Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೂ ಕೇರಳ...

ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೂ ಕೇರಳ ನೆರೆಗೂ ನಂಟು ಕಲ್ಪಿಸಿದ ಆರೆಸ್ಸೆಸ್‌ನ ಎಸ್.ಗುರುಮೂರ್ತಿ!

ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗಳ ಸುರಿಮಳೆ

ವಾರ್ತಾಭಾರತಿವಾರ್ತಾಭಾರತಿ18 Aug 2018 10:56 PM IST
share
ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೂ ಕೇರಳ ನೆರೆಗೂ ನಂಟು ಕಲ್ಪಿಸಿದ ಆರೆಸ್ಸೆಸ್‌ನ ಎಸ್.ಗುರುಮೂರ್ತಿ!

ಹೊಸದಿಲ್ಲಿ,ಆ.18: ಕೇರಳದಲ್ಲಿ ಪ್ರವಾಹಗಳಿಗೆ ಕಾರಣವೇನು? ಟ್ವಿಟರ್‌ನಲ್ಲಿ ಕೆಲವರು ಹೇಳಿರುವಂತೆ ಮಹಿಳೆಯರು ಶಬರಿಮಲೆ ದೇವಸ್ಥಾನವನ್ನು ಪ್ರವೇಶಿಸಲು ಬಯಸಿದ್ದಾರೆ ಮತ್ತು ಇದು ಅಯ್ಯಪ್ಪ ಸ್ವಾಮಿಯನ್ನು ಎಷ್ಟೊಂದು ಕುಪಿತಗೊಳಿಸಿದೆಯೆಂದರೆ ಆತ ಬೃಹತ್ ವಿನಾಶವನ್ನುಂಟು ಮಾಡಿದ್ದಾನೆ!

ಈ ತಿಂಗಳ ಆರಂಭದಲ್ಲಿ ಶಬರಿಮಲೆ ದೇವಸ್ಥಾನಕ್ಕೆ ಋತುಚಕ್ರವನ್ನು ಹೊಂದಿರುವ ಮಹಿಳೆಯರ ಪ್ರವೇಶ ನಿಷೇಧವನ್ನು ಪ್ರಶ್ನಿಸಿರುವ ಅರ್ಜಿಗಳ ಕುರಿತಂತೆ ತನ್ನ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯವು ಕಾದಿರಿಸಿತ್ತು. ಕೇರಳದಲ್ಲಿ ಈಗ ಪ್ರವಾಹಗಳು ಉಂಟಾಗಲು ಇದು ಕಾರಣವೆನ್ನುವುದು ಈ ಟ್ವಟರಿಗರ ವಾದ.

 ‘ಪ್ರಕರಣ ಮತ್ತು ಶಬರಿಮಲೆಯಲ್ಲಿ ಈಗ ಸಂಭವಿಸುತ್ತಿರುವುದರ ನಡುವೆ ಏನಾದರೂ ಸಂಬಂಧವಿದೆಯೇ ಎನ್ನುವುದನ್ನು ನೋಡಲು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು ಬಯಸಬಹುದು. ಇಂತಹ ಸಂಬಂಧದ ಅವಕಾಶ ಮಿಲಿಯನ್‌ನಲ್ಲಿ ಕೇವಲ ಒಂದರಷ್ಟಿದ್ದರೂ ಪ್ರಕರಣದಲ್ಲಿ ಅಯ್ಯಪ್ಪ ಸ್ವಾಮಿಯ ವಿರುದ್ಧ ತೀರ್ಪನ್ನು ಜನರು ಬಯಸುವುದಿಲ್ಲ ’ ಎಂದು ಆರೆಸ್ಸೆಸ್ ಸಿದ್ಧಾಂತಿ ಮತ್ತು ಆರ್‌ಬಿಐ ಆಡಳಿತ ಮಂಡಳಿಯ ಸದಸ್ಯ ಎಸ್.ಗುರುಮೂರ್ತಿ ಶನಿವಾರ ಟ್ವೀಟಿಸಿದ್ದಾರೆ. ಇದರ ಬೆನ್ನಿಗೇ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ.

‘ಇದನ್ನು ಯಾವುದೇ ಧಾರ್ಮಿಕ ವಿಷಯದೊಂದಿಗೆ ತಳುಕು ಹಾಕಬೇಡಿ. ಇದು ಒಳ್ಳೆಯದಲ್ಲ. ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ. ವಿಪತ್ತಿಗೆ ಸಿಲುಕಿರುವ ಜನರಿಗೆ ನೆರವಾಗುವುದು ಈಗಿನ ಅಗತ್ಯವಾಗಿದೆ. ಯಾವುದಾದರೂ ರೀತಿಯಲ್ಲಿ ಸಹಾಯ ಮಾಡುವುದು ನಿಮಗೆ ಸಾಧ್ಯವಿದ್ದರೆ ಮೊದಲು ಆ ಕೆಲಸವನ್ನು ಮಾಡಿ’ ಎಂದು ಮಣಿಕಂಠನ್ ಸಲಹೆ ನೀಡಿದ್ದರೆ, ‘ಇಂತಹ ಸಮಯದಲ್ಲಿ ಈ ಬಗ್ಗೆ ಮಾತನಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಜನರು ಸಾಯುತ್ತಿದ್ದಾರೆ,ನಿರ್ವಸಿತರಾಗಿದ್ದಾರೆ ಮತ್ತು ನೀವು ಭಾರತಿರಾಜಾ ಚಿತ್ರಗಳ ಗ್ರಾಮಸ್ಥನಂತೆ ಮಾತನಾಡುತ್ತಿದ್ದೀರಿ ’ ಎಂದು ಸುಧೀರ್ ಶ್ರೀನಾಥ್ ಕುಟುಕಿದ್ದಾರೆ.

 ಇಂತಹ ಟೀಕೆಗಳು ಪ್ರವಾಹದೋಪಾದಿಯಲ್ಲಿ ಹರಿದಾಡುತ್ತಿವೆ. ಆದರೆ ಗುರುಮೂರ್ತಿ ತನ್ನದೇ ರೀತಿಯಲ್ಲಿ ನೆಟ್ಟಿಗರನ್ನು ಸಮಾಧಾನಿಸಲು ವಿಫಲ ಪ್ರಯತ್ನವನ್ನು ನಡೆಸಿದ್ದಾರೆ.

‘ಅಯ್ಯಪ್ಪ ಸ್ವಾಮಿಗೂ ಪ್ರವಾಹಕ್ಕೂ ಸಂಬಂಧದ ಅವಕಾಶ ಮಿಲಿಯನ್‌ನಲ್ಲಿ ಕೇವಲ ಒಂದರಷ್ಟಿದ್ದರೂ ಪ್ರಕರಣದಲ್ಲಿ ಅಯ್ಯಪ್ಪ ಸ್ವಾಮಿಯ ವಿರುದ್ಧ ತೀರ್ಪನ್ನು ಜನರು ಬಯಸುವುದಿಲ್ಲ ಎಂದಷ್ಟೇ ನಾನು ಹೇಳಿದ್ದೇನೆ. ಇದು ಜನರ ನಂಬಿಕೆಯ ಕುರಿತಾಗಿದೆ. ನಾನು ಅಯ್ಯಪ್ಪ ಸ್ವಾಮಿಯ ಭಕ್ತನಲ್ಲ,ನಾನು ಶಬರಿಮಲೆಗೆ ಹೋಗುವುದಿಲ್ಲ ಎನ್ನುವುದು ನಿಮಗೆ ಗೊತ್ತಿರಲಿ ’ಎಂದು ಅವರು ಟ್ವೀಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X