Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ:...

ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

16 ಬಾರಿ ಮುಳುಗಡೆಯಾದ ಹೆಬ್ಬಾಳೆ ಸೇತುವೆ

ವಾರ್ತಾಭಾರತಿವಾರ್ತಾಭಾರತಿ16 Aug 2018 10:41 PM IST
share
ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ಚಿಕ್ಕಮಗಳೂರು, ಆ.16: ಅತಿವೃಷ್ಟಿಗೆ ಜಿಲ್ಲೆಯ ಮಲೆನಾಡಿನ ತಾಲೂಕುಗಳ ಜನಜೀವನ ಅಸ್ತವ್ಯಸ್ತಗೊಂಡಿದೆ. ಬುಧವಾರ ಹಗಲಿನ ವೇಳೆ ಕೊಂಚ ಕಡಿಮೆಯಾಗಿದ್ದ ವರುಣಾರ್ಭಟ ಕತ್ತಲಾಗುತ್ತಿದ್ದಂತೆ ಬಿರುಸುಗೊಂಡಿದೆ. ಪರಿಣಾಮ ಮಲೆನಾಡಿನ ತುಂಗಾ, ಭದ್ರಾ, ಹೇಮಾವತಿ ನದಿಗಳು ಗುರುವಾರ ಬೆಳಗ್ಗೆಯಿಂದಲೇ ತುಂಬಿ ಹರಿಯಲಾರಂಭಿಸಿದ್ದವು. ಭದ್ರಾನದಿಗೆ ಅಡ್ಡಲಾಗಿ ಕಟ್ಟಿರುವ ಹೆಬ್ಬಾಳೆ ಸೇತುವೆ ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ 16 ಬಾರಿ ಮುಳುಗಡೆಯಾಗಿ ದಾಖಲೆ ಬರೆದಂತಾಗಿದೆ.

ಕಳೆದ 6 ದಿನಗಳಿಂದ ನಿರಂತರವಾಗಿ ಸುರಿದು ಮಲೆನಾಡಿಗರ ನಿದ್ದೆಗೆಡಿಸಿದ್ದ ಮಳೆ ಬುಧವಾರ ಬೆಳಗ್ಗೆಯಿಂದಲೇ ಕೊಂಚ ಬಿಡುವು ನೀಡಿದ್ದರಿಂದ ಜನತೆ ನಿಟ್ಟುಸಿರು ಬಿಟ್ಟಿದ್ದರು. ಆದರೆ ರಾತ್ರಿಯಾಗುತ್ತಲೇ ಮಲೆನಾಡು ಭಾಗದ ತಾಲೂಕುಗಳ ವ್ಯಾಪ್ತಿಯಲ್ಲಿ ಮಳೆ ಅಬ್ಬರಿಸಿದೆ. ರಾತ್ರಿ ಸುರಿದ ನಿರಂತರ ಮಳೆಯಿಂದಾಗಿ ಮಲೆನಾಡಿನಲ್ಲಿ ಹರಿಯುವ ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದ ದೃಶ್ಯಗಳು ಗುರುವಾರ ಬೆಳಗ್ಗೆ ಕಂಡುಬಂದವು. 

ಮೂಡಿಗೆರೆ ತಾಲೂಕಿನ ಬಣಕಲ್, ಕೊಟ್ಟಿಗೆಹಾರ, ಮೂಡಿಗೆರೆ, ಗಬ್ಗಲ್, ಜಾವಳಿ, ಕಳಸ, ಕುದುರೆಮುಖ, ಜಾಂಬಳೆ ಮತ್ತಿತರ ಕಡೆಗಳಲ್ಲಿ ಬುಧವಾರ ರಾತ್ರಿ ಧಾರಕಾರ ಮಳೆಯಾಗಿದ್ದು, ಗುರುವಾರ ಹಗಲಿಡೀ ಮಳೆ ಸುರಿದಿದೆ. ನಿರಂತರ ಮಳೆಯಿಂದಾಗಿ ಭದ್ರಾನದಿ ತುಂಬಿ ಹರಿದು ಕಳಸ-ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ 16ನೇ ಬಾರಿಗೆ ಮುಳುಗಡೆಯಾಗಿದ್ದ ದೃಶ್ಯ ಗುರುವಾರ ಬೆಳಗ್ಗೆ ಕಂಡು ಬಂತು. ಸೇತುವೆ ಮುಳುಗಡೆಯಾಗುವ ಮುನ್ಸೂಚನೆ ಅರಿತ ಕಳಸ ಪೊಲೀಸರು ಬುಧವಾರ ರಾತ್ರಿಯೇ ಸೇತುವೆ ಮೇಲೆ ವಾಹನ ಸಂಚಾರವನ್ನು ನಿಷೇಧಿಸಿದ್ದರು. ಗುರುವಾರ ಬೆಳಗ್ಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ನಂತರ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ ಎಂದು ತಿಳಿದು ಬಂದಿದೆ.

ಎನ್.ಆರ್.ಪುರ ತಾಲೂಕು ವ್ಯಾಪ್ತಿಯಲ್ಲೂ ಬುಧವಾರ ರಾತ್ರಿಯಿಂದ ನಿರಂತರ ಮಳೆಯಾಗಿದ್ದು, ಮಳೆಯಿಂದಾಗಿ ಕೆಲವೆಡೆ ರಸ್ತೆಗಳಿಗೆ ಭಾರೀ ಹಾನಿಯಾದ ಬಗ್ಗೆ ವರದಿಯಾಗಿದೆ. ತಾಲೂಕಿನ ಜಯಪುರದಿಂದ ಮೇಲ್ಪಾಲ್ ಮಾರ್ಗವಾಗಿ ಹೊಡ್ಸಾಲು ಗ್ರಾಮ ಸಂಪರ್ಕಿಸುವ ಗ್ರಾಮೀಣ ರಸ್ತೆ ಇತ್ತೀಚೆಗೆ ಸುರಿದ ಮಳೆಗೆ ಶಿಥಿಲಗೊಂಡಿತ್ತು. ಬುಧವಾರ ರಾತ್ರಿ ಸುರಿದ ಮಳೆಗೆ ಈ ರಸ್ತೆ ಸುಮಾರು 300 ಮೀ. ಉದ್ದ, 10 ಅಡಿ ಆಳಕ್ಕೆ ಕುಸಿದು ಬಿದ್ದಿದ್ದು, ಸದ್ಯ ಮೇಲ್ಪಾಲು-ಹೊಡ್ಸಲು ಗ್ರಾಮಗಳು ಸಂಪರ್ಕ ಕಡಿತಗೊಂಡಿದೆ. ಗ್ರಾಮಸ್ಥರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಸಂಪರ್ಕ ರಸ್ತೆಯಿಲ್ಲದೇ ಪರದಾಡುವ ಸ್ಥಿತಿ ಎದುರಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಕೊಪ್ಪ ತಾಲೂಕು ವ್ಯಾಪ್ತಿಯಲ್ಲೂ ಮಳೆ ಅವಾಂತರ ಸೃಷ್ಟಿಸಿದೆ. ತಾಲೂಕು ವ್ಯಾಪ್ತಿಯಲ್ಲಿರುವ ಕೊಪ್ಪ-ಗುಡ್ಡೆತೋಟ ಸಂಪರ್ಕ ರಸ್ತೆ ಕಳೆದ ನಾಲ್ಕು ದಿನಗಳಿಂದ ಕುಸಿಯುವ ಸ್ಥಿತಿಯಲ್ಲಿದ್ದ ರಸ್ತೆಯಲ್ಲಿ ಗುರುವಾರ ನಾಲ್ಕು ಕಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆ ಮೇಲೆ ವಾಹನ ಸಂಚಾರ ಸ್ಥಗಿತಗೊಂಡಿದೆ. ರಸ್ತೆ ಸಂಪೂರ್ಣವಾಗಿ ಕುಸಿಯುವ ಭೀತಿ ಗ್ರಾಮಸ್ಥರನ್ನು ಆವರಿಸಿದೆ. ತಾಲೂಕು ವ್ಯಾಪ್ತಿಯ ಕಣತಿ ಎಂಬಲ್ಲಿ ಚಿಕ್ಕಮಗಳೂರು-ಶೃಂಗೇರಿ ಹೆದ್ದಾರಿಯಲ್ಲಿ ಧರೆ ಕುಸಿಯುತ್ತಿದ್ದು, ವಾಹನ ಸವಾರರು ಆತಂಕದಲ್ಲೇ ವಾಹನ ಚಲಾಯಿಸುವಂತಾಗಿದೆ.

ಶೃಂಗೇರಿ ತಾಲೂಕು ವ್ಯಾಪ್ತಿಯ ಕಿಗ್ಗಾ, ಕೆರೆಕಟ್ಟೆ, ಶೃಂಗೇರಿ, ನೆಮ್ಮಾರು, ಅಗಳಗಂಡಿ, ಬಿದರಗೋಡು ಮತ್ತಿತರ ಕಡೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಈ ಭಾಗದ ತುಂಗಾನದಿ ಸೇರಿದಂತೆ ಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಶೃಂಗೇರಿ ಪಟ್ಟಣದಲ್ಲಿ ತುಂಗಾ ನದಿಯ ನೆರೆ ನೀರು ಗಾಂಧಿ ಮೈದಾನವನ್ನು ಆವರಸಿಕೊಂಡಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಪ್ರವಾಸಿಗರು, ವಾಹನಗಳ ಸಂಖ್ಯೆ ಕಡಿಮೆ ಕಂಡು ಬರುತ್ತಿವೆ. ಮಲೆನಾಡು ವ್ಯಾಪ್ತಿಯಲ್ಲಿ ಗುರುವಾರ ಸಂಜೆಯಿಂದ ಮಳೆ ಮತ್ತೆ ಬಿರುಸುಗೊಂಡಿರುವ ಬಗ್ಗೆ ವರದಿಯಾಗಿದೆ.

ಇನ್ನು ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯಲ್ಲಿ ಬುಧವಾರ ರಾತ್ರಯಿಂದ ಗುರುವಾರ ಸಂಜೆಯವರೆಗೂ ನಿರಂತರವಾಗಿ ಸಾಧಾರಣ ಮಳೆಯಾಗುತ್ತಿದೆ. ತಾಲೂಕಿನ ಮುಳ್ಳಯ್ಯನಗಿರಿ ಹಾಗೂ ದತ್ತಪೀಠದ ಗಿರಿಶ್ರೇಣಿಗಳಲ್ಲಿ ನಿರಂತರ ಮಳೆಯಿಂದಾಗಿ ಅಲ್ಲಲ್ಲಿ ಧರೆ ಕುಸಿತ ಉಂಟಾಗಿದ್ದು, ವಾನನಗಳ ಸಂಚಾರವನ್ನು ಗುರುವಾರ ಬೆಳಗ್ಗೆಯಿಂದಲೇ ನಿಷೇಧಿಸಲಾಗಿತ್ತು. ಇನ್ನು ಕಡೂರು, ತರೀಕೆರೆ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ತರೀಕೆರೆ ತಾಲೂಕು ವ್ಯಾಪ್ತಿಯ ಲಕ್ಕವಳ್ಳಿ ಭದ್ರಾ ಜಲಾಶಯದಿಂದ ನೀರು ಹೊರ ಬಿಡುತ್ತಿರುವುದರಿಂದ ತಗ್ಗು ಪ್ರದೇಶಗಳ ಗ್ರಾಮಗಳು ಮುಳುಗಡೆ ಭೀತಿಯಲ್ಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X