Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೆರೆಪೀಡಿತ ಪ್ರದೇಶಗಳಿಗೆ ದ.ಕ. ಜಿಲ್ಲಾ...

ನೆರೆಪೀಡಿತ ಪ್ರದೇಶಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

ವಾರ್ತಾಭಾರತಿವಾರ್ತಾಭಾರತಿ17 Aug 2018 11:08 PM IST
share
ನೆರೆಪೀಡಿತ ಪ್ರದೇಶಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

ಮಂಗಳೂರು, ಆ.17: ದ.ಕ. ಜಿಲ್ಲೆಯ ವಿವಿಧ ನೆರೆಪೀಡಿತ ಪ್ರದೇಶಗಳಿಗೆ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಶುಕ್ರವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಮೊದಲು ಬಂಟ್ವಾಳ ತಾಲೂಕಿನ ಗೂಡಿನಬಳಿ, ಆಲಡ್ಕ ಮತ್ತು ಪಾಣೆಮಂಗಳೂರಿಗೆ ಭೇಟಿ ನೀಡಿದರು. ನೇತ್ರಾವತಿ ಹಳೆ ಸೇತುವೆ ಸಮೀಪ ನೆರೆ ನೀರನ್ನು ವೀಕ್ಷಿಸಿದ ಸಚಿವರು, ಬಳಿಕ ಆಲಡ್ಕ ಪ್ರದೇಶದಲ್ಲಿ ನೆರೆ ನೀರಿನಿಂದ ಮುಳುಗಿದ ಜನ ವಸತಿ ಪ್ರದೇಶಗಳನ್ನು ವೀಕ್ಷಿಸಿ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ, ಅಹವಾಲು ಆಲಿಸಿದರು.

ಬಳಿಕ ಉಪ್ಪಿನಂಗಡಿಗೆ ಆಗಮಿಸಿದ ಸಚಿವರು, ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದರು. ನೇತ್ರಾವತಿ ಮತ್ತು ಕುಮಾರಧಾರ ನದಿ ನೀರಿನ ಹರಿವು ವೀಕ್ಷಿಸಿದರು. ಬಳಿಕ ದೇವಸ್ಥಾನಕ್ಕೆ ಭೇಟಿ ನೀಡಿದರು.

ನಂತರ ಸಚಿವರು ಶಿರಾಡಿ ಘಾಟಿ ಹೆದ್ದಾರಿಯಲ್ಲಿ ಸಂಚರಿಸಿದರು. ಘಾಟಿಯಲ್ಲಿ ಮಾರೇನಹಳ್ಳಿಯವರೆಗೆ ತೆರಳಿದ ಸಚಿವರು, ಹೆದ್ದಾರಿಯಲ್ಲಿ ಅಲ್ಲಲ್ಲಿ ಉಂಟಾಗಿರುವ ಕುಸಿತ ಪರಿಶೀಲಿಸಿದರು. ಶಿರಾಡಿ ವೀಕ್ಷಿಸಿದ ಸಚಿವರು, ಬಳಿಕ ಸುಬ್ರಹ್ಮಣ್ಯಕ್ಕೆ ಆಗಮಿಸಿದರು.

ಸುಬ್ರಹ್ಮಣ್ಯ ಕುಲ್ಕುಂದ ಕುದುರೆಮಜಲು ಎಂಬಲ್ಲಿ ಸುಮಾರು 15 ಕುಟುಂಬಗಳ ಮನೆ ಮುಳುಗಡೆಯಾಗಿ ಅವರು ಆಶ್ರಯ ಪಡೆದಿರುವ ಕುಲ್ಕುಂದ ಸರಕಾರಿ ಶಾಲೆಗೆ ಆಗಮಿಸಿ ಸಂತ್ರಸ್ತರೊಂದಿಗೆ ಸಮಾಲೋಚನೆ ನಡೆಸಿದರು.

ಅವರ ಅಹವಾಲುಗಳನ್ನು ಆಲಿಸಿದ ಸಚಿವರು, ತಾತ್ಕಾಲಿಕ ಆಶ್ರಯತಾಣದಲ್ಲಿ ಎಲ್ಲ ರೀತಿಯ ಅಗತ್ಯ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿದರು. ಶಾಲೆಯಲ್ಲಿ ಸಂತ್ರಸ್ತರಿಗೆ ಆರೋಗ್ಯ ಇಲಾಖೆಯಿಂದ ತೆರೆದಿರುವ ಚಿಕಿತ್ಸಾಲಯವನ್ನು ಪರಿಶೀಲಿಸಿದರು. ಸಂತ್ರಸ್ತರಿಗೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಊಟೋಪಚಾರ ವ್ಯವಸ್ಥೆ ಏರ್ಪಡಿಸಿರುವುದಕ್ಕೆ ಸಚಿವ ಯು.ಟಿ. ಖಾದರ್ ಶ್ಲಾಘಿಸಿದರು.

ನಂತರ ಸಚಿವರು ಕುಲ್ಕುಂದ ಕಾಲನಿಗೆ ಭೇಟಿ ನೀಡಿ, ಮಳೆ ಅನಾಹುತ ವೀಕ್ಷಿಸಿದರು. ಮಳೆಗಾಲ ಮುಗಿದ ಬಳಿಕ ಈ ಕಾಲನಿಗೆ ರಸ್ತೆ ಮತ್ತು ಮೂಲ ಸೌಕರ್ಯ ವ್ಯವಸ್ಥೆ ಒದಗಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲಿಂದ ಸಚಿವರು, ಸುಬ್ರಹ್ಮಣ್ಯ ಕುಮಾರಧಾರ ಸೇತುವೆಯಲ್ಲಿ ನಿಂತು, ನದಿ ನೆರೆ ವೀಕ್ಷಿಸಿದರು. ಬಳಿಕ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವರು, ದರ್ಶನ ಪಡೆದು ಸ್ವಾಮೀಜಿ ಅವರನ್ನು ಭೇಟಿಯಾಗಿದರು.

ಸುಬ್ರಹ್ಮಣ್ಯದಿಂದ ಸಚಿವರು ಕಿದು ಸಿಪಿಸಿಆರ್‌ಐಗೆ ಭೇಟಿ ನೀಡಿದರು. ಅಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಸಮಾಲೋಚಿಸಿ, ಕಿದುವಿನಲ್ಲೇ ಸಿಪಿಸಿಆರ್‌ಐ ಉಳಿಸಲು ರಾಜ್ಯ ಸರಕಾರ ಎಲ್ಲ ರೀತಿಯ ಬೆಂಬಲ ನೀಡಲು ಸಿದ್ಧವಿದೆ. ಈ ಬಗ್ಗೆ ಸಂಸದರು ಮತ್ತು ಶಾಸಕರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಜಿಲ್ಲೆಯ ಹವಾಮಾನ ಮುನ್ನೆಚ್ಚರಿಕೆ, ದುರಂತಗಳ ಮಾಹಿತಿ ಮತ್ತು ಘಾಟಿ ರಸ್ತೆಗಳ ಸಂಚಾರ ವ್ಯವಸ್ಥೆ ಬಗ್ಗೆ ಸಾರ್ವಜನಿಕರಿಗೆ ಮುಂಜಾಗ್ರತೆಯ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ವೆಬ್ ಸೈಟ್ dk.nic in ಇದರಲ್ಲಿ ನಿರಂತರ ಮಾಹಿತಿ ನೀಡಲಾಗುವುದು. ಪ್ರತಿ ದಿನ ಎರಡು ಸಲ ಇದರಲ್ಲಿ ಈ ಕುರಿತ ಮಾಹಿತಿ ಪರಿಷ್ಕರಿಸಲಾಗುವುದು. ಸಾರ್ವಜನಿಕರು ತಮ್ಮ ದೂರ ಪ್ರಯಾಣ ಸಂದರ್ಭದಲ್ಲಿ ಇದನ್ನು ಗಮನಿಸಿ ಸಂಚಾರ ಕೈಗೊಳ್ಳಬಹುದು ಎಂದು ಸಚಿವರು ವಿವರಿಸಿದರು.

ಸಚಿವರೊಂದಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪುತ್ತೂರು ಉಪವಿಭಾಗಾಧಿಕಾರಿ ಕೃಷ್ಣಮೂರ್ತಿ, ಜಿಪಂ ಸದಸ್ಯ ಪಿ.ಪಿ. ವರ್ಗೀಸ್, ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮತ್ತಿತರರು ಇದ್ದರು.

ನೆರೆ ನಿಯಂತ್ರಣ ಸರಕಾರದ ಆದ್ಯತೆ

ಪ್ರಸಕ್ತ ದ.ಕ. ಜಿಲ್ಲೆಯಲ್ಲಿ ಹಿಂದೆಂದೂ ಕಂಡುಬರದ ಮಳೆ ಬಂದು ಪ್ರಾಕೃತಿಕ ವಿಕೋಪ ಉಂಟಾಗಿದೆ. ಜನರ ಸುರಕ್ಷತೆ ಮತ್ತು ನೆರೆ ನಿಯಂತ್ರಣ ಸರಕಾರದ ಮೊದಲ ಆದ್ಯತೆಯಾಗಿದೆ. ಜನರ ಆಸ್ತಿಪಾಸ್ತಿಗಳನ್ನು ಸಾಧ್ಯವಾಗುವಷ್ಟು ಮಟ್ಟಿಗೆ ರಕ್ಷಿಸಲು ಪ್ರಯತ್ನಿಸಲಾಗುವುದು ಎಂದು ಸಚಿವ ಯು.ಟಿ. ಖಾದರ್ ತಿಳಿಸಿದರು.

ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯ ಎಲ್ಲ ತಾಲೂಕುಗಳಿಗೂ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸಂಭಾವ್ಯ ನೆರೆ ಪೀಡಿತ ಪ್ರದೇಶಗಳನ್ನು ಗುರುತಿಸಿ ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ದ.ಕ. ಜಿಲ್ಲಾಡಳಿತ ಬಹಳ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ತಿಳಿಸಿದರು.

ನೆರೆ ನಿರ್ವಹಣೆಗೆ ಯಾವುದೇ ಅನುದಾನದ ಕೊರತೆ ಇಲ್ಲ. ಎಲ್ಲ ತಹಶೀಲ್ದಾರ್‌ಗಳ ಬಳಿ ತಲಾ 30 ಲಕ್ಷ ರೂ. ಅನುದಾನ ಇದೆ. ರಾಜ್ಯ ಸರಕಾರ ಜಿಲ್ಲೆಗೆ ಮತ್ತೆ 50 ಕೋಟಿ ರೂ. ಬಿಡುಗಡೆ ಮಾಡಿದೆ. ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ಮೊತ್ತ ನೀಡಲಾಗುವುದು ಎಂದು ಯು.ಟಿ. ಖಾದರ್ ಹೇಳಿದರು.

ಘಟ್ಟ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ನದಿಗಳಲ್ಲಿ ನೀರಿನ ಪ್ರಮಾಣ ಅಧಿಕವಾಗಿ ನೆರೆ ಪರಿಸ್ಥಿತಿ ಉಂಟಾಗಿದೆ. ಮಳೆಗಾಲ ಮುಗಿದ ಬಳಿಕ ಹಾನಿಯಾಗಿರುವ ರಸ್ತೆ, ಸೇತುವೆ , ಸಾರ್ವಜನಿಕ ಸ್ಥಳಗಳ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಶಿರಾಡಿ ಘಾಟಿ ಬಂದ್ ಆಗಿರುವುದರಿಂದ ಹಲವಾರು ದೊಡ್ಡ ಗಾತ್ರದ ಟ್ಯಾಂಕರ್ ಗಳು ಗುಂಡ್ಯ ಸಮೀಪ ಬಾಕಿಯಾಗಿದ್ದು, ಇವರಿಗೆ ಊಟದ ವ್ಯವಸ್ಥೆಯನ್ನು ಜಿಲ್ಲಾಡಳಿತ ಒದಗಿಸಲಿದೆ ಎಂದು ಖಾದರ್ ಹೇಳಿದರು.

ಚಾರ್ಮಾಡಿ: ಘನ ವಾಹನ ಸಂಚಾರ ನಿಷೇಧ

 ಪ್ರಸಕ್ತ ದ.ಕ. ಜಿಲ್ಲೆಯಿಂದ ಬೆಂಗಳೂರು ಮತ್ತಿತರ ಕಡೆಗೆ ಹೋಗಲು ಚಾರ್ಮಾಡಿ ಘಾಟಿ ಏಕೈಕ ರಸ್ತೆಯಾಗಿರುವುದರಿಂದು ಮುಂಜಾಗರೂಕತಾ ಕ್ರಮವಾಗಿ ಭಾರೀ ಗಾತ್ರದ ಮಲ್ಟಿ ಆಕ್ಸಲ್ ಲಾರಿ ಮತ್ತು ಟ್ಯಾಂಕರ್ ಗಳ ಸಂಚಾರವನ್ನು ಚಾರ್ಮಾಡಿಯಲ್ಲಿ ನಿಷೇದಿಸಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X