Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂತ್ರಸ್ತರಿಗೆ ದಾವಣಗೆರೆ ಸಹಕಾರ...

ಸಂತ್ರಸ್ತರಿಗೆ ದಾವಣಗೆರೆ ಸಹಕಾರ ಬ್ಯಾಂಕ್‌ಗಳ ಒಕ್ಕೂಟದಿಂದ 1 ಕೋ. ರೂ. ನೆರವು

ಒಕ್ಕೂಟದ ಗೌರವ ಅಧ್ಯಕ್ಷ, ಶಾಸಕ ಡಾ. ಶಾಮನೂರು ಶಿವಶಂಕರಪ್ಪ

ವಾರ್ತಾಭಾರತಿವಾರ್ತಾಭಾರತಿ19 Aug 2018 11:51 PM IST
share
ಸಂತ್ರಸ್ತರಿಗೆ ದಾವಣಗೆರೆ ಸಹಕಾರ ಬ್ಯಾಂಕ್‌ಗಳ ಒಕ್ಕೂಟದಿಂದ 1 ಕೋ. ರೂ. ನೆರವು

ದಾವಣಗೆರೆ, ಆ.19: ಕೇರಳ ರಾಜ್ಯ ಮತ್ತು ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಸಾಕಷ್ಟು ನಷ್ಟವುಂಟಾಗಿದ್ದು, ಸಂತ್ರಸ್ತರಿಗೆ ನೆರವಾಗುವ ದೃಷ್ಟಿಯಿಂದ ದಾವಣಗೆರೆ ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕ್‌ಗಳ ಒಕ್ಕೂಟದಿಂದ 1 ಕೋಟಿ ರೂ.ನ್ನು ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ಒಕ್ಕೂಟದ ಗೌರವ ಅಧ್ಯಕ್ಷ, ಶಾಸಕ ಡಾ. ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ. ಒಕ್ಕೂಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಕೇರಳ ರಾಜ್ಯ ಮತ್ತು ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಸಾಕಷ್ಟು ಸಾವು-ನೋವುಗಳಾಗಿದ್ದು, ಇದಕ್ಕೆ ಪರಿಹಾರವಾಗಿ ಈಗಾಗಲೇ ಸಾಕಷ್ಟು ಜನತೆಗೆ ಸಹಾಯ ಹಸ್ತ ಚಾಚಿದ್ದು, ಈ ನಿಟ್ಟಿನಲ್ಲಿ ನಾವು ಕೂಡ ಒಕ್ಕೂಟದ ವತಿಯಿಂದ ತಲಾ 50 ಲಕ್ಷ ರೂ.ನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ನೀಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಈ ಹಿಂದೆಯೂ ಸಹ ಒಕ್ಕೂಟದಿಂದ ಭೂಕಂಪ, ಕಾರ್ಗಿಲ್ ಯುದ್ಧ ಹಾಗೂ ಪ್ರಕೃತಿ ವಿಕೋಪಗಳು ನಡೆದ ವೇಳೆ ನೆರವು ನೀಡಲಾಗಿದ್ದು, ಇದೀಗ1 ಕೋ. ನೀಡುತ್ತಿದ್ದೇವೆ ಎಂದರು.

ವೈಯಕ್ತಿಕವಾಗಿ 25 ಲಕ್ಷ ರೂ.: ಒಕ್ಕೂಟದಿಂದ 1 ಕೋಟಿ ರೂ. ನೀಡುವುದರ ಜೊತೆಗೆ ತಮ್ಮ ವೈಯಕ್ತಿಕವಾಗಿ 25 ಲಕ್ಷ ರೂ.ನ್ನು ನೀಡುವುದಾಗಿ ಡಾ. ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಇದೇ ವೇಳೆ ಒಕ್ಕೂಟದ ಗೌರವ ಕಾರ್ಯದರ್ಶಿಗಳನ್ನಾಗಿ ಎನ್‌ಎಂಜೆಬಿ ಮುರುಗೇಶ್ ಅವರನ್ನು ಅವಿರೋಧವಾಗಿ ನೇಮಿಸಲಾಯಿತು. ಈ ಹಿಂದೆ ಒಕ್ಕೂಟದ ಗೌರವ ಕಾರ್ಯದರ್ಶಿಗಳಾಗಿದ್ದ ಎನ್‌ಎಂಜೆಬಿ ಆರಾಧ್ಯ ಅವರ ನಿಧನದಿಂದ ಸ್ಥಾನ ತೆರವಾಗಿತ್ತು. ಈ ಸಭೆಯಲ್ಲಿ ಒಕ್ಕೂಟದ ಕಾರ್ಯಾಧ್ಯಕ್ಷ ಬಿ.ಸಿ. ಉಮಾಪತಿ, ನೂತನ ಗೌರವ ಕಾರ್ಯದರ್ಶಿ ಎನ್‌ಎಂಜೆಬಿ ಮುರುಗೇಶ್, ಸದಸ್ಯರಾದ ಎಸ್.ಎಸ್.ಮಲ್ಲಿಕಾರ್ಜುನ್, ಕೋಗುಂಡಿ ಬಕ್ಕೇಶಪ್ಪ, ಕಿರುವಾಡಿ ಸೋಮಶೇಖರ್, ಎನ್.ಜೆ.ಗುರುಸಿದ್ದಯ್ಯ, ಆರ್.ಎಲ್.ಪ್ರಭಾಕರ್, ಕುರ್ಕಿ ಕುಬೇರಪ್ಪ, ರಮಣ್ ಲಾಲ್, ಆರ್.ಜಿ.ಶ್ರೀನಿವಾಸ ಮೂರ್ತಿ, ಸಿ.ಚಂದ್ರಶೇಖರ್, ಬಿ.ಎಲ್.ಗೌಡ, ನಿರಂಜನ್ ನಿಶಾನಿಮಠ, ಜ್ಯೋತಿ ಪ್ರಕಾಶ್, ಡಿ.ವಿ.ಆರಾಧ್ಯಮಠ, ಅಶೋಕ್ ರಾಯಬಾಗಿ, ಶಿವಶಂಕರ್, ಮಂಜುನಾಥ್,ಎಂ.ಬಸವರಾಜ್ ಮತ್ತಿತರರಿದ್ದರು.

ಒಕ್ಕೂಟದ ಸದಸ್ಯ ಬ್ಯಾಂಕ್‌ಗಳು: ಬಾಪೂಜಿ ಬ್ಯಾಂಕ್, ದಾವಣಗೆರೆ ಅರ್ಬನ್ ಕೋ- ಆಪರೇಟಿವ್ ಬ್ಯಾಂಕ್, ದಾವಣಗೆರೆ ಅರ್ಬನ್ ಕೋ- ಆಪರೇಟಿವ್ ಬ್ಯಾಂಕ್, ಶಿವ ಕೋ- ಆಪರೇಟಿವ್ ಬ್ಯಾಂಕ್, ಕನ್ನಿಕಾ ಪರಮೇಶ್ವರಿ ಕೋ- ಆಪರೇಟಿವ್ ಬ್ಯಾಂಕ್, ಕನಕ ಕೋ- ಆಪರೇಟಿವ್ ಬ್ಯಾಂಕ್, ಸಿಟಿ ಕೋ- ಆಪರೇಟಿವ್ ಬ್ಯಾಂಕ್. ಅಂಭಾಭವಾನಿ ಕೋ- ಆಪರೇಟಿವ್ ಬ್ಯಾಂಕ್, ಮುರುಘರಾಜೇಂದ್ರ ಕೋ- ಆಪರೇಟಿವ್ ಬ್ಯಾಂಕ್,ಮಿಲ್ಲತ್ ಕೋ- ಆಪರೇಟಿವ್ ಬ್ಯಾಂಕ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X