Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ಪುರಸಭೆಗೆ 23 ಮಂದಿ ನಾಮಪತ್ರ...

ಬಂಟ್ವಾಳ ಪುರಸಭೆಗೆ 23 ಮಂದಿ ನಾಮಪತ್ರ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ17 Aug 2018 10:45 PM IST
share
ಬಂಟ್ವಾಳ ಪುರಸಭೆಗೆ 23 ಮಂದಿ ನಾಮಪತ್ರ ಸಲ್ಲಿಕೆ

ಬಂಟ್ವಾಳ, ಆ. 17: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿ ಬಂಟ್ವಾಳ ಪುರಸಭೆಗೆ ಆ. 16ರಂದು ಒಟ್ಟು 23 ಮಂದಿ ನಾಮಪತ್ರ ಸಲ್ಲಿಸಿದ್ದು, ಶುಕ್ರವಾರ ಸರಕಾರಿ ಕಚೇರಿಗಳಿಗೆ ರಜೆಯಿದ್ದ ಕಾರಣ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಆ.18ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಬಿಜೆಪಿಯಿಂದ 10, ಕಾಂಗ್ರೆಸ್‌ನಿಂದ 6, ಜೆಡಿಎಸ್ 3, ಎಸ್‌ಡಿಪಿಐನಿಂದ 1 ಮತ್ತು ಪಕ್ಷೇತರ ಹಾಗೂ ಇತರರು 3 ಉಮೇದುವಾರಿಕೆಯನ್ನು ಸಲ್ಲಿಸಿದರು. ವಾರ್ಡ್ 2ರಲ್ಲಿ 2, 3ರಲ್ಲಿ 3, 4ರಲ್ಲಿ 1, 6ರಲ್ಲಿ 1, 7ರಲ್ಲಿ 2, 8ರಲ್ಲಿ 3, 12ರಲ್ಲಿ 1, 16ರಲ್ಲಿ 1, 17ರಲ್ಲಿ 1, 19ರಲ್ಲಿ 1, 21ರಲ್ಲಿ 1, 24ರಲ್ಲಿ 3, 25ರಲ್ಲಿ 1, 27ರಲ್ಲಿ 2 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದಾರೆ.

ಒಟ್ಟು 17 ವಾರ್ಡುಗಳಿಗಷ್ಟೇ ನಾಮಪತ್ರ ಸಲ್ಲಿಕೆಯಾಗಿರುವುದು ವಿಶೇಷ. ವಾರ್ಡ್ 1, 5, 9, 10, 11, 13, 14, 15, 20, 26ಕ್ಕೆ ಸ್ಪರ್ಧಿಸಲು ಇನ್ನೂ ಯಾರೂ ನಾಮಪತ್ರ ಸಲ್ಲಿಸದೆ ಶನಿವಾರಕ್ಕೆ ಕುತೂಹಲ ಉಳಿಸಿಕೊಂಡಿದ್ದಾರೆ.

ಕಳೆದ ಸಾಲಿನ ಪುರಸಭೆಯ ಸದಸ್ಯರಾದ ಕಾಂಗ್ರೆಸ್‌ನ ಪಿ.ರಾಮಕೃಷ್ಣ ಆಳ್ವ (ಕಳೆದ ಸಾಲಿನ ಅಧ್ಯಕ್ಷ) ಮುನೀಶ್ ಅಲಿ (ಎಸ್‌ಡಿಪಿಐ ಪುರಸಭಾ ಘಟಕ ಅಧ್ಯಕ್ಷ) ಜೆಸಿಂತಾ ಡಿಸೋಜ, ಮುಹಮ್ಮದ್ ಶರೀಫ್, ಎರಡು ಅವಧಿಗೆ ಅಧ್ಯಕ್ಷರಾಗಿದ್ದ ಬಿಜೆಪಿಯ ಬಿ.ದಿನೇಶ್ ಭಂಡಾರಿ ನಾಮಪತ್ರ ಸಲ್ಲಿಸಿದವರಲ್ಲಿ ಗಮನಾರ್ಹರು.

ಎಲ್ಲೆಲ್ಲಿ ಸ್ಪರ್ಧೆ?:

ಬಂಟ್ವಾಳ ಕಸ್ಬಾ ವಾರ್ಡ್ 2ರಲ್ಲಿ ಬಿಜೆಪಿಯ 2 ನಾಮಪತ್ರ ಸಲ್ಲಿಕೆಯಾಗಿದೆ. ಪುರಸಭೆ ಮಾಜಿ ಅಧ್ಯಕ್ಷ ಬಿ.ದಿನೇಶ್ ಭಂಡಾರಿ ಮತ್ತು ಯೋಗಿಶ್ ಕುಲಾಲ್ ನಾಮಪತ್ರ ಸಲ್ಲಿಸಿದವರು. ವಾರ್ಡ್ 3ಗೆ 1 ಕಾಂಗ್ರೆಸ್, 2 ಬಿಜೆಪಿಯಿಂದ ನಾಮಪತ್ರ ಸಲ್ಲಿಕೆಯಾಗಿದೆ. ಕಾಂಗ್ರೆಸ್ ನಿಂದ ಹೇಮಾವತಿ, ಬಿಜೆಪಿಯಿಂದ ಮೀನಾಕ್ಷಿ ಮತ್ತು ವಸಂತಿ ನಾಮಪತ್ರ ಸಲ್ಲಿಸಿದ್ದಾರೆ.

ವಾರ್ಡ್ 4ಕ್ಕೆ ಬಿಜೆಪಿಯಿಂದ ರೇಖಾ ಪೈ, ವಾರ್ಡ್ 6ಕ್ಕೆ ಬಿಜೆಪಿಯಿಂದ ದೇವಕಿ , ವಾರ್ಡ್ 7ಕ್ಕೆ ಬಿಜೆಪಿಯಿಂದ ಶಶಿಕಲಾ ಮತ್ತು ಸುಜಾತಾ ನಾಮಪತ್ರ ಸಲ್ಲಿಸಿದ್ದಾರೆ. ವಾರ್ಡ್ 8ಕ್ಕೆ ಕಾಂಗ್ರೆಸ್ ಪಕ್ಷದ ಮುಹಮ್ಮದ್ ಸನೀರ್, ಎಸ್‌ಡಿಪಿಐನ ಮುನೀಶ್ ಅಲಿ ಅಹ್ಮದ್, ಜೆಡಿಎಸ್‌ನ ಹಾರೂನ್ ರಶೀದ್ ನಾಮಪತ್ರ ಸಲ್ಲಿಸಿದ್ದಾರೆ. ವಾರ್ಡ್ 12ಕ್ಕೆ ಜೆಡಿಎಸ್‌ನಿಂದ ವಸಂತಿ, ವಾರ್ಡ್ 16ರಲ್ಲಿ ಎಸ್‌ಡಿಪಿಐನ ಸಾವುಲ್ ಹಮೀದ್ ನಾಮಪತ್ರ ಸಲ್ಲಿಸಿದ್ದಾರೆ. ವಾರ್ಡ್ 17ಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಅಬ್ದುಲ್ ಖಾದರ್ ಇಕ್ಬಾಲ್, ವಾರ್ಡ್ 19ರಲ್ಲಿ ಮುಹಮ್ಮದ್ ಶರೀಫ್ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ವಾರ್ಡ್ 21ರಲ್ಲಿ ಕಳೆದ ಸಾಲಿನ ಅಧ್ಯಕ್ಷ ಪಿ.ರಾಮಕೃಷ್ನ ಆಳ್ವ ನಾಮಪತ್ರ ಸಲ್ಲಿಸಿದ್ದಾರೆ. ವಾರ್ಡ್ 24ರಲ್ಲಿ ಮುಹಮ್ಮದ್ ಅಮಾನುಲ್ಲಾ (ಸ್ವತಂತ್ರ), ಮುಹಮ್ಮದ್ ಅಮಾನುಲ್ಲಾ (ಜೆಡಿಎಸ್), ಅಬುಬಕರ್ ಸಿದ್ದೀಕ್ (ಕಾಂಗ್ರೆಸ್) ನಾಮಪತ್ರ ಸಲ್ಲಿಸಿದ್ದಾರೆ.

ವಾರ್ಡ್ 25ರಲ್ಲಿ ಜೆಸಿಂತಾ ಡಿಸೋಜ ಕಾಂಗ್ರೆಸ್ ಅಭ್ಯರ್ಥಿಯಾಗಿ, ವಾರ್ಡ್ 27ರಲ್ಲಿ ಸಂಧ್ಯಾ ಮತ್ತು ಜಯರಾಮ ಜಿ. ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X