ಕಾರು ಢಿಕ್ಕಿ: ಪಾದಚಾರಿ ಸಾವು
ಬೆಂಗಳೂರು, ಆ.16: ನಡೆದು ಹೋಗುತ್ತಿದ್ದ ಪಾದಚಾರಿಗೆ ಅತಿವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಸೊಣ್ಣಪ್ಪನಹಳ್ಳಿ ನಿವಾಸಿ ಶ್ರೀನಿವಾಸ್(42) ಮೃತಪಟ್ಟ ಪಾದಚಾರಿ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು-ಬಳ್ಳಾರಿ ರಸ್ತೆಯ ಬೆಟ್ಟದಲಸೂರು ಕ್ರಾಸ್ ಬಳಿ ಬುಧವಾರ ರಾತ್ರಿ 8:15ರ ಸುಮಾರಿಗೆ ಶ್ರೀನಿವಾಸ್ ನಡೆದು ಬರುತ್ತಿದ್ದಾಗ ಅತಿ ವೇಗವಾಗಿ ಮುನ್ನುಗ್ಗಿದ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಯಲಹಂಕ ಸರಕಾರಿ ಆಸ್ಪತ್ರೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದೆ. ಚಿಕ್ಕಜಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.
Next Story