Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೃಷಿ ಕೇವಲ ಸಂಸ್ಕೃತಿ ಅಲ್ಲ; ಅದು...

ಕೃಷಿ ಕೇವಲ ಸಂಸ್ಕೃತಿ ಅಲ್ಲ; ಅದು ವ್ಯವಹಾರವೂ ಹೌದು: -ಡಾ.ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ18 Aug 2018 10:39 PM IST
share
ಕೃಷಿ ಕೇವಲ ಸಂಸ್ಕೃತಿ ಅಲ್ಲ; ಅದು ವ್ಯವಹಾರವೂ ಹೌದು: -ಡಾ.ಚಂದ್ರಶೇಖರ್

ನಿಟ್ಟೆ, ಆ.18: ಕೃಷಿ ಎಂಬುದು ದೇಶದ ಆರ್ಥಿಕತೆಯ ಪ್ರಮುಖ ಕ್ಷೇತ್ರಗಳಲ್ಲಿ ಒಂದು. ಭಾರತ ಈ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿಯನ್ನು ಸಾಧಿಸಿದೆ. ಈ ಪ್ರಗತಿಯ ಹೊರತಾಗಿಯೂ ಭಾರತ ಈ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆ ಹಾಗೂ ಸವಾಲು ಗಳನ್ನು ಎದುರಿಸುತ್ತಿದೆ. ಹೀಗಾಗಿ ಕೃಷಿ ಎಂಬುದು ಕೇವಲ ಸಂಸ್ಕೃತಿ ಅಲ್ಲ. ಅದೊಂದು ವ್ಯಾಪಾರವೂ ಆಗಿದೆ ಎಂದು ಜೈಪುರದ ರಾಷ್ಟ್ರೀಯ ಕೃಷಿ ಮಾರುಕಟ್ಟೆ ಸಂಸ್ಥೆ (ಎನ್‌ಐಎಎಂ) ಮಹಾ ನಿರ್ದೇಶಕ ಡಾ.ಪಿ.ಚಂದ್ರಶೇಖರ್ ಹೇಳಿದ್ದಾರೆ.

ನಿಟ್ಟೆಯ ಜಸ್ಟಿಸ್ ಕೆ.ಎಸ್.ಹೆಗ್ಡೆ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್, ಜೈಪುರದ ನೇಶನಲ್ ಇನ್‌ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಮಾರ್ಕೆಟಿಂಗ್‌ನ ಸಹಯೋಗದೊಂದಿಗೆ ಆಯೋಜಿಸಿದ ‘ನಿಟ್ಟೆ ಕೃಷಿಯೋದ್ಯಮಿಗಳ ಸಮಾವೇಶ -2018’ವನ್ನು ಜೆಕೆಎಸ್‌ಎಚ್‌ಐಎಂ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ದೇಶದಲ್ಲಿ ಹಲವು ಸಮಸ್ಯೆಗಳ ಮಧ್ಯೆಯೂ ಕೃಷಿ ಎಂಬುದು ಕೋಟ್ಯಾಂತರ ಮಂದಿಗೆ ಆಹಾರದ ಮೂಲವಾಗಿದೆ. ಇಂದು ಕೃಷಿಯೋದ್ಯಮ ಎಂಬುದು ಒಂದು ವೃತ್ತಿಯಾಗಿದ್ದು, ಜೀವನಕ್ರಮವಾಗಿಯೂ ಪ್ರಚಲಿತದಲ್ಲಿದೆ. ಸಂಸ್ಕರಣೆ ಹಾಗೂ ಮಾರ್ಕೆಟಿಂಗ್ ಎಂಬುದು ಕೃಷಿಯೋದ್ಯಮದ ಎರಡು ಮೂಲಸ್ತಂಭ ಗಳಾಗಿವೆ. ಈ ಪ್ರಕ್ರಿಯೆ ಪ್ರತಿ ಹಂತದಲ್ಲೂ ಅದು ವೌಲ್ಯವನ್ನು ಹೆಚ್ಚಿಸುತ್ತಿದೆ ಎಂದವರು ನುಡಿದರು.

ಯಶಸ್ಸಿಗೆ ಸೂತ್ರಗಳು: ಕೃಷಿಯಲ್ಲಿ ಯಶಸ್ಸಿಗೆ ಕೆಲವು ಸೂತ್ರಗಳಿವೆ. ಮೊದಲ ನೇಯದಾಗಿ ಕೃಷಿಯನ್ನು ರೈತನೊಬ್ಬನ ವೈಯಕ್ತಿಕ ಚಟುವಟಿಕೆ ಎಂದು ಪರಿಗಣಿಸದೇ ಅದನ್ನೊಂದು ಗುಂಪು ಆಧಾರಿತ ಚಟುವಟಿಕೆಯಾಗಿ ಪರಿಗಣಿ ಸಬೇಕಾಗಿದೆ. ಕೃಷಿಯನ್ನು ವೈಯಕ್ತಿಕವಾಗಿ ಪರಿಗಣಿಸಿದರೆ ಅದೊಂದು ಖಚಿತ ಗೆಲುವೇ ಸಿಗದ ವೃತ್ತಿಯಾಗಿದೆ ಎಂದು ಡಾ.ಪಿ.ಚಂದ್ರಶೇಖರ್ ಅಭಿಪ್ರಾಯ ಪಟ್ಟರು.

ಕೃಷಿ ಎಂಬುದು ಕೇವಲ ಸಂಸ್ಕೃತಿಯಲ್ಲ. ಅದೊಂದು ವ್ಯವಹಾರವೂ ಆಗಿದೆ. ಕೃಷಿಯಲ್ಲಿ ಸಂಸ್ಕರಣೆ ಹಾಗೂ ಮಾರ್ಕೆಟಿಂಗ್‌ನ್ನು ಮಾಹಿತಿ ತಂತ್ರಜ್ಞಾನ (ಐಟಿ) ವನ್ನು ಬಳಸಿ ಯಶಸ್ಸಿನತ್ತ ಒಯ್ಯಬೇಕಿದೆ. ಆದರೆ ದುರದೃಷ್ಟವಶಾತ್ ಪ್ರತಿವರ್ಷ ದೇಶದಲ್ಲಿ ಸರಾಸರಿ 2049 ಮಂದಿ ರೈತರು ಕೃಷಿ ಕ್ಷೇತ್ರಕ್ಕೆ ವಿದಾಯ ಹೇಳುತಿ ದ್ದಾರೆ. ಇದಕ್ಕೆ ಪ್ರಮುಖ ಕಾರಣ ಕೃಷಿ ಚಟುವಟಿಕೆ ಎಂಬುದು ನಷ್ಟದ ಬಾಬ್ತು ಆಗಿರುವುದಾಗಿದೆ ಎಂದವರು ನುಡಿದರು.

ಕೃಷಿಯೋದ್ಯಮ ಎಂಬುದು ರೈತನೊಬ್ಬ ಏನನ್ನು ಬೆಳೆದಿದ್ದಾನೆ ಎಂಬುದಲ್ಲ. ಮಾರುಕಟ್ಟೆ ಏನನ್ನು ಬಯಸುತ್ತಿದೆ ಎಂಬುದು. ಮಾರುಕಟ್ಟೆಗೆ ಏನು ಬೇಕು ಎಂಬುದನ್ನು ಅರಿತು ಅದನ್ನು ಬೆಳೆಯುವುದೇ ಕೃಷಿಯೋದ್ಯಮ ಎಂದು ಡಾ.ಚಂದ್ರಶೇಖರ್ ತಿಳಿಸಿದರು.

ಜೆಕೆಎಸ್‌ಎಚ್‌ಐಎಂನ ನಿರ್ದೇಶಕ ಡಾ.ಕೆ.ಶಂಕರನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ಗೋಲ್ಡ್ ಫಾರ್ಮ್‌ನ ಸಹ ಸ್ಥಾಪಕ ಡಾ.ಅಭಿಲಾಷ್ ತಿರುಪತಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕೃಷಿಯೋದ್ಯಮದಲ್ಲಿ ತನ್ನ ಅನುಭವವನ್ನು ಹಂಚಿಕೊಂಡರು.

ಸಂಸ್ಥೆಯ ಕಾರ್ಪೋರೇಟ್ ಪ್ರೋಗ್ರಾಮ್‌ನ ಡೀನ್ ಡಾ.ಎ.ಪಿ.ಆಚಾರ್ ಅತಿಥಿಗಳನ್ನು ಸ್ವಾಗತಿಸಿ, ಸಮಾವೇಶದ ಕುರಿತು ವಿವರಿಸಿದರು. ಡಾ.ಸುಧೀರ್‌ರಾಜ್ ಕೆ. ಕಾರ್ಯಕ್ರಮವನ್ನು ಸಂಯೋಜಿಸಿದರೆ, ಮೋನಿಷಾ ಮತ್ತು ಯಶಸ್ವಿನಿ ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X