Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್‌ನ 4 ಸೇನಾಧಿಕಾರಿಗಳ ವಿರುದ್ಧ...

ಮ್ಯಾನ್ಮಾರ್‌ನ 4 ಸೇನಾಧಿಕಾರಿಗಳ ವಿರುದ್ಧ ಅಮೆರಿಕ ದಿಗ್ಬಂಧನ: ರೊಹಿಂಗ್ಯಾ ಮುಸ್ಲಿಮರ ವಿರುದ್ಧದ ಹಿಂಸಾಚಾರಕ್ಕೆ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ18 Aug 2018 10:47 PM IST
share
ಮ್ಯಾನ್ಮಾರ್‌ನ 4 ಸೇನಾಧಿಕಾರಿಗಳ ವಿರುದ್ಧ ಅಮೆರಿಕ ದಿಗ್ಬಂಧನ: ರೊಹಿಂಗ್ಯಾ ಮುಸ್ಲಿಮರ ವಿರುದ್ಧದ ಹಿಂಸಾಚಾರಕ್ಕೆ ಶಿಕ್ಷೆ

ವಾಶಿಂಗ್ಟನ್, ಆ. 18: ಅಲ್ಪಸಂಖ್ಯಾತ ರೊಹಿಂಗ್ಯಾ ಮುಸ್ಲಿಮರಿಗೆ ಹಿಂಸೆ ನೀಡಿ ಮ್ಯಾನ್ಮಾರ್‌ನಿಂದ ಹೊರದಬ್ಬಿರುವುದಕ್ಕಾಗಿ ದೇಶದ ನಾಲ್ವರು ಸೇನಾಧಿಕಾರಿಗಳು ಮತ್ತು 2 ಸೇನಾ ಘಟಕಗಳ ವಿರುದ್ಧ ಅಮೆರಿಕ ಸರಕಾರ ಶುಕ್ರವಾರ ದಿಗ್ಬಂಧನಗಳನ್ನು ವಿಧಿಸಿದೆ.

ಈ ಸೇನಾಧಿಕಾರಿಗಳು ‘ಗಂಭೀರ ಮಾನವಹಕ್ಕುಗಳ ಉಲ್ಲಂಘನೆ’ ಮತ್ತು ‘ಜನಾಂಗೀಯ ನಿರ್ಮೂಲನೆ’ ಮುಂತಾದ ಗಂಭೀರ ಕೃತ್ಯಗಳಲ್ಲಿ ತೊಡಗಿದ್ದಾರೆ ಎಂದು ಅಮೆರಿಕ ಆರೋಪಿಸಿದೆ.

 ಸೇನಾ ಹಾಗೂ ಗಡಿ ಪಡೆ ಕಮಾಂಡರ್‌ಗಳಾದ ಆಂಗ್ ಕ್ಯಾವ್ ಝಾವ್, ಖಿನ್ ಮಾಂಗ್ ಸೋ, ಖಿನ್ ಹಲೈಂಗ್ ಮತ್ತು ತುರ ಸಾನ್ ಲ್ವಿನ್ ಮ್ಯಾನ್ಮಾರ್‌ನ ರಖೈನ್ ರಾಜ್ಯದಲ್ಲಿರುವ ಮುಸ್ಲಿಮ್ ರೊಹಿಂಗ್ಯಾ ಅಲ್ಪಸಂಖ್ಯಾತರು ಹಾಗೂ ಕಚಿನ್ ಮತ್ತು ಶಾನ್ ರಾಜ್ಯಗಳಲ್ಲಿರುವ ಅಲ್ಪಸಂಖ್ಯಾತರ ವಿರುದ್ಧ ಹಿಂಸಾತ್ಮಕ ಸೇನಾ ಕಾರ್ಯಾಚರಣೆ ನಡೆಸಿದ್ದಾರೆ ಎಂಬುದಾಗಿ ಅಮೆರಿಕ ಆರೋಪಿಸಿದೆ.

ಖಜಾನೆ ಇಲಾಖೆಯು ಈ ಸೇನಾಧಿಕಾರಿಗಳು ಮತ್ತು ಸೇನಾ ತುಕಡಿಗಳ ವಿರುದ್ಧ ದಿಗ್ಬಂಧನಗಳನ್ನು ವಿಧಿಸಿದೆ.

ಈ ಸೇನಾಧಿಕಾರಿಗಳ ವಿರುದ್ಧದ ದಿಗ್ಬಂಧನಗಳು, ಜನಾಂಗೀಯ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧದ ದಾಳಿಗಳನ್ನು ನಿಲ್ಲಿಸುವಂತೆ ಹಾಗೂ ಅವರ ಹಕ್ಕುಗಳನ್ನು ಗೌರವಿಸುವಂತೆ ಬರ್ಮಾದ ಭದ್ರತಾ ಪಡೆಗಳಿಗೆ ನೀಡಿದ ಎಚ್ಚರಿಕೆಯಾಗಿದೆ ಎಂದು ಖಜಾನೆ ಇಲಾಖೆ ಹೇಳಿದೆ.

ಕಳೆದ ವರ್ಷದ ಆಗಸ್ಟ್‌ನಲ್ಲಿ ಮ್ಯಾನ್ಮಾರ್‌ನಲ್ಲಿ ರೊಹಿಂಗ್ಯಾ ವಿರೋಧಿ ಹಿಂಸಾಚಾರ ಭುಗಿಲೆದ್ದ ಬಳಿಕ, ಸುಮಾರು 7 ಲಕ್ಷ ರೊಹಿಂಗ್ಯಾ ಮುಸ್ಲಿಮರು ನೆರೆಯ ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ.

ಅಲ್ಪಸಂಖ್ಯಾತರ ವಿರುದ್ಧ ಹಿಂಸಾತ್ಮಕ ಸೇನಾ ಕಾರ್ಯಾಚರಣೆ

‘‘ಬರ್ಮಾದ ಭದ್ರತಾ ಪಡೆಗಳು ದೇಶಾದ್ಯಂತ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಹಿಂಸಾತ್ಮಕ ಸೇನಾ ಅಭಿಯಾನಗಳಲ್ಲಿ ನಿರತವಾಗಿವೆ. ಅವುಗಳು ಜನಾಂಗೀಯ ನಿರ್ಮೂಲನೆ, ಹತ್ಯಾಕಾಂಡ, ಲೈಂಗಿಕ ಆಕ್ರಮಣ, ನ್ಯಾಯಾಂಗೇತರ ಕೊಲೆಗಳು ಹಾಗೂ ಇತರ ಗಂಭೀರ ಮಾನವಹಕ್ಕು ಉಲ್ಲಂಘನೆಗಳಲ್ಲಿ ತೊಡಗಿವೆ’’ ಎಂದು ಅಮೆರಿಕದ ಖಜಾನೆ ಇಲಾಖೆಯಲ್ಲಿ ಭಯೋತ್ಪಾದನೆ ಮತ್ತು ಆರ್ಥಿಕ ಗುಪ್ತಚರ ವಿಭಾಗದ ಅಧೀನ ಕಾರ್ಯದರ್ಶಿ ಸಿಗಲ್ ಮಂಡೇಲ್ಕರ್ ಹೇಳಿದ್ದಾರೆ.

ಆಕ್ರಮಣಕಾರರ ವಿದೇಶಿ ಆಸ್ತಿಗಳ ಮುಟ್ಟುಗೋಲು

 ಗ್ಲೋಬಲ್ ಮ್ಯಾಗ್ನಿಟ್‌ಸ್ಕಿ ಹ್ಯೂಮನ್ ರೈಟ್ಸ್ ಅಕೌಂಟಬಿಲಿಟಿ ಕಾಯ್ಕೆಯಡಿಯಲ್ಲಿ ಮ್ಯಾನ್ಮಾರ್ ಸೇನಾಧಿಕಾರಿಗಳ ವಿರುದ್ಧ ಆರ್ಥಿಕ ದಿಗ್ಬಂಧನಗಳನ್ನು ವಿಧಿಸಲಾಗಿದೆ.

 ರಶ್ಯವನ್ನು ಗುರಿಯಾಗಿಸಿ ಮೂಲತಃ ಈ ಕಾಯ್ದೆಯನ್ನು ರೂಪಿಸಲಾಗಿತ್ತು. ಈಗ ಅದನ್ನು ಜಗತ್ತಿನಾದ್ಯಂತದ ಮಾನವಹಕ್ಕು ಉಲ್ಲಂಘನೆಗೆ ಶಿಕ್ಷೆ ವಿಧಿಸಲು ಬಳಸಲಾಗುತ್ತಿದೆ.

ಇದರ ಪ್ರಕಾರ, ದಿಗ್ಬಂಧನಗಳಿಗೆ ಒಳಗಾದವರ ಹೆಸರುಗಳನ್ನು ಜಾಗತಿಕ ಆರ್ಥಿಕ ಮತ್ತು ವಾಣಿಜ್ಯ ಜಾಲಗಳಿಂದ ತೆಗೆದುಹಾಕಲಾಗುವುದು ಹಾಗೂ ಅವರು ವಿದೇಶಗಳಲ್ಲಿ ಹೊಂದಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X