Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 20 ಸಾವಿರಕ್ಕೂ ಹೆಚ್ಚು ಇಂಜಿನಿಯರಿಂಗ್...

20 ಸಾವಿರಕ್ಕೂ ಹೆಚ್ಚು ಇಂಜಿನಿಯರಿಂಗ್ ಸೀಟು ಖಾಲಿ: ಸರಕಾರಿ ಶುಲ್ಕದಡಿ ಬಿಕರಿ

ವಾರ್ತಾಭಾರತಿವಾರ್ತಾಭಾರತಿ16 Aug 2018 9:58 PM IST
share

ಬೆಂಗಳೂರು, ಆ.16: ಸುಪ್ರೀಂಕೋರ್ಟ್ ನಿರ್ದೇಶನದಂತೆ ಇಂಜಿನಿಯರಿಂಗ್ ಪದವಿ ಕಾಲೇಜುಗಳ ಪ್ರವೇಶಕ್ಕೆ ಆ.15 ರಂದು ಕೊನೆ ದಿನವಾಗಿದ್ದರಿಂದ ಕೆಲವು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟುಗಳನ್ನು ಮಾರಾಟಕ್ಕಿಟ್ಟಂತೆ ಕಂಡುಬರುತ್ತಿದ್ದವು.

ವಿವಿಧ ಕಡೆಗಳಲ್ಲಿ ಮ್ಯಾನೇಜ್ ಮೆಂಟ್ ಕೋಟಾದಡಿಯಲ್ಲಿನ ಸೀಟುಗಳನ್ನು ಸರಕಾರಿ ಶುಲ್ಕದಲ್ಲಿ ನೀಡುತ್ತಿದ್ದ ದೃಶ್ಯಗಳು ಕಂಡು ಬಂದವು. ಸೀಟುಗಳನ್ನು ಖಾಲಿಯಿಡುವ ಬದಲಿಗೆ ಕಡಿಮೆ ಶುಲ್ಕದಲ್ಲಿ ನೀಡುವುದು ಉತ್ತಮ ಎಂದು ಕಾಲೇಜಿನ ವ್ಯವಸ್ಥಾಪಕರು ಅಭಿಪ್ರಾಯಪಟ್ಟಿದ್ದಾರೆ.

ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಆ.15 ರಂದು ಕಡೆಯ ದಿನವಾಗಿದ್ದರಿಂದ ಖಾಲಿ ಇರುವ ಸೀಟುಗಳನ್ನು ಸರಕಾರಿ ಶುಲ್ಕದಲ್ಲಿ ನೀಡಲು ನಿರ್ಧರಿಸಿದ್ದೆವು. ಮ್ಯಾನೇಜ್‌ಮೆಂಟ್ ಖೋಟಾದಲ್ಲಿ ಸೀಟು ಕೇಳಿಕೊಂಡು ಬಂದ ವಿದ್ಯಾರ್ಥಿಗಳ ಪಟ್ಟಿ ನಮ್ಮಲ್ಲಿತ್ತು. ಅಂತವರನ್ನು ವೈಯಕ್ತಿಕವಾಗಿ ಕರೆದು ಖಾಲಿ ಸೀಟುಗಳನ್ನು ಸಿಇಟಿ ಶುಲ್ಕದಡಿ ನೀಡಿದೆವು ಎಂದು ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ವ್ಯವಸ್ಥಾಪಕ ಪ್ರತಿನಿಧಿಯೊಬ್ಬರು ತಿಳಿಸಿದ್ದಾರೆ.

ನಾವು ಸೀಟುಗಳನ್ನು ಖಾಲಿ ಉಳಿಸಿಕೊಂಡರೆ ಅದು ನಿರುಪಯೋಗವಾಗುತ್ತದೆ. ಹೀಗಾಗಿ ಅಗತ್ಯವಿರುವವರಿಗೆ ನೀಡಲು ನಿರ್ಧರಿಸಿದೆವು. ಶಿಕ್ಷಣ ಸಂಸ್ಥೆಗೆ ಇದರಿಂದ ಹಣಕಾಸು ಹೊರೆ ಬೀಳುತ್ತದೆ. ಆದರೆ, ಅವುಗಳನ್ನು ಖಾಲಿ ಬಿಡುವುದು ಇನ್ನು ಹೆಚ್ಚು ಹಣಕಾಸಿನ ಹೊರೆಯಾಗುತ್ತದೆ ಎಂದು ನಗರದ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರೊಬ್ಬರು ಹೇಳಿದ್ದಾರೆ.

ತಮ್ಮ ಇಷ್ಟದ ಕೋರ್ಸ್‌ನಲ್ಲಿ ಪ್ರವೇಶ ಸಿಗದ ವಿದ್ಯಾರ್ಥಿಗಳು ಸಿಕ್ಕಿದ ಕೋರ್ಸ್‌ಗೆ ಪ್ರವೇಶ ಪಡೆದಿದ್ದು ಕಂಡುಬಂತು. ಒಂದು ವರ್ಷ ಕಳೆದ ನಂತರ ವಿಶ್ವವಿದ್ಯಾಲಯ ಮಟ್ಟದಲ್ಲಿ ಕೋರ್ಸ್ ಅನ್ನು ಬದಲಿಸಬಹುದು ಎಂದು ನಾನು ಸಿಕ್ಕಿರುವ ಕೋರ್ಸ್‌ಗೆ ಪ್ರವೇಶ ಪಡೆದಿದ್ದೇನೆ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಂಕಿ ಅಂಶದ ಪ್ರಕಾರ, 20 ಸಾವಿರಕ್ಕೂ ಹೆಚ್ಚು ಸೀಟುಗಳು ಖಾಸಗಿ ಕಾಲೇಜಿನಲ್ಲಿ ಸರಕಾರಿ ಖೋಟಾದಡಿ ಖಾಲಿ ಉಳಿದಿವೆ. ಇನ್ನು ಕೆಲವು ಸರಕಾರಿ ಕಾಲೇಜಿನಲ್ಲಿವೆ. ಕಳೆದ ವರ್ಷಕ್ಕಿಂತ ಸಾವಿರಕ್ಕೂ ಹೆಚ್ಚು ಎಂಜಿನಿಯರಿಂಗ್ ಸೀಟುಗಳು ಈ ವರ್ಷ ಖಾಲಿ ಉಳಿದಿವೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X