Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ 845 ಮನೆಗಳು, 123...

ಕೊಡಗಿನಲ್ಲಿ 845 ಮನೆಗಳು, 123 ಕಿ.ಮಿ.ರಸ್ತೆಗೆ ಹಾನಿ: ಮುಖ್ಯಮಂತ್ರಿ ಕುಮಾರಸ್ವಾಮಿ

"ಜಿಲ್ಲೆಯಲ್ಲಿ ಮಹಾ ಮಳೆಗೆ 12 ಬಲಿ"

ವಾರ್ತಾಭಾರತಿವಾರ್ತಾಭಾರತಿ20 Aug 2018 7:55 PM IST
share
ಕೊಡಗಿನಲ್ಲಿ 845 ಮನೆಗಳು, 123 ಕಿ.ಮಿ.ರಸ್ತೆಗೆ ಹಾನಿ: ಮುಖ್ಯಮಂತ್ರಿ ಕುಮಾರಸ್ವಾಮಿ

ತಾತ್ಕಾಲಿಕ ಅಲ್ಯುಮಿನಿಯಂ ಶೆಡ್‌ಗಳ ನಿರ್ಮಾಣ

ಬೆಂಗಳೂರು, ಆ.20: ಎರಡು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಗಿದೆ. ಹಲವು ಪ್ರದೇಶಗಳಲ್ಲಿ ಭೂ ಕುಸಿತ ಉಂಟಾಗಿದ್ದು , 12 ಜನ ಮೃತಪಟ್ಟಿದ್ದಾರೆ. ಸುಮಾರು 845 ಮನೆಗಳು ಪೂರ್ಣ ಹಾನಿಗೊಳಗಾಗಿದ್ದು, 773 ಭಾಗಶಃ ಹಾನಿಯಾಗಿದೆ. 123 ಕಿ.ಮೀ.ರಸ್ತೆ, 58 ಸೇತುವೆ, 278 ಸರಕಾರಿ ಕಟ್ಟಡ, 3800 ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ. ಹಲವು ರಸ್ತೆಗಳು ಸಂಪರ್ಕ ಕಡಿತಗೊಂಡಿವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಈವರೆಗೆ 4320 ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ. ನಿನ್ನೆಯಿಂದ ಮಳೆಯ ಭೀಕರತೆ ಸ್ಪಲ್ಪತಗ್ಗಿರುವುದರಿಂದ, ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಲಾಗಿದೆ ಎಂದರು.

ಜಿಲ್ಲಾಡಳಿತ, ಪೊಲೀಸ್ ಇಲಾಖೆ, ರಾಜ್ಯ ಸಶಸ್ತ್ರ ಮೀಸಲು ಪಡೆ, ಭೂ ಸೇನೆ, ವಾಯು ಪಡೆ, ನೌಕಾ ದಳ, ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ (ಎನ್‌ಡಿಆರ್‌ಎಫ್) ತಂಡಗಳು, ರಾಜ್ಯ ಸರಕಾರದ ಕಂದಾಯ ಇಲಾಖೆಯ ಅಧಿಕಾರಿಗಳು, ಎನ್‌ಸಿಸಿ, ನಾಗರಿಕ ರಕ್ಷಣಾ ದಳ, ಗೃಹ ರಕ್ಷಕ ದಳ ಸೇರಿದಂತೆ ಒಟ್ಟು 1725 ವಿಶೇಷ ತರಬೇತಿ ಪಡೆದ ತಜ್ಞರು ಸಮರೋಪಾದಿಯಲ್ಲಿ ಪ್ರತಿ ದಿನ 24 ಗಂಟೆಗಳ ಕಾಲ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ವಾಯುಪಡೆಯ ಎಂ-17 ಹೆಲಿಕಾಪ್ಟರ್ ಹಾರಂಗಿ ಜಲಾಶಯದ ಬಳಿಯಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ಹೇಳಿದರು. ಪ್ರತಿ ದಿನ ಸರಕಾರದ ಮುಖ್ಯ ಕಾರ್ಯದರ್ಶಿಗಳೂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ನಿರಂತರ ಮಾಹಿತಿಯನ್ನು ಒದಗಿಸುತ್ತಿದ್ದಾರೆ. ರಾಷ್ಟ್ರಪತಿ, ಪ್ರಧಾನಮಂತ್ರಿಗಳು, ಕೇಂದ್ರ ರಕ್ಷಣಾ ಸಚಿವರು ದೂರವಾಣಿ ಮೂಲಕ ಮಾತನಾಡಿ, ಪರಿಸ್ಥಿತಿಯ ವಿವರ ಪಡೆದಿದ್ದು, ಅಗತ್ಯ ಸಹಕಾರವನ್ನು ನೀಡಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.

ಇಂದು ಮಧ್ಯಾಹ್ನ ಮುಖ್ಯ ಕಾರ್ಯದರ್ಶಿಗಳು ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪರಿಸ್ಥಿತಿಯ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನಜೀವನ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ, ಜನಜೀವನ ಅಸ್ತವ್ಯಸ್ತಗೊಂಡಿದ್ದು, ಪರಿಹಾರ ಕಾಮಗಾರಿ ರಾಜ್ಯ ಸರಕಾರಕ್ಕೆ ಸವಾಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಡಿಜಿಪಿ ಅಗ್ನಿ ಶಾಮಕ ದಳ, ಇಬ್ಬರು ಎಡಿಜಿಪಿಗಳು, ಇಬ್ಬರು ಅಪರ ಮುಖ್ಯ ಕಾರ್ಯ ದರ್ಶಿಗಳು ಸ್ಥಳದಲ್ಲೇ ಮೊಕ್ಕಾಂ ಮಾಡಿ, ಪರಿಹಾರ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು. ಕೊಡಗಿನ ನೆರೆಯ ಜಿಲ್ಲೆಗಳಾದ ಮೈಸೂರು, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಜಿಲ್ಲಾ ಮಟ್ಟದ ಅಧಿಕಾರಿಗಳು ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೊಬೆಷನರಿ ಐಎಎಸ್ ಅಧಿಕಾರಿಗಳನ್ನು ಕೊಡಗಿಗೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಕೊಡಗು ಜಿಲ್ಲೆಯಲ್ಲಿ 41 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಒಟ್ಟು 6620 ಸಂತ್ರಸ್ತರು ಪರಿಹಾರ ಕೇಂದ್ರದಲ್ಲಿದ್ದಾರೆ. ಅಲ್ಲಿಗೆ ಹಾಲು, ಕುಡಿಯುವ ನೀರು ವ್ಯವಸ್ಥೆಯನ್ನು ಮಾಡಲಾಗಿದೆ. ನೆರವಿಗಾಗಿ ಒದಗಿ ಬರುತ್ತಿರುವ ಪರಿಹಾರ ಸಾಮಗ್ರಿಗಳನ್ನು ಮಡಿಕೇರಿಯಲ್ಲಿರುವ ಎಪಿಎಂಸಿ ಯಾರ್ಡ್‌ನಲ್ಲಿ ಸಂಗ್ರಹಿಸಿ ಪಂಚಾಯತಿಗಳ ಮೂಲಕ ಜನರಿಗೆ ವಿತರಣೆ ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದರು. ಐದು ವಿಶೇಷ ವೈದ್ಯಕೀಯ ತಂಡಗಳು, 10 ಕಂದಾಯ ಅಧಿಕಾರಿಗಳ ತಂಡಗಳನ್ನು ಪರಿಹಾರ ಕಾಮಗಾರಿಗಳಿಗಾಗಿ ನಿಯೋಜಿಸಲಾಗಿದೆ. 60 ಜೆಸಿಬಿಗಳು, 20 ಬೊಲೆರೋ ವಾಹನಗಳು ಕಾರ್ಯನಿರ್ವಹಿಸುತ್ತಿವೆ. ಕೊಡಗು ಜಿಲ್ಲೆಯಲ್ಲಿ ತಕ್ಷಣವೇ ಮುಂದಿನ ಹತ್ತು ದಿನಗಳೊಳಗೆ ಸಂತ್ರಸ್ತರಿಗೆ ತಾತ್ಕಾಲಿಕ ಅಲ್ಯುಮಿನಿಯಂ ಶೆಡ್‌ಗಳನ್ನು ನಿರ್ಮಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕಾಗಿ, ಸ್ಥಳವನ್ನು ಗುರುತಿಸಲಾಗುತ್ತಿದೆ ಎಂದು ಅವರು ಹೇಳಿದರು.

ಕುಶಾಲನಗರದ ಮೂರು ಬಡಾವಣೆಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ನೀರನ್ನು ಹೊರಕ್ಕೆ ಪಂಪ್ ಮಾಡಲು ಬಿಬಿಎಂಪಿ ತಾಂತ್ರಿಕ ತಂಡ ಕೊಡಗಿಗೆ ತೆರಳಿದೆ. ನೆರೆ-ಪ್ರವಾಹದ ಬಳಿಕ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲು ವೈದ್ಯ ಮತ್ತು ವೈದ್ಯೇತರ ಸಿಬ್ಬಂದಿ ಸೇರಿದಂತೆ ಆರೋಗ್ಯ ಇಲಾಖೆಯ ವಿಶೇಷ ಘಟಕಗಳನ್ನು ರೂಪಿಸಿ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ನರೇಗಾ ಯೋಜನೆಯಡಿ ಸ್ಥಳೀಯ ಕೂಲಿ ಕಾರ್ಮಿಕರಿಗೆ ಮಡಿಕೇರಿ, ಕುಶಾಲನಗರ, ಸುಂಟಿಕೊಪ್ಪ, ಸೋಮವಾರಪೇಟೆ ಮುಂತಾದ ಪಟ್ಟಣಗಳಲ್ಲಿ ಬಿದ್ದಿರುವ ತ್ಯಾಜ್ಯವಸ್ತುಗಳ ನಿರ್ಮೂಲನಾ ಕಾಮಗಾರಿಯನ್ನು ವಹಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಈಗಾಗಲೇ ಸರಬರಾಜು ಮಾಡಿರುವ ಪುಸ್ತಕ, ಸಮವಸ್ತ್ರ ಹಾನಿಗೊಳಗಾಗಿರುವುದರಿಂದ ಮತ್ತೊಂದು ಸೆಟ್ ಪುಸ್ತಕ ಮತ್ತು ಸಮವಸ್ತ್ರಗಳನ್ನು ಸರಬರಾಜು ಮಾಡಲು ಸೂಚಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಪರಿಹಾರ ಕೇಂದ್ರಗಳಲ್ಲಿರುವ ಸುಮಾರು 5800 ನೆರೆ ಸಂತ್ರಸ್ತರಿಗೆ ತಕ್ಷಣ ಪರಿಹಾರವಾಗಿ ಪ್ರತಿ ಕುಟುಂಬಕ್ಕೆ 3800 ರೂ.ನೀಡಲು ಸೂಚಿಸಲಾಗಿದೆ. ಹಾಗೂ ಸಂಕಷ್ಟಕ್ಕೊಳಗಾಗಿರುವ 50 ಸಾವಿರ ಕುಟುಂಬಗಳಿಗೆ ತಲಾ 10 ಕೆಜಿ ಅಕ್ಕಿ, 1 ಕೆಜಿ ಸಕ್ಕರೆ, 1 ಕೆಜಿ ತೊಗರಿ ಬೇಳೆ, ಐದು ಲೀಟರ್ ಸೀಮೆ ಎಣ್ಣೆ, ಐದು ಲೀಟರ್ ಪಾಮ್ ಎಣ್ಣೆಯನ್ನು ಪ್ರತಿ ಕುಟುಂಬದ ಮನೆಯ ಬಾಗಿಲಿಗೆ ತಲುಪಿಸಲು 10 ಮೊಬೈಲ್ ದಿನಸಿ ಸಾಮಗ್ರಿಗಳ ವಿತರಣಾ ಘಟಕಗಳನ್ನು ಪ್ರಾರಂಭಿಸಲು ಸೂಚಿಸಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಭಾಗಮಂಡಲ-ನಾಪೊಕ್ಲು-ಅಯ್ಯಂಗೇರಿ, ಸುಳ್ಯ-ಮಡಿಕೇರಿ ನಡುವಿನ ಸಂಪರ್ಕ ರಸ್ತೆಯಲ್ಲಿ ಹಲವೆಡೆ ಮಣ್ಣು ಕುಸಿತ ಉಂಟಾಗಿದ್ದು, ಲೋಕೋಪಯೋಗಿ ಇಲಾಖೆ ರಸ್ತೆ ದುರಸ್ತಿಗೊಳಿಸಲು ಕ್ರಮ ಕೈಗೊಂಡಿದೆ. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಾಗಿರುವ ಅಡೆತಡೆಗಳನ್ನು ಸರಿಪಡಿಸಲು ಕೆಪಿಟಿಸಿಎಲ್, ಚೆಸ್ಕಾಂ ವಿಶೇಷ ತಂಡವನ್ನು ರವಾನಿಸಿದೆ ಎಂದು ಅವರು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಶಾಲಾ ಮಕ್ಕಳಿಗೆ ಕಳೆದ ಮೂರು ತಿಂಗಳಿನಲ್ಲಿ ಇಪ್ಪತ್ತು ದಿನ ರಜೆ ಇದ್ದುದರಿಂದ, ವಿಶೇಷ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಿ, ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆಯನ್ನು ಸ್ಥಗಿತಗೊಳಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ನಷ್ಟದ ಅಂದಾಜು ಪಟ್ಟಿಯನ್ನು ತಯಾರಿಸಲು ಹಾಗೂ ಮನೆಗಳನ್ನು ಕಟ್ಟುವ ಕಾರ್ಯದ ಮೇಲ್ವಿಚಾರಣೆ ಮಾಡಲು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ರಾಜ್ಯದಲ್ಲಿನ ಪ್ರಕೃತಿ ವಿಕೋಪ/ಅತಿವೃಷ್ಟಿಯಲ್ಲಿ ನೊಂದ ಸಂತ್ರಸ್ತರಿಗೆ ಸಹಾಯ ಮಾಡುವ ದಾನಿಗಳು, ‘ಮುಖ್ಯಮಂತ್ರಿಯವರ ಪರಿಹಾರ ನಿಧಿ’ ಖಾತೆಗೆ ದೇಣಿಗೆ ಸಲ್ಲಿಸಬಹುದು. ಖಾತೆಯ ಹೆಸರು: ಮುಖ್ಯಮಂತ್ರಿಯವರ ಪರಿಹಾರ ನಿಧಿ ಪ್ರಕೃತಿ ವಿಕೋಪ 2018, ಬ್ಯಾಂಕ್ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಶಾಖೆ: ವಿಧಾನಸೌಧ, ಖಾತೆ ಸಂಖ್ಯೆ: 37887098605, ಐಎಫ್‌ಎಸ್‌ಸಿ ಕೋಡ್: SBIN 0040277, ಎಂಐಸಿಆರ್ ಸಂಖ್ಯೆ: 560002419. ಈ ರೀತಿ ಸಲ್ಲಿಸುವ ದೇಣಿಗೆಗೆ ಆದಾಯ ತೆರಿಗೆ ಕಾಯ್ದೆ 80-ಜಿ ಅಡಿ ಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X