Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋವಾಕ್ಕೂ ಕೇರಳದ ಸ್ಥಿತಿ ಬರಬಹುದು:...

ಗೋವಾಕ್ಕೂ ಕೇರಳದ ಸ್ಥಿತಿ ಬರಬಹುದು: ಪರಿಸರ ತಜ್ಞ ಮಾಧವ ಗಾಡ್ಗೀಳ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ19 Aug 2018 8:24 PM IST
share
ಗೋವಾಕ್ಕೂ ಕೇರಳದ ಸ್ಥಿತಿ ಬರಬಹುದು: ಪರಿಸರ ತಜ್ಞ ಮಾಧವ ಗಾಡ್ಗೀಳ್ ಎಚ್ಚರಿಕೆ

ಪಣಜಿ,ಆ.19: ಗೋವಾ ಪರಿಸರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿದ್ದರೆ ಅದೂ ಕೂಡ ನೆರೆಪೀಡಿತ ಕೇರಳದ ಸ್ಥಿತಿಯನ್ನೇ ಎದುರಿಸಬೇಕಾಗಬಹುದು ಎಂದು ಖ್ಯಾತ ಪರಿಸರ ತಜ್ಞ ಮಾಧವ ಗಾಡ್ಗೀಳ್ ಅವರು ಎಚ್ಚರಿಕೆ ನೀಡಿದ್ದಾರೆ. ಇತರ ರಾಜ್ಯಗಳಂತೆ ಗೋವಾದಲ್ಲಿಯೂ ಅಕ್ರಮ ಗಣಿಗಾರಿಕೆಯಂತಹ ಲಾಭಬಡುಕತನದ ಚಟುವಟಿಕೆಗಳು ಹೆಚ್ಚುತ್ತಿವೆ.

ವ್ಯಾಪಕ ಚರ್ಚೆಗೀಡಾಗಿರುವ ಪಶ್ಚಿಮ ಘಟ್ಟಗಳ ಕುರಿತು ಅಧ್ಯಯನ ವರದಿಯನ್ನು ಗಾಡ್ಗೀಳ್ ನೇತೃತ್ವದ ಸಮಿತಿಯು ಕೆಲವು ವರ್ಷಗಳ ಹಿಂದೆ ಪ್ರಕಟಿಸಿತ್ತು.

ಕೇರಳದಲ್ಲಿನ ಭೀಕರ ಪ್ರವಾಹ ಸ್ಥಿತಿಗೆ ಪ್ರತಿಕ್ರಿಯಿಸಿದ ಗಾಡ್ಗೀಳ್,ಪಶ್ಚಿಮ ಘಟ್ಟಗಳಲ್ಲಿ ಪರಿಸರಕ್ಕೆ ಸಂಬಂಧಿಸಿದ ಎಲ್ಲ ಬಗೆಯ ಸಮಸ್ಯೆಗಳು ಪ್ರಕಟಗೊಳ್ಳತೊಡಗಿವೆ. ಕೇರಳದಲ್ಲಿರುವಂತೆ ಪಶ್ಚಿಮ ಘಟ್ಟಗಳು ಗೋವಾದಲ್ಲಿಲ್ಲ,ನಿಜ. ಆದರೆ ಗೋವಾ ಕೂಡ ಎಲ್ಲ ಬಗೆಯ ಸಮಸ್ಯೆಗಳನ್ನು ಅನುಭವಿಸಲಿದೆ ಎನ್ನುವುದು ತನಗೆ ಖಚಿತವಿದೆ ಎಂದರು.

ಪರಿಸರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರಲು ಅತಿಯಾದ ಲಾಭದ ಆಸೆಯೇ ಕಾರಣವಾಗಿದೆ ಎಂದ ಅವರು,ಇದು ಗೋವಾದಲ್ಲಿಯೂ ಕಂಡು ಬರುತ್ತಿದೆ. ಅಕ್ರಮ ಗಣಿಗಾರಿಕೆಯಿಂದ 35,000 ಕೋ.ರೂ.ಗಳ ಅಕ್ರಮ ಲಾಭವನ್ನು ಕೇಂದ್ರ ಸರಕಾರವು ರಚಿಸಿದ್ದ ನ್ಯಾ.ಎಂ.ಬಿ.ಶಾ ಆಯೋಗವು ಅಂದಾಜಿಸಿದೆ ಎಂದರು.

ಭಾರೀ ಲಾಭದ ದುರಾಸೆಗೆ ಕಡಿವಾಣ ಬಿದ್ದಿಲ್ಲ ಮತ್ತು ಇದು ಸಮಾಜದಲ್ಲಿಯ ಆರ್ಥಿಕ ಅಸಮಾನತೆಯನ್ನು ಇನ್ನಷ್ಟು ಹದಗೆಡಿಸಿದೆ ಎಂದ ಅವರು,ಇಂತಹ ಮಾರ್ಗಗಳ ಮೂಲಕ ದುಡ್ಡು ಮಾಡುತ್ತಿರುವವರು ಈಗ ಇಂತಹ ಅಕ್ರಮ ಚಟುವಟಿಕೆಗಳಿಗೆ ಸರಕಾರದ ಅನುಮತಿ ಪಡೆದುಕೊಳ್ಳುವಲ್ಲಿ ಇನ್ನಷ್ಟು ಪ್ರಭಾವಿಗಳಾಗಿದ್ದಾರೆ . ಪರಿಸರ ನಿಯಮಗಳನ್ನು ಜಾರಿಗೊಳಿಸುವಲ್ಲಿ ಸರಕಾರಗಳು ಉದಾಸೀನ ತಳೆದಿವೆ ಎಂದರು.ವಾಸ್ತವದಲ್ಲಿ ಕೇಂದ್ರ ಸರಕಾರವೇ ರಾಷ್ಟ್ರಿಯ ಹಸಿರು ನ್ಯಾಯಾಧಿಕರಣವು ತನ್ನ ಕೆಲಸವನ್ನು ಸರಿಯಾಗಿ ನಿರ್ವಹಿಸದಂತೆ ಮಾಡುತ್ತಿದೆ ಎಂದು ಅವರು ಆರೋಪಿಸಿದರು.ಈ ಹಿಂದೆ ಕಬ್ಬಿಣ ಅದಿರು ಗಣಿಗಾರಿಕೆ ಕಂಪನಿಗಳು ಒದಗಿಸಿದ್ದ ಮಾಹಿತಿಗಳು ಮತ್ತು ಅವುಗಳ ಪರಿಸರ ಪರಿಣಾಮ ವೌಲ್ಯಮಾಪನ ವರದಿ(ಇಐಎ)ಗಳ ಆಧಾರದಲ್ಲಿ ಗೋವಾದ ಪರಿಸರದ ಕುರಿತು ವ್ಯಾಪಕ ಅಧ್ಯಯನ ನಡೆಸಿದ್ದ ಗಾಡ್ಗೀಳ್,ಗಣಿಗಾರಿಕೆ ಕಂಪನಿಗಳು ತಮ್ಮ ಇಐಎ ವರದಿಗಳಲ್ಲಿ ಸುಳ್ಳು ಮಾಹಿತಿಗಳನ್ನು ನೀಡಿವೆ ಎಂದು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X