Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಾಕೃತಿಕ ವಿಕೋಪದಿಂದ ಮನೆ...

ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಬಡಾವಣೆ ನಿರ್ಮಾಣ: ಕುಮಾರಸ್ವಾಮಿ

ಪ್ರವಾಹ ಸಂತ್ರಸ್ತರಿಗೆ ಅಭಯ ನೀಡಿದ ಸಿಎಂ

ವಾರ್ತಾಭಾರತಿವಾರ್ತಾಭಾರತಿ18 Aug 2018 7:48 PM IST
share
ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಬಡಾವಣೆ ನಿರ್ಮಾಣ: ಕುಮಾರಸ್ವಾಮಿ

ಮಡಿಕೇರಿ, ಆ.18: ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದು ಕೊಂಡವರಿಗಾಗಿ ಬಡಾವಣೆಯೊಂದನ್ನು ನಿರ್ಮಿಸಿ, ಮನೆಗಳನ್ನು ಹಂಚಿಕೆ ಮಾಡಲಾಗುವುದೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಮಡಿಕೇರಿ ನಗರಕ್ಕೆ ಆಗಮಿಸಿದ ಅವರು, ಪೊಲೀಸ್ ಸಮುದಾಯ ಭವನ, ಮೈತ್ರಿ ಹಾಲ್‍ನಲ್ಲಿ ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರದ ಬಳಿ ಹಣದ ಕೊರತೆ ಇಲ್ಲ, ಇದು ಪ್ರಕೃತಿಯಿಂದಾದ ವಿಕೋಪವಾಗಿದ್ದು, ಎಲ್ಲಾ ರೀತಿಯ ನೆರವನ್ನು ಸರ್ಕಾರ ನೀಡಲಿದೆ. ಮನೆ ಕಳೆದುಕೊಂಡವರಿಗೆ ಸರ್ಕಾರದ ಮೂಲಕವೆ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿಗಳು ಜೀವಹಾನಿಗೆ 5 ಲಕ್ಷ ರೂ. ಹಾಗೂ ಮನೆ ಕಳೆದುಕೊಂಡವರಿಗೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ಸರ್ಕಾರ ಸಂತ್ರಸ್ತರೊಂದಿಗೆ ಇದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ. ಈ ರೀತಿಯ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆಯಬಾರದಾಗಿತ್ತು. ಆದರೆ, ನಡೆದು ಹೋಗಿದೆ. ಮುಂದೆ ನೊಂದವರಿಗೆ ನೆರವನ್ನು ನೀಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಇದನ್ನು ನಿಭಾಯಿಸುವುದಾಗಿ ಭರವಸೆ ನೀಡಿದರು.

2 ದಿನ ವಾಸ್ತವ್ಯ
ಮುಂದಿನ ವಾರ ಜಿಲ್ಲೆಗೆ ಆಗಮಿಸಿ 2 ದಿನ ವಾಸ್ತವ್ಯ ಹೂಡುವ ಮೂಲಕ ಸಂಕಷ್ಟದಲ್ಲಿ ಸಿಲುಕಿರುವ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು. ನಿಮ್ಮ ಬದುಕಿನಲ್ಲಿ ಬೆಳಕನ್ನು ಮೂಡಿಸುವ ಕಾರ್ಯವನ್ನು ನಾನು ಮಾಡುತ್ತೇನೆಂದು ಭರವಸೆ ನೀಡಿದ ಮುಖ್ಯಮಂತ್ರಿ ವಿಶೇಷ ವಿಮಾನದ ಮೂಲಕ ಬೆಟ್ಟ ಪ್ರದೇಶದಲ್ಲಿ ಸಿಲುಕಿರುವ ಗ್ರಾಮಸ್ಥರನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗುವುದೆಂದರು. ಸಂತ್ರಸ್ತರ ಸಲಹೆಯಂತೆಯೇ ಬಡಾವಣೆ ಮತ್ತು ಮನೆಗಳು ನಿರ್ಮಾಣವಾಗಲಿದೆಯೆಂದು ಸ್ಪಷ್ಟಪಡಿಸಿದರು. 

ಕಣ್ಣೀರಿಟ್ಟ ಸಂತ್ರಸ್ತರು
ಮುಖ್ಯಮಂತ್ರಿಗಳ ಬಳಿ ಅಳಲು ತೋಡಿಕೊಂಡ ಸಂತ್ರಸ್ತರು ಕಳೆದ 42 ವರ್ಷಗಳ ಬದುಕು ಮಣ್ಣು ಪಾಲಾಗಿದೆಯೆಂದು ಕಣ್ಣೀರು ಹಾಕಿದರು. ಕಲ್ಲು ಮತ್ತು ಮಣ್ಣಿನ ರಾಶಿ ಒಟ್ಟಿಗೆ ಬಂದು ನಮ್ಮನ್ನು ಊರು ಬಿಡುವಂತೆ ಮಾಡಿದೆ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ನಾವು ಬದುಕಿದ್ದೇವೆ ಎಂದು ಮಹಿಳೆಯೊಬ್ಬರು ಕಣ್ಣೀರು ಹಾಕಿದರು. ನೊಂದವರಿಗೆ ಸಾಂತ್ವನ ಹೇಳಿದ ಸಿಎಂ ಕುಮಾರಸ್ವಾಮಿ ನಿಮ್ಮೊಂದಿಗೆ ನಾನಿದ್ದೇನೆ. ಹೊಸ ಬದುಕು ಕಟ್ಟಿಕೊಡುತ್ತೇನೆ ಎಂದು ಭರವಸೆ ನೀಡಿದಾಗ ಸಂತ್ರಸ್ತರು ಜೈಕಾರ ಹಾಕಿದ ಘಟನೆ ನಡೆಯಿತು.

ನಂತರ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಗರದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

ಸಭೆ ರದ್ದು
ಇತ್ತ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸುತ್ತಾರೆ ಎಂದು ಕಾಯ್ದು ಕುಳಿತಿದ್ದ ಕೇಂದ್ರ ಸಚಿವ ಸದಾನಂದ ಗೌಡ ಹಾಗೂ ಶಾಸಕ ಕೆ.ಜಿ.ಬೋಪಯ್ಯ, ದಿಢೀರಾಗಿ ಮುಖ್ಯಮಂತ್ರಿಗಳ ಸಭೆ ರದ್ದಾದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಭಾಂಗಣದಿಂದ ಹೊರ ಬಂದ ಡಿ.ವಿ.ಸದಾನಂದ ಗೌಡ ಸುದ್ದಿಗಾರರೊಮದಿಗೆ ಮಾತನಾಡಿ, ನಮ್ಮನ್ನು ಸಭೆಗೆ ಆಹ್ವಾನಿಸಿ ಸಭೆಯನ್ನು ದಿಢೀರಾಗಿ ರದ್ದುಗೊಳಿಸಿರುವ ಕ್ರಮವನ್ನು ಖಂಡಿಸುವುದಾಗಿ ತಿಳಿಸಿದರು.

ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಮುಖ್ಯಮಂತ್ರಿಗಳ ಬಗ್ಗೆ ನಮಗೆ ಅಪಾರ ಭರವಸೆ ಇತ್ತು. ಆದರೆ, ನಮ್ಮ ವಿಶ್ವಾಸ ಹುಸಿಯಾಗಿದ್ದು, ಸಭೆ ನಡೆಸದೆ ತೆರಳಿರುವುದರಿಂದ ಅವರ ನಿಜ ಬಣ್ಣಬಯಲಾಗಿದೆಯೆಂದು ಟೀಕಿಸಿದರು. ಜನಪ್ರತಿನಿಧಿಗಳನು ಕಾಯಿಸಿ ಸಭೆ ನಡೆಸದೆ ಕೇವಲ ಭರವಸೆ ನೀಡಿ ಹೋಗಿದ್ದಾರೆ. ಕಳೆದ ಬಾರಿ ಬಂದಾಗ 100 ಕೋಟಿ ರೂ. ಕೊಡಗು ಜಿಲ್ಲೆಗೆ ನೀಡುವುದಾಗಿ ಭರವಸೆ ನೀಡಿದ್ದ ಮುಖ್ಯ ಮಂತ್ರಿಗಳು ಇಲ್ಲಿಯವರೆಗೆ ಎಷ್ಟು ಹಣ ನೀಡಿದ್ದಾರೆ ಎಂಬುದನ್ನು ಬಹಿರಂಗ ಪಡಿಸಲಿ ಎಂದು ಬೋಪಯ್ಯ ಸವಾಲು ಹಾಕಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಸಂಸದ ಪ್ರತಾಪ ಸಿಂಹ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X