Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಿನ್ಸಿನಾಟಿ ಟೆನಿಸ್ ಟೂರ್ನಿ:...

ಸಿನ್ಸಿನಾಟಿ ಟೆನಿಸ್ ಟೂರ್ನಿ: ಜೊಕೊವಿಕ್‌ಗೆ ಜಯ

ವಾರ್ತಾಭಾರತಿವಾರ್ತಾಭಾರತಿ16 Aug 2018 11:36 PM IST
share
ಸಿನ್ಸಿನಾಟಿ ಟೆನಿಸ್ ಟೂರ್ನಿ: ಜೊಕೊವಿಕ್‌ಗೆ ಜಯ

ಮಾಸನ್, ಆ.16: ಸಿನ್ಸಿನಾಟಿ ಟೆನಿ ಟೂರ್ನಮೆಂಟ್‌ನ ಪುರುಷರ ಸಿಂಗಲ್ಸ್‌ನಲ್ಲಿ ವಿಂಬಲ್ಡನ್ ಚಾಂಪಿಯನ್ ನೊವಾಕ್ ಜೊಕೊವಿಕ್ ಮೂರನೇ ಸುತ್ತಿಗೆ ತಲುಪಿದ್ದಾರೆ. ಇಲ್ಲಿ ಬುಧವಾರ ನಡೆದ ಎರಡನೇ ಸುತ್ತಿನ ಪಂದ್ಯದಲ್ಲಿ ನಾಲ್ಕು ಬಾರಿ ವಿಂಬಲ್ಡನ್ ಚಾಂಪಿಯನ್ ಜೊಕೊವಿಕ್ ಅನಾರೋಗ್ಯದ ನಡುವೆಯೂ ಆಡ್ರಿಯನ್ ಮನ್ನಾರಿನೊರನ್ನು 4-6, 6-2, 6-1 ಸೆಟ್‌ಗಳಿಂದ ಸೋಲಿಸಿದ್ದಾರೆ.

ಎರಡನೇ ಸೆಟ್ ಆಡುವಾಗ ಜೊಕೊವಿಕ್‌ಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತು. ಟೆನಿಸ್ ಅಂಗಣಕ್ಕೆ ವೈದ್ಯರನ್ನು ಕರೆಸಿಕೊಂಡ ಜೊಕೊವಿಕ್ ಔಷಧಿ ಸೇವಿಸಿ ಪಂದ್ಯವನ್ನು ಮುಂದುವರಿಸಿದರು.

  10ನೇ ಶ್ರೇಯಾಂಕದ ಜೊಕೊವಿಕ್ ಕಳೆದ ತಿಂಗಳು ವಿಂಬಲ್ಡನ್ ಚಾಂಪಿಯನ್‌ಶಿಪ್‌ನ್ನು ಜಯಿಸಿ ಮೊದಲಿನ ಲಯಕ್ಕೆ ಮರಳಿದ್ದರು. ಇದೀಗ ಮುಂಬರುವ ಯುಎಸ್ ಓಪನ್‌ಗೆ ಸಜ್ಜಾಗುತ್ತಿದ್ದಾರೆ. ಜೊಕೊವಿಕ್ ಸಿನ್ಸಿನಾಟಿ ಟೂರ್ನಿಯಲ್ಲಿ 5 ಬಾರಿ ಫೈನಲ್‌ಗೆ ತಲುಪಿದ್ದಾರೆ. ಆದರೆ, ಐದೂ ಬಾರಿಯೂ ಸೋಲನುಭವಿಸಿ ಪ್ರಶಸ್ತಿ ವಂಚಿತರಾಗಿದ್ದರು. ಮೂರು ಬಾರಿ ರೋಜರ್ ಫೆಡರರ್ ಹಾಗೂ 2 ಬಾರಿ ಆ್ಯಂಡಿ ಮರ್ರೆಗೆ ಜೊಕೊವಿಕ್ ಸೋತಿದ್ದರು.

ಹಾಲಿ ಚಾಂಪಿಯನ್ ಗ್ರಿಗೊರ್ ಡಿಮಿಟ್ರೊವ್ ಜರ್ಮನಿಯ ಮಿಸ್ಚಾ ಝ್ವೆರೆವ್‌ರನ್ನು 7-6(5), 7-5 ಅಂತರದಿಂದ ಸೋಲಿಸಿ ಸಿನ್ಸಿನಾಟಿ ಟೂರ್ನಿಯಲ್ಲಿ ತನ್ನ ಗೆಲುವಿನ ಓಟ ಮುಂದುವರಿಸಿದ್ದಾರೆ.

2016ರ ಚಾಂಪಿಯನ್ ಮರಿನ್ ಸಿಲಿಕ್ ರೊಮಾನಿಯದ ಮರಿಯಸ್ ಕೊಪಿಲ್‌ರನ್ನು 6-7(4/7),6-4, 6-4 ಸೆಟ್‌ಗಳಿಂದ ಸೋಲಿಸಿದರು.

3ನೇ ಶ್ರೇಯಾಂಕದ ಜರ್ಮನಿ ಆಟಗಾರ ಅಲೆಕ್ಸಾಂಡರ್ ಝ್ವೆರೆವ್ ಡಚ್‌ನ ಹಿರಿಯ ಆಟಗಾರ ರಾಬಿನ್ ಹಾಸೆ ವಿರುದ್ಧ 7-5, 4-6, 5-7 ಅಂತರದಿಂದ ಸೋತಿದ್ದಾರೆ. ವಿಂಬಲ್ಡನ್ ಫೈನಲಿಸ್ಟ್ ಕೆವಿನ್ ಆ್ಯಂಡರ್ಸನ್ ಅವರು ಜೆರೆಮಿ ಚಾರ್ಡಿ ವಿರುದ್ಧ 7-6(8/6), 6-2 ಸೆಟ್‌ಗಳಿಂದ ಜಯ ಸಾಧಿಸಿದ್ದಾರೆ.

ಮಹಿಳೆಯರ ಸಿಂಗಲ್ಸ್‌ನಲ್ಲಿ ರೊಮಾನಿಯಾದ ಸಿಮೊನಾ ಹಾಲೆಪ್ ಮಳೆಯಿಂದಾಗಿ ಪಂದ್ಯ ರದ್ದುಗೊಳ್ಳುವ ಮೊದಲು 4-6, 6-4, 4-3 ಮುನ್ನಡೆಯಲ್ಲಿದ್ದರು.

  ಕಳೆದ ವಾರ 2ನೇ ಬಾರಿ ರೋಜರ್ಸ್ ಕಪ್ ಪ್ರಶಸ್ತಿ ಜಯಿಸಿದ್ದ ಹಾಲೆಪ್ ಬುಧವಾರ ಪಂದ್ಯದ ವೇಳೆ ಬೆನ್ನುನೋವು ಕಾಣಿಸಿಕೊಂಡಿತ್ತು. ವೈದ್ಯಕೀಯ ಚಿಕಿತ್ಸೆ ಪಡೆದು ಪಂದ್ಯವನ್ನು ಮುಂದುವರಿಸಿದ್ದರು. ಇದೇ ವೇಳೆ, ಹಾಲಿ ಚಾಂಪಿಯನ್ ಗಾರ್ಬೈನ್ ಮುಗುರುಝ ಅವರು ಲೆಸಿಯಾ ಸುರೆಂಕೊ ವಿರುದ್ಧ 2-6, 6-4, 6-4 ಸೆಟ್‌ಗಳಿಂದ ಶರಣಾಗಿ ಟೂರ್ನಿಯಿಂದ ನಿರ್ಗಮಿಸಿದ್ದಾರೆ.

7ನೇ ಶ್ರೇಯಾಂಕದ ಮುಗುರುಝ ವಿಂಬಲ್ಡನ್ ಟೂರ್ನಿಯಲ್ಲಿ ಎರಡನೇ ಸುತ್ತಿನಲ್ಲಿ ಮುಗ್ಗರಿಸಿದ್ದರು. ಬಲಗೈ ನೋವಿನ ಹಿನ್ನೆಲೆಯಲ್ಲಿ ಸ್ಯಾನ್‌ಜೋಸ್ ಹಾಗೂ ರೋಜರ್ಸ್ ಕಪ್ ಟೂರ್ನಿಯಿಂದ ಹಿಂದೆ ಸರಿದಿದ್ದರು.

ಯುಎಸ್ ಓಪನ್ ಚಾಂಪಿಯನ್ ಸ್ಲೋಯಾನ್ ಸ್ಟೀಫನ್ಸ್ ಜರ್ಮನಿಯ ಕ್ವಾಲಿಫೈಯರ್ ಟಟ್ಜಾನಾ ಮರಿಯಾರನ್ನು 6-3, 6-2 ನೇರ ಸೆಟ್‌ಗಳಿಂದ ಮಣಿಸುವ ಮೂಲಕ ಮೂರನೇ ಸುತ್ತು ತಲುಪಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X