Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಪ್ರವಾಹಪೀಡಿತ ಕೇರಳಕ್ಕೆ ನೆರವಾಗಲು...

ಪ್ರವಾಹಪೀಡಿತ ಕೇರಳಕ್ಕೆ ನೆರವಾಗಲು ಸಿದ್ಧಾರ್ಥ್ ‘ಚಾಲೆಂಜ್’

ವಿನೂತನ ಪ್ರಯತ್ನಕ್ಕೆ ಮುಂದಾದ ತಮಿಳು ನಟ

ವಾರ್ತಾಭಾರತಿವಾರ್ತಾಭಾರತಿ17 Aug 2018 10:44 PM IST
share
ಪ್ರವಾಹಪೀಡಿತ ಕೇರಳಕ್ಕೆ ನೆರವಾಗಲು ಸಿದ್ಧಾರ್ಥ್ ‘ಚಾಲೆಂಜ್’

ತಿರುವನಂತಪುರ, ಆ.17: ಕೇರಳ ಇತಿಹಾಸದಲ್ಲೇ ಭೀಕರ ಎನಿಸಿರುವ ಪ್ರವಾಹದಿಂದ ಕಂಗೆಟ್ಟ ಜನತೆಗೆ ನಟ ಸಿದ್ಧಾರ್ಥ್ ಸಹಾಯಹಸ್ತ ಚಾಚಿದ್ದಾರೆ. ಜನ ತಮಗೆ ಸಾಧ್ಯವಾದಷ್ಟು ನೆರವು ನೀಡಿ ಎಂದು ಅವರು ಜನತೆಯನ್ನು ಕೋರಿದ್ದಾರೆ.

ತಮ್ಮ ಈ ಸೇವಾ ಕೈಂಕರ್ಯವನ್ನು "ಕೇರಳ ಡೊನೇಷನ್ ಚಾಲೆಂಜ್" ಎಂದು ಕರೆದುಕೊಂಡಿರುವ ಅವರು, ಟ್ವಿಟರ್ ಹ್ಯಾಂಡಲ್‍ನಿಂದ, ಮುಖ್ಯಮಂತ್ರಿ ವಿಕೋಪ ಪರಿಹಾರ ನಿಧಿಗೆ ನೀಡಿದ ದೇಣಿಗೆಯ ರಸೀದಿಯನ್ನು ಪೋಸ್ಟ್ ಮಾಡಿದ್ದಾರೆ. ಜತೆಗೆ ಜನರನ್ನು ದೇಣಿಗೆ ನೀಡುವಂತೆ ಉತ್ತೇಜಿಸುವ ಪತ್ರವನ್ನೂ ಪೋಸ್ಟ್ ಮಾಡಿದ್ದಾರೆ.

"ನಾನು ಧೈರ್ಯದಿಂದ ನಿಮ್ಮಲ್ಲಿ ಭಿಕ್ಷೆ ಬೇಡುತ್ತಿದ್ದೇನೆ!, ನೀವು ಇದನ್ನು ಓದಲು ಮತ್ತು ಶೇರ್ ಮಾಡುವಂತೆ ಮಾಡಲು ನಾನು ಏನು ಮಾಡಬೇಕು?, ನಾನು ಕೇರಳ ಡೊನೇಷನ್ ಚಾಲೆಂಜ್ ಮಾಡಿದ್ದೇನೆ. ಇದು ಆಕರ್ಷಕ!. ನೀವು ಕೂಡಾ? ಪ್ಲೀಸ್?” ಎಂದು ಟ್ವೀಟ್ ಮಾಡಿದ್ದಾರೆ.

"ಈ ಪರಿಸ್ಥಿತಿಗೆ ನೀಡಬೇಕಾದಷ್ಟು ಕಾಳಜಿ ನೀಡಿಲ್ಲ ಎಂಬ ಬಗ್ಗೆ ನನಗೆ ನೋವಿದೆ. 2015ರಲ್ಲಿ ತಮಿಳುನಾಡಿನಲ್ಲಿ ಇಂಥದ್ದೇ ಪ್ರವಾಹ ಬಂದಾಗ ರಾಷ್ಟ್ರೀಯ ಮಾಧ್ಯಮ ನಿರ್ಲಕ್ಷ್ಯ ತೋರಿದ್ದನ್ನು ನನಗೆ ನೆನಪಿಸಿದೆ... ಪ್ರವಾಹ ಪರಿಹಾರಕ್ಕೆ ನೀಡಿದ ಪ್ರತಿಯೊಂದು ರೂಪಾಯಿ ದೇಣಿಗೆ ಕೂಡಾ ದೊಡ್ಡ ವ್ಯತ್ಯಾಸ ತರಬಲ್ಲದು. ರಾತ್ರೋರಾತ್ರಿ ಪವಾಡಸದೃಶ ವಾತಾವರಣ ಸೃಷ್ಟಿಸುವ ವಿಶೇಷ ಶಕ್ತಿ ಸಮಾಜ ಮಾಧ್ಯಮಕ್ಕೆ ಇದೆ ಎನ್ನುವುದು ನನ್ನ ನಂಬಿಕೆ" ಎಂದು ಟ್ವೀಟ್ ಜತೆಗೆ ಬರೆದಿರುವ ಪತ್ರದಲ್ಲಿ ಅವರು ಹೇಳಿದ್ದಾರೆ.

"ಈ ತುರ್ತು ಕಾರಣಕ್ಕೆ ನಿಮಗೆ ಎಷ್ಟು ಸಾಧ್ಯವೋ ಅಷ್ಟು ದೇಣಿಗೆ ನೀಡಿ ಎಂದು ನಾನು ಆಗ್ರಹಿಸುತ್ತೇನೆ. ಇತರರೂ ನಿಮ್ಮ ದೇಣಿಗೆಯಿಂದ ಸ್ಫೂರ್ತಿ ಪಡೆಯಬೇಕಾದರೆ, ನಿಮ್ಮ ದೇಣಿಗೆಯ ಪುರಾವೆಯನ್ನು ಆನ್‍ಲೈನ್‍ನಲ್ಲಿ ಪೋಸ್ಟ್ ಮಾಡಿ. ಇದನ್ನು ಕೇರಳ ಡೊನೇಶನ್ ಚಾಲೆಂಜ್ ಎಂದು ಕರೆಯೋಣ. ಇಂಟರ್‍ನೆಟ್ ಒಂದು ಸವಾಲನ್ನು ಎಷ್ಟು ಪ್ರೀತಿಸುತ್ತದೆ ಎನ್ನುವುದು ನಮಗೆಲ್ಲ ಗೊತ್ತು" ಎಂದು ಬಣ್ಣಿಸಿದ್ದಾರೆ.

ಪರಿಸ್ಥಿತಿಯ ತೀವ್ರತೆ ಬಗ್ಗೆ ಜಾಗೃತಿ ಮೂಡಿಸಲು ಪ್ರವಾಹದ ಬಗ್ಗೆ ಸುದ್ದಿ ಪ್ರಕಟಿಸುವಂತೆ, ಸಮಾಜ ಮಾಧ್ಯಮ ಕೊಡುಗೆ ಮತ್ತು ಪ್ರತಿಕ್ರಿಯೆ ನೀಡುವಂತೆಯೂ ಅವರು ಮನವಿ ಮಾಡಿದ್ದಾರೆ. ಇದು ಕೇರಳದಲ್ಲಿ ಬದಲಾವಣೆ ತರಬಲ್ಲದು ಎಂದು ಪ್ರತಿಪಾದಿಸಿದ್ದಾರೆ.

I dare you. I beg of you!

What do I have to do to make you read and share this?

I did the #KeralaDonationChallenge

It was awesome!

Will you? Please?#KeralaFloods#SaveKerala@CMOKerala pic.twitter.com/9RmMjSKVBC

— Siddharth (@Actor_Siddharth) August 16, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X