Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ಲೇ ಸ್ಟೋರ್ ನಲ್ಲಿ ಕಾಣಿಸಿಕೊಂಡು ಮತ್ತೆ...

ಪ್ಲೇ ಸ್ಟೋರ್ ನಲ್ಲಿ ಕಾಣಿಸಿಕೊಂಡು ಮತ್ತೆ ಮಾಯವಾದ ಪತಂಜಲಿ ‘ಕಿಂಭೋ’!

ಬಳಕೆದಾರರಿಂದ ದೂರಿನ ಸುರಿಮಳೆ

ವಾರ್ತಾಭಾರತಿವಾರ್ತಾಭಾರತಿ16 Aug 2018 8:56 PM IST
share
ಪ್ಲೇ ಸ್ಟೋರ್ ನಲ್ಲಿ ಕಾಣಿಸಿಕೊಂಡು ಮತ್ತೆ ಮಾಯವಾದ ಪತಂಜಲಿ ‘ಕಿಂಭೋ’!

ಹೊಸದಿಲ್ಲಿ,ಆ.16: ಪತಂಜಲಿಯ ನವೀಕೃತ ಸ್ವದೇಶಿ ಚಾಟ್ ಆ್ಯಪ್ ಆ.27ರಂದು ಅಧಿಕೃತ ಬಿಡುಗಡೆಯ ಮುನ್ನ ಬಳಕೆದಾರರ ಟ್ರಯಲ್‌ಗಾಗಿ ಬುಧವಾರ ಮತ್ತೆ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಪ್ರತ್ಯಕ್ಷಗೊಂಡಿದ್ದು,5000ಕ್ಕೂ ಅಧಿಕ ಜನರು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಆದರೆ ಪ್ರೊಫೈಲ್ ಚಿತ್ರದ ಅಳವಡಿಕೆಯಲ್ಲಿ ಸಮಸ್ಯೆ ಮತ್ತು ಕೆಟ್ಟ ಯೂಸರ್ ಇಂಟರ್‌ಫೇಸ್(ಯುಐ) ಸೇರಿದಂತೆ ಬಳಕೆದಾರರು ವ್ಯಾಪಕವಾಗಿ ದೂರುತ್ತಿದ್ದಾರೆ.

ಇದೇನು ತಮಾಷೆಯಾ? ಇಷ್ಟೊಂದು ಕೆಟ್ಟ ಯುಐನ್ನು ಎಂದೂ ನೋಡಿಯೇ ಇಲ್ಲ ಎಂದು ಹೆಚ್ಚಿನ ಬಳಕೆದಾರರು ದೂರಿಕೊಂಡಿದ್ದಾರೆ. ನಂತರ ಈ ಆ್ಯಪ್ ಪ್ಲೇ ಸ್ಟೋರ್ ನಿಂದ ಮಾಯವಾಗಿದೆ.

 ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಂಡ ನಂತರ ಫೋಟೊ,ಮೀಡಿಯಾ ಮತ್ತು ಫೈಲ್‌ಗಳು ಸೇರಿದಂತೆ ವಿವಿಧ ಮಾಹಿತಿಗಳನ್ನು ಪಡೆದುಕೊಳ್ಳಲು ಎಂಟು ಹಂತಗಳಲ್ಲಿ ಅನುಮತಿಗಳನ್ನು ಅದು ಕೋರುತ್ತಿದೆ.

ಫೋನ್ ನಂಬರ್‌ನಂತಹ ಬಳಕೆದಾರರ ಮಾಹಿತಿಗಳನ್ನು ಥರ್ಡ್ ಪಾರ್ಟಿ ಕಂಪನಿಗಳ ವಾಣಿಜ್ಯ ಬಳಕೆಗಳಿಗಾಗಿ ಮಾರಾಟ ಮಾಡುವುದಿಲ್ಲ ಎಂದು ಆ್ಯಪ್‌ನ ಖಾಸಗಿತನ ನೀತಿಯು ಹೇಳುತ್ತಿದೆಯಾದರೂ,ಕಿಂಭೋ ಸೇವೆಯನ್ನು ನೀಡಲು,ಉತ್ತಮಗೊಳಿಸಲು ಮತ್ತು ಕಾಯ್ದುಕೊಳ್ಳಲು ಅಗತ್ಯವಾದರೆ ಥರ್ಡ್ ಪಾರ್ಟಿ ಸೇವಾ ಪೂರೈಕೆದಾರರೊಂದಿಗೆ ತಾನು ಈ ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದೂ ತಿಳಿಸಿದೆ.

ಕಳೆದ ಮೇ ತಿಂಗಳಲ್ಲಿ ಬಿಡುಗಡೆಗೊಂಡಿದ್ದ ಈ ಆ್ಯಪ್‌ನ್ನು ಅದರ ಕಳಪೆ ಸುರಕ್ಷತಾ ವ್ಯವಸ್ಥೆ ಮತ್ತು ಕಾರ್ಯದಿಂದಾಗಿ ಅವಸರವಸರವಾಗಿ ಹಿಂದೆಗೆದುಕೊಳ್ಳಲಾಗಿತ್ತು.

ಆ.27ರಂದು ಬಿಡುಗಡೆಗೆ ಮುನ್ನ ಆ್ಯಪ್‌ನಲ್ಲಿಯ ದೋಷಗಳನ್ನು ನಿವಾರಿಸಲಾಗುವುದು ಎಂದು ಪತಂಜಲಿ ಆಯುರ್ವೇದ್‌ನ ಆಡಳಿತ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಗುರುವಾರ ಟ್ವೀಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X