಾರೆ. 

ಎರಡು ಸ್ಮಾರಕ ಶಿಲ್ಪ (ವೀರಗಲ್ಲು) ಗಳು ಒಂದೇ ರೀತಿಯಲ್ಲಿವೆ. ರಾಷ್ಟ್ರಕೂಟರ ಕಾಲದಲ್ಲಿ ದೇವರ ಬದಲು ವ್ಯಕ್ತಿಯನ್ನು ಪೀಠದಲ್ಲಿ ಕುಳ್ಳರಿಸುತ್ತಿದ್ದುದು ಕಂಡುಬರುತ್ತದೆ. ಇವುಗಳನ್ನು ವೀರಗಲ್ಲು ಎನ್ನುವುದಕ್ಕಿಂತ ಸ್ಮಾರಕ ಶಿಲ್ಪಗಳು ಎನ್ನುವುದೇ ಸೂಕ್ತವಾಗಿದೆ ಎಂದು ಇದೇ ಸಂದರ್ಭದಲ್ಲಿ ಆರ್.ಶೇಜೇಶ್ವರ್ ಅಭಿಪ್ರಾಯಪಡುತ್ತಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X