Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟೋಲ್ ಸಂಗ್ರಹ: ಸೆಪ್ಟಂಬರ್‌ವರೆಗೆ...

ಟೋಲ್ ಸಂಗ್ರಹ: ಸೆಪ್ಟಂಬರ್‌ವರೆಗೆ ಯಥಾಸ್ಥಿತಿ ಮುಂದುವರಿಕೆ

ಜನಪ್ರತಿನಿಧಿಗಳು, ಹೋರಾಟಗಾರರ ಸಭೆಯಲ್ಲಿ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ18 Aug 2018 10:36 PM IST
share
ಟೋಲ್ ಸಂಗ್ರಹ: ಸೆಪ್ಟಂಬರ್‌ವರೆಗೆ ಯಥಾಸ್ಥಿತಿ ಮುಂದುವರಿಕೆ

ಉಡುಪಿ, ಆ.18: ಮುಂದಿನ ಸೆಪ್ಟೆಂಬರ್ ತಿಂಗಳ ಕೊನೆಯವರೆಗೆ ಜಿಲ್ಲೆಯ ಹೆಜಮಾಡಿ ಹಾಗೂ ಸಾಸ್ತಾನ ಟೋಲ್‌ಗೇಟ್‌ಗಳಲ್ಲಿ ಟೋಲ್ ಸಂಗ್ರಹದಲ್ಲಿ ಈಗಿರುವ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಈ ಕುರಿತು ಇಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಶಾಸಕರು, ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯ ಸದಸ್ಯರು ಹಾಗೂ ಗುತ್ತಿಗೆ ಕಂಪೆನಿಯ ಅಧಿಕಾರಿಗಳ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

 ಆ.16ರಿಂದ ಹೆಜಮಾಡಿ ಹಾಗೂ ಸಾಸ್ತಾನ ಟೋಲ್‌ಗೇಟ್‌ಗಳಲ್ಲಿ ಯಾವುದೇ ಪೂರ್ವ ಸೂಚನೆ ನೀಡದೇ ಸ್ಥಳೀಯ ವಾಹನಗಳಿಗೂ (ಕೆಎ 20) ಟೋಲ್ ಸಂಗ್ರಹ ಆರಂಭಿಸಿದ ನವಯುಗ ಕಂಪೆನಿ ವಿರುದ್ಧ ಎರಡೂ ಕಡೆಗಳಲ್ಲಿ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ಹಿನ್ನೆಲೆ ಯಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಭೆಯನ್ನು ಕರೆಯಲಾಗಿತ್ತು.

ಉಡುಪಿ ಜಿಲ್ಲಾ ನೊಂದಣಿಯ ವಾಹನಗಳಿಗೆ ಈಗಿರುವಂತೆ ಯಾವುದೇ ಟೋಲ್ ಪಡೆಯದೇ ಇರುವ ಸ್ಥಿತಿ ಸೆಪ್ಟಂಬರ್ ಕೊನೆಯವರೆಗೆ ಮುಂದುವರಿ ಯಲಿದ್ದು, ಮುಂದಿನ ಕ್ರಮದ ಕುರಿತು ಅಕ್ಟೋಬರ್ ತಿಂಗಳಲ್ಲಿ ಹೋರಾಟ ಗಾರರು ಹಾಗೂ ಜನಪ್ರತಿನಿಧಿಗಳ ಇನ್ನೊಂದು ಸಭೆಯನ್ನು ಕರೆದು ನಿರ್ಧರಿಸಲು ಸಭೆ ತೀರ್ಮಾನಿಸಿತು ಎಂದು ಸಾಸ್ತಾನ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯ ಅಧ್ಯಕ್ಷ ಪ್ರತಾಪ್ ಶೆಟ್ಟಿ ಪತ್ರಿಕೆಗೆ ತಿಳಿಸಿದ್ದಾರೆ.

ಇಂದಿನ ಸಭೆಯಲ್ಲಿ ಶಾಸಕರಾದ ಕೆ.ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ವಿಧಾನ ಪರಿಷತ್‌ನಲ್ಲಿ ವಿಪಕ್ಷದ ನಾಯಕರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಭಾಗವಹಿಸಿದ್ದು, ಸ್ಥಳೀಯ ವಾಹನಗಳಿಂದ ಟೋಲ್ ಸಂಗ್ರಹಿಸುವ ಪ್ರಯತ್ನವನ್ನು ಖಂಡಿಸಿ, ಚತುಷ್ಪಥ ಕಾಮಗಾರಿಯನ್ನೇ ಇನ್ನೂ ಪೂರ್ಣ ಗೊಳಿಸದೇ ಹೆದ್ದಾರಿಯಲ್ಲಿ ಸಂಚಾರ ದು:ಸ್ವಪ್ನವಾಗುವಂತೆ ಮಾಡಿದ ಕಂಪೆನಿಯ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು ಎಂದರು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯಾವುದೇ ಅಧಿಕಾರಿ ಉಪಸ್ಥಿತರಿರಲಿಲ್ಲ. ಕಾಮಗಾರಿಯ ಗುತ್ತಿಗೆದಾರರಾದ ನವಯುಗ ಕಂಪೆನಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಜನಪ್ರತಿನಿಧಿ ಗಳು ಜಿಲ್ಲೆಯ ಜನರ ಪರವಾಗಿ ವಾದಿಸಿದರು ಎಂದು ಪ್ರತಾಪ್ ಶೆಟ್ಟಿ ನುಡಿದರು. ಮುಂದೆ ಅಕ್ಟೋರ್ ತಿಂಗಳ ಆರಂಭದಲ್ಲಿ ಎಲ್ಲರ ಉಪಸ್ಥಿತಿಯಲ್ಲಿ ನಡೆಯುವ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ನಿಧರಿರ್ಸಲಾಯಿತು ಎಂದವರು ತಿಳಿಸಿದರು.

ನವಯುಗ ಕಂಪೆನಿ ಸ್ಥಳೀಯ ವಾಹನಗಳಿಗೆ ವಿನಾಯಿತಿ ನೀಡದಿದ್ದರೆ ಪೋಲಿಸ್ ಅಲ್ಲ, ಮಿಲಿಟರಿ ಬಂದರೂ ಯಾವುದೇ ವಾಹನದಿಂದ ಒಂದು ರೂ. ಟೋಲ್ ಸಂಗ್ರಹಿಸಲು ಬಿಡುವುದಿಲ್ಲ. ಈ ಕುರಿತು ನಾಗರಿಕರು ಎರಡೂ ಕಡೆಗಳಲ್ಲಿ ನಡೆಸುತ್ತಿರುವ ಹೋರಾಟಕ್ಕೆ ನಮ್ಮೆಲ್ಲರ ಬೆಂಬಲವಿದೆ ಎಂದು ಶಾಸಕರೆಲ್ಲರೂ ಸ್ಪಷ್ಟವಾಗಿ ಕಂಪೆನಿಗೆ ತಿಳಿಸಿದರು ಎಂದೂ ಪ್ರತಾಪ್ ಶೆಟ್ಟಿ ಹೇಳಿದರು.

ಹೆಜಮಾಡಿ ಟೋಲ್‌ಗೇಟಿನಲ್ಲಿ ನವಯುಗ ಕಂಪನಿ ಸಿಬ್ಬಂದಿಗಳ ಮೇಲೆ ಪ್ರತಿದಿನ ಆರೋಪಗಳು ಕೇಳಿ ಬರುತ್ತಿವೆ. ತಾವು ವಹಿಸಿಕೊಂಡ ಕಾಮಗಾರಿ ಇನ್ನೂ ಪೂರ್ಣಗೊಳಿಸದೆ ಕೇವಲ ಟೋಲ್ ಹಣ ಪಡೆದು ಸಾರ್ವಜನಿಕರಿಂದ ಹಣ ಸಂಪಾದಿಸುತ್ತಿರುವ ಸಿಬ್ಬಂದಿಗಳ ವಿರುದ್ಧ ಶಾಸಕರು ಕೆಂಡಕಾರಿದರು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕುಂದಾಪುರ ಉಪವಿಭಾಗಾಧಿಕಾರಿ ಟಿ.ಭೂಬಾಲನ್ ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X