Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೆನೆಪದರಕ್ಕೆ ಕೋಟಾ ನಿರಾಕರಿಸಲು...

ಕೆನೆಪದರಕ್ಕೆ ಕೋಟಾ ನಿರಾಕರಿಸಲು ಸಾಧ್ಯವಿಲ್ಲ: ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ16 Aug 2018 8:50 PM IST
share
ಕೆನೆಪದರಕ್ಕೆ ಕೋಟಾ ನಿರಾಕರಿಸಲು ಸಾಧ್ಯವಿಲ್ಲ: ಕೇಂದ್ರ

ಹೊಸದಿಲ್ಲಿ, ಆ.16: ಪರಿಶಿಷ್ಟ ಜಾತಿ/ಪಂಗಡದ ಜನರು ಈಗಲೂ ಜಾತಿ ಮತ್ತು ಹಿಂದುಳಿಯುವಿಕೆಯ ಕಳಂಕವನ್ನು ಎದುರಿಸುತ್ತಿರುವುದರಿಂದ ಸಮುದಾಯದ ಸರಕಾರಿ ಉದ್ಯೋಗಿಗಳ ಭಡ್ತಿಯಲ್ಲಿ ಮೀಸಲಾತಿಯನ್ನು ನಿರಾಕರಿಸಲು ಕೆನೆಪದರ ಪರಿಕಲ್ಪನೆಯನ್ನು ಅನ್ವಯಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ ಗುರುವಾರ ಸರ್ವೋಚ್ಚ ನ್ಯಾಯಾಲಯದಲ್ಲಿ ತಿಳಿಸಿದೆ. ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ನೇತ್ತೃತ್ವದ ನ್ಯಾಯಾಲಯದ ಪಂಚಸದಸ್ಯ ಪೀಠದ ಮುಂದೆ ಮಾಹಿತಿ ನೀಡಿದ ಅಟರ್ನಿ ಜನರಲ್ ಕೆ.ಕೆ ವೇಣುಗೋಪಾಲ್, ಎಸ್‌ಸಿ/ಎಸ್ಟಿ ಸಮುದಾಯದ ಶ್ರೀಮಂತ ವ್ಯಕ್ತಿಗಳಿಗೆ ಕೆನೆಪದರ ಪರಿಕಲ್ಪನೆಯಡಿ ಕೋಟಾ ಲಾಭವನ್ನು ನಿರಾಕರಿಸಬಹುದು ಎಂದು ನ್ಯಾಯಾಲಯದ ಯಾವ ತೀರ್ಪಿನಲ್ಲೂ ತಿಳಿಸಲಾಗಿಲ್ಲ ಎಂದು ಹೇಳಿದ್ದಾರೆ.

ಕೆನೆಪದರ ಪರಿಕಲ್ಪನೆಯಡಿ ಎಸ್‌ಸಿ/ಎಸ್ಟಿ ಸಮುದಾಯಗಳಲ್ಲಿ ಅತ್ಯಂತ ಹಿಂದುಳಿದಿರುವ ಜನರಿಗೆ ಈ ಪ್ರಯೋಜನವನ್ನು ನೀಡಬೇಕು ಎಂದು ಮನವಿ ಮಾಡಿರುವ ಜನರನ್ನು ಕೋಟಾದಿಂದ ಹೊರಗಿರಿಸಬಹುದೇ ಎಂಬ ಪ್ರಶ್ನೆಗೆ ವೇಣುಗೋಪಾಲ್ ಈ ರೀತಿಯಾಗಿ ಉತ್ತರಿಸಿದರು. ಸಮುದಾಯದ ಬಹಳಷ್ಟು ಮಂದಿ ಹೀಗೆ ಮಾಡಲು ಮುಂದೆ ಬಂದಿದ್ದರೂ ಅವರು ಈಗಲೂ ಜಾತಿ ಮತ್ತು ಹಿಂದುಳಿಯುವಿಕೆಯ ಕರಿಛಾಯೆಯಿಂದ ಹೊರಗೆ ಬಂದಿಲ್ಲ ಎಂದು ಅಟರ್ನಿ ಜನರಲ್ ತಿಳಿಸಿದ್ದಾರೆ. ಎಸ್ಸಿ/ಎಸ್ಟಿ ಸಮುದಾಯದ ಜನರು ಈಗಲೂ ತಮ್ಮದೇ ಸಮುದಾಯದ ಒಳಗೆ ವಿವಾಹವಾಗಬೇಕಾಗಿದೆ. ಸಮುದಾಯದ ಶ್ರೀಮಂತ ವ್ಯಕ್ತಿಗಳು ಕೂಡಾ ಉನ್ನತ ಜಾತಿಯ ವ್ಯಕ್ತಿ ಜೊತೆ ವಿವಾಹವಾಗುವ ಹಾಗಿಲ್ಲ. ಸಮುದಾಯದ ಕೆಲವರು ಶ್ರೀಮಂತರಾಗಿದ್ದಾರೆ ಎಂಬ ಮಾತ್ರಕ್ಕೆ ಜಾತಿ ಮತ್ತು ಹಿಂದುಳಿಯುವಿಕೆಯ ಛಾಯೆ ಅವರನ್ನು ಬಿಟ್ಟುಹೋಗಿಲ್ಲ ಎಂದು ಅಟರ್ನಿ ಜನರಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X