Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಸಿಸ್ ಬೆಂಬಲಿಗನೆಂಬ ಶಂಕೆ: ಕಾಶ್ಮೀರದ...

ಐಸಿಸ್ ಬೆಂಬಲಿಗನೆಂಬ ಶಂಕೆ: ಕಾಶ್ಮೀರದ ಇಂಜಿನಿಯರ್ ಯುಎಇಯಿಂದ ಗಡೀಪಾರು

ವಾರ್ತಾಭಾರತಿವಾರ್ತಾಭಾರತಿ19 Aug 2018 11:07 PM IST
share
ಐಸಿಸ್ ಬೆಂಬಲಿಗನೆಂಬ ಶಂಕೆ: ಕಾಶ್ಮೀರದ ಇಂಜಿನಿಯರ್ ಯುಎಇಯಿಂದ ಗಡೀಪಾರು

ಶ್ರೀನಗರ, ಆ.19: ನಿಷೇಧಿತ ಐಸಿಸ್ ಸಂಘಟನೆಯ ಪರ ಸಹಾನುಭೂತಿ ಹೊಂದಿರುವ ಶಂಕೆಯಲ್ಲಿ ಕಾಶ್ಮೀರದ ವ್ಯಕ್ತಿಯೊಬ್ಬನನ್ನು ಇತ್ತೀಚೆಗೆ ಯುಎಇಯಿಂದ ಗಡೀಪಾರು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರದ ಹೊರವಲಯದ ನಿವಾಸಿ ಇರ್ಫಾನ್ ಅಹ್ಮದ್ ಝರ್ಗರ್ (36 ವರ್ಷ) ಎಂಬಾತನನ್ನು ಆಗಸ್ಟ್ 14ರಂದು ಯುಎಇಯಿಂದ ಗಡೀಪಾರು ಮಾಡಲಾಗಿದೆ. ಆತನನ್ನು ರಾಷ್ಟ್ರೀಯ ತನಿಖಾ ಸಮಿತಿ ಸೇರಿದಂತೆ ಹಲವು ಭದ್ರತಾ ಏಜೆನ್ಸಿಗಳು ತನಿಖೆ ನಡೆಸಿದ ಬಳಿಕ ಜಮ್ಮು ಕಾಶ್ಮೀರದ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಆದರೆ ಆತನ ವಿರುದ್ಧ ಕಾಶ್ಮೀರ ರಾಜ್ಯದಲ್ಲಿ ಯಾವುದೇ ಪ್ರಕರಣದ ವಿಚಾರಣೆ ಬಾಕಿಯಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಇರ್ಫಾನ್ ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯನಾಗಿದ್ದ ಮತ್ತು ಸಿರಿಯಾದಲ್ಲಿ ಐಸಿಸ್ ಸಂಘಟನೆ ನಡೆಸುತ್ತಿದ್ದ ಕಾರ್ಯಗಳನ್ನು ಶ್ಲಾಘಿಸುತ್ತಿದ್ದ. ಈತನನ್ನು ಒಮಾನ್ ಮೂಲಕ ಯುಎಇ ಪ್ರವೇಶಿಸುವ ಪ್ರಯತ್ನದಲ್ಲಿದ್ದಾಗ ದುಬೈಯಲ್ಲಿ ಈ ವರ್ಷದ ಎಪ್ರಿಲ್ 28ರಂದು ಅಧಿಕಾರಿಗಳು ಬಂಧಿಸಿದ್ದರು. ದುಬೈಯಲ್ಲಿ ಟೆಲಿಕಾಂ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ತಾನು ಕರಕುಶಲ ವಸ್ತುಗಳ ಉದ್ಯಮವನ್ನು ಒಮಾನ್‌ನಲ್ಲಿ ಆರಂಭಿಸಲು ಅಲ್ಲಿಗೆ ತೆರಳಿದ್ದೆ ಎಂದು ಇರ್ಫಾನ್ ಹೇಳಿಕೆ ನೀಡಿದ್ದ.

ಬಳಿಕ ಆತ ವಾಸವಿದ್ದ ಶಾರ್ಜಾದ ಅಪಾರ್ಟ್‌ಮೆಂಟ್‌ನಲ್ಲಿ ಪೊಲೀಸರು ವ್ಯಾಪಕ ಶೋಧ ನಡೆಸಿ ಆತನನ್ನು ಹೆಚ್ಚಿನ ವಿಚಾರಣೆಗಾಗಿ ರಹಸ್ಯ ಪ್ರದೇಶಕ್ಕೆ ಕರೆದೊಯ್ದಿದ್ದರು.

ಈ ಮಧ್ಯೆ, ಇರ್ಫಾನ್ ಪ್ರಕರಣದಲ್ಲಿ ಸಹಾಯ ಮಾಡುವಂತೆ ಆತನ ಸಂಬಂಧಿಕರು ವಿದೇಶ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್‌ಗೆ ಟ್ವಿಟರ್‌ನಲ್ಲಿ ಕೋರಿಕೆ ಸಲ್ಲಿಸಿದ್ದರು. ಕೋರಿಕೆಯನ್ನು ಪುರಸ್ಕರಿಸಿದ್ದ ಸುಷ್ಮಾ, ಇರ್ಫಾನ್‌ರನ್ನು ಪತ್ತೆ ಹಚ್ಚುವಂತೆ ದುಬೈಯಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಗೆ ಸೂಚಿಸಿದ್ದರು. ಆದರೆ ತಮ್ಮ ವಿಚಾರಣೆ ಮುಗಿಯುವವರೆಗೆ ಇರ್ಫಾನ್ ಬಗ್ಗೆ ಯಾವುದೇ ಮಾಹಿತಿ ನೀಡುವುದಿಲ್ಲ ಎಂದು ದುಬಾಯಿಯ ಅಧಿಕಾರಿಗಳು ತಿಳಿಸಿದ್ದರು. ಆತನನ್ನು ಆಗಸ್ಟ್ 14ರಂದು ಭಾರತಕ್ಕೆ ಗಡೀಪಾರು ಮಾಡಲಾಗಿದೆ. ಭಯೋತ್ಪಾದಕ ತಂಡಗಳ ಬಗ್ಗೆ ಸಹಾನುಭೂತಿ ಹೊಂದಿರುವ ಕಾರಣಕ್ಕೆ ಗಡೀಪಾರು ಮಾಡಲ್ಪಟ್ಟಿರುವ ಮೂರನೇ ಕಾಶ್ಮೀರ ಪ್ರಜೆಯಾಗಿದ್ದಾನೆ ಇರ್ಫಾನ್. ಮೇ 25ರಂದು ಅಫ್ಶಾನ್ ಪರ್ವೇಝ್ ಎಂಬಾತನನ್ನು ಟರ್ಕಿಯ ರಾಜಧಾನಿ ಅಂಕಾರದಿಂದ ಹಾಗೂ ಮಾರ್ಚ್ 23ರಂದು ಅಝರುಲ್ ಇಸ್ಲಾಂ ಎಂಬಾತನನ್ನು ಯುಎಇಯಿಂದ ಗಡೀಪಾರು ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X