Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರಳು ಸಮಸ್ಯೆ ಪರಿಹಾರಕ್ಕೆ...

ಮರಳು ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತದಿಂದ ಕ್ರಮ: ಭೋಜೆಗೌಡ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ19 Aug 2018 8:54 PM IST
share
ಮರಳು ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತದಿಂದ ಕ್ರಮ: ಭೋಜೆಗೌಡ ಆಗ್ರಹ

ಕುಂದಾಪುರ, ಆ.19: ಉಡುಪಿ ಜಿಲ್ಲೆಯ ಪ್ರಮುಖ ಸಮಸ್ಯೆಯಾಗಿರುವ ಮರಳುಗಾರಿಕೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೆಗೌಡ ಆಗ್ರಹಿಸಿದ್ದಾರೆ.

ಕುಂದಾಪುರ ಗುಡ್ಡಟ್ಟು ಶ್ರೀವಿನಾಯಕ ದೇವಸ್ಥಾನಕ್ಕೆ ರವಿವಾರ ಕುಟುಂಬ ದೊಂದಿಗೆ ಭೇಟಿ ನೀಡಿ ದೇವರಿಗೆ ಸೇವೆ ಸಲ್ಲಿಸಿದ ಬಳಿಕ ಅವರು ಮಾಧ್ಯಮದವ ರೊಂದಿಗೆ ಮಾತನಾಡುತಿದ್ದರು. ಅವೈಜ್ಞಾನಿಕ ಮರಳು ನೀತಿಯಿಂದ ಜಿಲ್ಲೆಯ ಸಾಮಾನ್ಯ ಜನರ ಬದುಕು ದುಸ್ತರವಾಗಿದೆ. ಜಿಲ್ಲಾಧಿಕಾರಿಗಳು ಕೂಡಲೆ ಸಂಬಂಧಪಟ್ಟ ಇಲಾಖಾ ಅಧಿ ಕಾರಿಗಳ, ಮರಳು ಗುತ್ತಿಗೆದಾರರ ಹಾಗೂ ಜನಪ್ರತಿನಿಧಿಗಳ ಸಭೆ ಕರೆದು ಮರಳುಗಾರಿಕೆಯ ಕುರಿತು ಸಮಗ್ರ ಚರ್ಚೆ ನಡೆಸಬೇಕು ಎಂದರು.

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಸಂಬಂಧ ರೂಪಿಸಿರುವ ಮಾನದಂಡ ಅವೈಜ್ಞಾನಿಕ ಎಂಬುದನ್ನು ಇತ್ತೀಚೆಗೆ ಶಿಕ್ಷಣ ಸಚಿವರೊಂದಿಗೆ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಲಾಗಿದೆ. ಎ, ಬಿ, ಸಿ ಎಂಬ ವಲಯವಾರು ವಿಂಗಡನೆ ಯಲ್ಲಿ ಸರಿಯಾದ ಸ್ಪಷ್ಟತೆ ಇಲ್ಲ. ಅಧಿಕಾರಿಗಳ ಏಕಪಕ್ಷೀಯ ತೀರ್ಮಾನದಿಂದ ಗೊಂದಲಗಳು ಉಂಟಾಗುತ್ತಿದೆ. ಸಮಸ್ಯೆಯ ಪರಿಹಾರಕ್ಕೆ ಸಭೆ ಕರೆದು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಅನುದಾನಿತ ಐಟಿಐ ನೌಕರರ ಸಮಸ್ಯೆಯ ಪರಿಹಾರಕ್ಕೆ ಮುಖ್ಯಮಂತ್ರಿ ಗಳೊಂದಿಗೆ ಹಾಗೂ ಸಂಬಂಧಿತ ಇಲಾಖೆಯ ಸಚಿವರೊಂದಿಗೆ ಚರ್ಚಿಸ ಲಾಗುವುದು. ರಾಜ್ಯದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅರ್ಹ ಹಿರಿಯ ಉಪನ್ಯಾಸಕರಿಗೆ ಪದೋನ್ನತಿ ನೀಡುವ ಮೂಲಕ ಪೂರ್ಣಕಾಲಿಕ ಪ್ರಾಂಶುಪಾಲರ ಖಾಲಿ ಹುದ್ದೆ ತುಂಬಲು ಕ್ರಮ ಕೈಗೊಳ್ಳಬೇಕು. ಅಗತ್ಯ ಇದ್ದಲ್ಲಿ ನೇರ ನೇಮಕಾತಿಯ ಮೂಲಕವೂ ಸಮಸ್ಯೆಯ ಪರಿಹಾರ ಮಾಡಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಎಸ್.ಎಲ್.ಧರ್ಮೇಗೌಡ, ಅಚಲ ಭೋಜೇ ಗೌಡ, ನಿತೇಶ್ ಭೋಜೇಗೌಡ, ನಿರೀಕ್ಷಾ ಭೋಜೇಗೌಡ, ಜೆಡಿಎಸ್ ಪಕ್ಷದ ಪ್ರಮುಖರಾದ ರವಿ ಶೆಟ್ಟಿ ಬೈಂದೂರು, ರಂಜಿತ್ ಕುಮಾರ ಶೆಟ್ಟಿ, ಎನ್. ಮಂಜಯ್ಯ ಶೆಟ್ಟಿ ಸಬ್ಲಾಡಿ ಮೊದಲಾದವರು ಹಾಜರಿದ್ದರು.

ಮಲೆನಾಡು, ಕರಾವಳಿ ಹಾಗೂ ಕೊಡುಗು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದಾಗಿ ಗಂಭೀರ ಸ್ವರೂಪದ ಹಾನಿಯುಂಟಾಗಿದೆ. ಜೀವ ಹಾನಿ, ಬೆಳೆ ಹಾನಿ, ಕಟ್ಟಡ ಹಾನಿ ಸೇರಿದಂತೆ ಮೂಲಭೂತ ವ್ಯವಸ್ಥೆಗಳೇ ನಾಶವಾಗಿದೆ. ಅನೂಕೂಲಕರ ವಾದ ವಾತಾವರಣ ಇಲ್ಲದ ಕಾರಣ ಮುಖ್ಯಮಂತ್ರಿಗಳಿಗೆ ಈ ಎಲ್ಲ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ಸಾಧ್ಯವಾಗಿಲ್ಲ. ಈ ಭಾಗದ ಪರಿಸ್ಥಿತಿಯನ್ನು ಅರಿತುಕೊಳ್ಳಲು ಸ್ವತ: ಮುಖ್ಯಮಂತ್ರಿಗಳೆ ಜಿಲ್ಲಾಧಿಕಾರಿಗಳು, ಎಸ್ಪಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದಾರೆ. ಪರಿಹಾರದ ಕಾರ್ಯಕ್ರಮ ಕೈಗೊಳ್ಳಲು ಯಾವುದೆ ಹಣಕಾಸಿನ ಅಡಚಣೆ ಇಲ್ಲ. ಅತಿವೃಷ್ಟಿಯಿಂದಾದ ಹಾನಿಗೆ ನೀಡುವ ಪರಿಹಾರವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್.ಎಲ್.ಭೋಜೆಗೌಡ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X