Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿರೂರು ಸ್ವಾಮೀಜಿ ನಿಗೂಢ ಸಾವಿನ ಪ್ರಕರಣ:...

ಶಿರೂರು ಸ್ವಾಮೀಜಿ ನಿಗೂಢ ಸಾವಿನ ಪ್ರಕರಣ: ತಿಂಗಳಾದರೂ ಬಾರದ ಅಂತಿಮ ಮರಣೋತ್ತರ ಪರೀಕ್ಷೆ ವರದಿ

ವಾರ್ತಾಭಾರತಿವಾರ್ತಾಭಾರತಿ18 Aug 2018 10:29 PM IST
share
ಶಿರೂರು ಸ್ವಾಮೀಜಿ ನಿಗೂಢ ಸಾವಿನ ಪ್ರಕರಣ: ತಿಂಗಳಾದರೂ ಬಾರದ ಅಂತಿಮ ಮರಣೋತ್ತರ ಪರೀಕ್ಷೆ ವರದಿ

ಉಡುಪಿ, ಆ.18: ಶಿರೂರು ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಗೂಢ ಸಾವಿನ ಪ್ರಕರಣಕ್ಕೆ  ಆ.19 ಒಂದು ತಿಂಗಳು ಪೂರ್ಣಗೊಳ್ಳಲಿದ್ದು, ಪ್ರಕರಣದ ಮರಣೋತ್ತರ ಪರೀಕ್ಷೆಯ ಅಂತಿಮ ವರದಿಯು ಈವರೆಗೂ ಬಾರದಿರುವುದರಿಂದ ಇಡೀ ಪ್ರಕರಣ ಇನ್ನೂ ನಿಗೂಢವಾಗಿಯೇ ಉಳಿದು ಕೊಂಡಿದೆ.

ಜು.17ರಂದು ಅನಾರೋಗ್ಯಕ್ಕೆ ತುತ್ತಾಗಿದ್ದ ಶಿರೂರು ಸ್ವಾಮೀಜಿ ಬೆಳಗ್ಗೆ 11ಗಂಟೆಗೆ ಉಡುಪಿಯ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜು.18ರಂದು ಬೆಳಗಿನ ಜಾವ 1:05ರ ಸುಮಾರಿಗೆ ಕೆಎಂಸಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಜು.19ರಂದು ಬೆಳಗ್ಗೆ 8:30ರ ಸುಮಾರಿಗೆ ಮೃತಪಟ್ಟರು.

ಈ ವೇಳೆ ಆಸ್ಪತ್ರೆಯ ವೈದ್ಯಾಧಿಕಾರಿಗಳು ಸ್ವಾಮೀಜಿಯ ರಕ್ತದಲ್ಲಿ ವಿಷದ ಅಂಶ ಪತ್ತೆಯಾಗಿರುವುದಾಗಿ ತಿಳಿಸಿದ್ದರು. ಇದು ಸ್ವಾಮೀಜಿಯ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಕಾಡುವಂತೆ ಮಾಡಿತು. ಈ ಬಗ್ಗೆ ಸ್ವಾಮೀಜಿಯ ಸಾವಿನಲ್ಲಿ ಸಂಶಯವಿರುವುದಾಗಿ ಸಹೋದರ ಲಾತವ್ಯ ಆಚಾರ್ಯ ನೀಡಿದಂತೆ ಹಿರಿಯಡ್ಕ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿತ್ತು. ಅದರಂತೆ ಪೊಲೀಸರು ತನಿಖೆ ಆರಂಭಿಸಿ ಹಲವರನ್ನು ವಿಚಾರಣೆಗೆ ಒಳಪಡಿಸಿದ್ದರು. ಉಡುಪಿ ಹಾಗೂ ಮೂಲಮಠವನ್ನು ವಶಕ್ಕೆ ಪಡೆದು ಹಲವು ಮಾದರಿಗಳನ್ನು ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೊೀಗಲಾಯಕ್ಕೆ ಕಳುಹಿಸಿಕೊಡಲಾಗಿತ್ತು.

ಪ್ರಕರಣದ ಮರಣೋತ್ತರ ಪರೀಕ್ಷೆಯ ವರದಿಯನ್ನು ಆಸ್ಪತ್ರೆಯವರು ಜು.30 ರಂದು ಒಪ್ಪಿಸಿದ್ದರು. ಇದರಲ್ಲಿ ಅಂತಿಮ ವರದಿಯನ್ನು ವಿಧಿ ವಿಜ್ಞಾನ ಪ್ರಯೋ ಗಾಲಯದ ವರದಿಯ ಬಂದ ನಂತರವೇ ನೀಡಲಾಗುವುದು ಎಂದು ಹೇಳ ಲಾಗಿತ್ತು. ಆದರೆ ಪ್ರಕರಣ ಸಂಭವಿಸಿ ತಿಂಗಳಾದರೂ ಈವರೆಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದಿಲ್ಲ. ಹಾಗಾಗಿ ಈ ಪ್ರಕರಣದ ರಹಸ್ಯ ಇನ್ನೂ ಬಯಲಾಗಿಲ್ಲ. ಪೊಲೀಸರು ಕೂಡ ಈ ವರದಿಯ ನಿರೀಕ್ಷೆಯಲ್ಲಿದ್ದಾರೆ.

ಈ ಮಧ್ಯೆ ಈ ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂಬ ಮಾತು ಕೇಳಿಬರುತ್ತಿದೆ. ‘ಒಂದು ಅಪಘಾತ, ಕಳ್ಳತನ ನಡೆದರೂ ತಕ್ಷಣವೇ ಅದರ ಮಾಹಿತಿ ನ್ಯಾಯಾಲಯಕ್ಕೆ ಬರುತ್ತದೆ. ಆದರೆ ಇಂದಿಗೂ ಕೂಡ ಶಿರೂರು ಸ್ವಾಮೀಜಿಯ ಸಾವಿನ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿಯೇ ಇಲ್ಲ. ಯಾಕೆಂದರೆ ಈ ಸಂಬಂಧ ಎಫ್‌ಐಆರ್ ದಾಖಲೇ ಆಗಿಲ್ಲ. ನ್ಯಾಯಾಲಯಕ್ಕೆ ಮಾಹಿತಿಯೇ ಇಲ್ಲದಿದ್ದರೆ ಈ ಪ್ರಕರಣದಲ್ಲಿ ನ್ಯಾಯ ಹೇಗೆ ಸಿಗುವುದು ಹೇಗೆ’ ಎಂದು ಸ್ವಾಮೀಜಿಯ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ಪ್ರಶ್ನಿಸಿದ್ದಾರೆ.

ಆದರೆ ಪೊಲೀಸರ ಪ್ರಕಾರ ಈ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಎಫ್‌ಐಆರ್ ದಾಖಲಿಸುವ ಅಗತ್ಯವೇ ಇಲ್ಲ. ಮರಣೋತ್ತರ ಪರೀಕ್ಷೆಯ ಅಂತಿಮ ವರದಿಯಲ್ಲಿ ಸ್ವಾಮೀಜಿಯದ್ದು ಕೊಲೆ ಎಂಬುದಾಗಿ ಬಂದರೆ, ಈಗಾಗಲೇ ಮೃತರ ಸಹೋದರ ನೀಡಿದ ಪ್ರಕರಣವು ಕೊಲೆ ಪ್ರಕರಣವಾಗಿ ಪರಿವರ್ತನೆಯಾಗುತ್ತದೆ. ಪೆರ್ಡೂರು ದನದ ವ್ಯಾಪಾರಿ ಹುಸೇನಬ್ಬ ಪ್ರಕರಣ ದಲ್ಲೂ ಇದೇ ರೀತಿ ಕೊಲೆ ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಶಿರೂರು ಸ್ವಾಮೀಜಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಇಂದಿಗೂ ಅಂತಿಮ ಮರಣೋತ್ತರ ಪರೀಕ್ಷೆ ವರದಿ ಬಂದಿಲ್ಲ. ಈ ರೀತಿ ಯಾವುದೇ ಪ್ರಕರಣದಲ್ಲಿ ವಿಳಂಬ ಆಗಿಲ್ಲ. ಮೃತರಾದವರು ಸ್ವಾಮೀಜಿಯಾಗಿರುವುದರಿಂದ ಸಾಮಾನ್ಯ ಪ್ರಕರಣದಲ್ಲಿ ಬರುವುದಕ್ಕಿಂತ ಶೀಘ್ರವೇ ವರದಿ ಬರಬೇಕಾಗಿತ್ತು. ಕೊಲೆ ಶಂಕೆ ಇದ್ದರೂ ಅಂತಿಮ ವರದಿ ಬಂದಿಲ್ಲ. ವರದಿ ಬರುವುದು ತಡವಾದರೆ ವಿಷ ಕೂಡ ಅದರ ವಿಷತ್ವವನ್ನು ಕಳೆದುಕೊಳ್ಳುತ್ತದೆ. ಆದುದರಿಂದ ಆದಷ್ಟು ಬೇಗ ಅಂತಿಮ ವರದಿ ಬರಬೇಕು.

-ರವಿಕಿರಣ್ ಮುರ್ಡೇಶ್ವರ, ನ್ಯಾಯವಾದಿ

ಶಿರೂರು ಸ್ವಾಮೀಜಿ ಸಾವಿನ ಪ್ರಕರಣದ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಇನ್ನೂ ಬಂದಿಲ್ಲ. ಆ ವರದಿ ಬಂದ ನಂತರವೇ ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯರು ಮರಣೋತ್ತರ ಪರೀಕ್ಷೆಯ ಅಂತಿಮ ವರದಿಯನ್ನು ನೀಡ ಲಿದ್ದಾರೆ.
-ಲಕ್ಷ್ಮಣ್ ನಿಂಬರ್ಗಿ, ಪೊಲೀಸ್ ಅಧೀಕ್ಷಕರು, ಉಡುಪಿ ಜಿಲ್ಲೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X