Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ವೇಗಿ...

ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ವೇಗಿ ಮಿಚೆಲ್ ಜಾನ್ಸನ್

ವಾರ್ತಾಭಾರತಿವಾರ್ತಾಭಾರತಿ19 Aug 2018 8:14 PM IST
share
ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ವೇಗಿ ಮಿಚೆಲ್ ಜಾನ್ಸನ್

ಸಿಡ್ನಿ, ಆ.19: ದೈಹಿಕ ಕ್ಷಮತೆ ಕುಂದುತ್ತಿರುವ ಹಿನ್ನೆಲೆಯಲ್ಲಿ ತಾನು ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತನಾಗುವುದಾಗಿ ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಜಾನ್ಸನ್ ರವಿವಾರ ಘೋಷಿಸಿದ್ದಾರೆ. ಮೂರು ವರ್ಷದ ಹಿಂದೆ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದ ಜಾನ್ಸನ್ ಭಾರತದ ಐಪಿಎಲ್ ಹಾಗೂ ಇತರ ಸ್ಥಳೀಯ ಟಿ-20 ಲೀಗ್‌ನಲ್ಲಿ ಆಟ ಮುಂದುವರಿಸಿದ್ದರು. ಕಳೆದ ತಿಂಗಳು ಬಿಗ್‌ಬ್ಯಾಷ್ ಲೀಗ್‌ನಲ್ಲಿ ತಾನು ಪ್ರತಿನಿಧಿಸುತ್ತಿದ್ದ ಪರ್ತ್ ಸ್ಕಾರ್ಚರ್ಸ್ ತಂಡದಿಂದ ಹೊರಗುಳಿದಿದ್ದರು.

ಮುಂದಿನ ವರ್ಷದ ಮಧ್ಯಭಾಗದವರೆಗೆ ವಿಶ್ವದ ಹಲವೆಡೆ ಟಿ-20 ಟೂರ್ನಿಯಲ್ಲಿ ಆಟ ಮುಂದುವರಿಸುವ ನಿರೀಕ್ಷೆಯಲ್ಲಿದ್ದೆ. ಆದರೆ ನನ್ನ ದೇಹ ಇದಕ್ಕೆ ಒಪ್ಪುತ್ತಿಲ್ಲ. ಈಗ ನನ್ನ ಅಂತಿಮ ಎಸೆತ ಬೌಲ್ ಮಾಡಿದ್ದೇನೆ. ಇದೀಗ ಓವರ್ ಮುಗಿದಿದೆ. ನನ್ನ ಅಂತಿಮ ವಿಕೆಟ್ ಪಡೆದಿದ್ದೇನೆ. ಈ ದಿನ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು 36ರ ಹರೆಯದ ಎಡಗೈ ವೇಗಿ ‘ಪರ್ತ್ ನವ್’ ನ್ಯೂಸ್ ವೆಬ್‌ಸೈಟ್‌ನಲ್ಲಿ ಘೋಷಿಸಿದ್ದಾರೆ. ಕಳೆದ ವರ್ಷ ಐಪಿಎಲ್‌ನಲ್ಲಿ ಆಡುತ್ತಿದ್ದಾಗ ಬೆನ್ನು ನೋವು ಆರಂಭವಾಗಿದೆ. ಬಹುಷಃ ನಿವೃತ್ತಿ ಘೋಷಿಸುವ ಸಂಕೇತ ಇದಾಗಿರಬಹುದು ಎಂದು ಆಗಲೇ ನನಗನಿಸಿತ್ತು. ನೀವು ಆಟದಲ್ಲಿ ಶೇ.100ರಷ್ಟು ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ಅಸಾಧ್ಯ ಎಂದಾದರೆ ಆಗ ತಂಡಕ್ಕೆ ನಿಮ್ಮಿಂದ ಉತ್ತಮ ಕೊಡುಗೆ ನೀಡಲು ಸಾಧ್ಯವಾಗದು. ಈ ಕಾರಣದಿಂದ ಜೀವನದಲ್ಲಿ ಮತ್ತೊಂದು ಅವಧಿಯನ್ನು ಆರಂಭಿಸಲು ನಿರ್ಧರಿಸಿದ್ದೇನೆ. ಭವಿಷ್ಯದಲ್ಲಿ ಸವಾಲಿನ ಕಾರ್ಯಗಳಾದ ಕೋಚ್ ಅಥವಾ ಮೆಂಟರ್ ಆಗಿ ಮುಂದುವರಿಯಲು ಬಯಸಿರುವುದಾಗಿ ಜಾನ್ಸನ್ ತಿಳಿಸಿದ್ದಾರೆ.

►► ಸಾಧನೆ

► ಭಯಾನಕ ಎಡಗೈ ವೇಗಿಯಾಗಿದ್ದ ಜಾನ್ಸನ್ 2007ರಲ್ಲಿ ಆಸ್ಟ್ರೇಲಿಯಾದ ಟೆಸ್ಟ್ ತಂಡಕ್ಕೆ ಸೇರ್ಪಡೆಯಾಗಿದ್ದು 2008ರಲ್ಲಿ ದಕ್ಷಿಣ ಆಫ್ರಿಕಾದ ಎದುರು 61ಕ್ಕೆ 8 ವಿಕೆಟ್ ಉರುಳಿಸಿದ್ದು ಟೆಸ್ಟ್‌ನಲ್ಲಿ ಅವರ ಅತ್ಯುತ್ತಮ ಸಾಧನೆಯಾಗಿದೆ.

► 73 ಟೆಸ್ಟ್ ಪಂದ್ಯಗಳಲ್ಲಿ 313 ವಿಕೆಟ್ ಉರುಳಿಸಿದ್ದ ಜಾನ್ಸನ್ 2015ರ ನವೆಂಬರ್‌ನಲ್ಲಿ ಪರ್ತ್‌ನಲ್ಲಿ ನ್ಯೂಝಿಲ್ಯಾಂಡ್ ಎದುರಿಗಿನ ಟೆಸ್ಟ್ ಪಂದ್ಯದ ಬಳಿಕ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

► 153 ಏಕದಿನ ಪಂದ್ಯಗಳಲ್ಲಿ 239 ವಿಕೆಟ್

► 30 ಟಿ-20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 38 ವಿಕೆಟ್ .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X